ತಂದೆಯ 3 ಕೋಟಿ ಆಸ್ತಿ ಹಂಚಿ ಕೊಂಡು, ಅವರನ್ನು ಬೀದಿಗೆ ತಳ್ಳಿದ ಮೂವರು ಪೋತುಗಳ ಕತೆ ಏನಾಯಿತು ನೋಡಿ !

Sunday, August 9th, 2020
Mallayya

ಹೈದರಾಬಾದ್: ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ  ಅವರ  ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ. ಕೊನೆಗೆ ಅಣ್ಣತಮ್ಮಂದಿರು  ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ  ಅವರ ಗತಿ ಏನಾಯಿತು ನೋಡಿ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ […]

ಡೆತ್ ನೋಟಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ವಿಷ ಸೇವಿಸಿದ ಯುವತಿ

Thursday, July 23rd, 2020
uma

ತೆಲಂಗಾಣ : ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದವನನ್ನು ಪ್ರೀತಿಸಿ ನಂತರ ಮದುವೆ ಮಾಡಿಕೊ ಎಂದಿದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಪೋಥರಂ ಗ್ರಾಮದ 19 ವರ್ಷದ ಯುವತಿ ಉಮಾ ಎಂಬ ಹುಡುಗಿ ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದ ರಂಜಿತ್ ಎಂಬ ಯುವಕನ ಪ್ರೇಮಕ್ಕೆ ಬಿದ್ದಿದ್ದಾಳೆ. ಆತನೂ ಇವಳನ್ನು ಪ್ರೀತಿಸುವುದಾಗಿ ಹೇಳಿದ್ದು, ಅದನ್ನು ಉಮಾ ನಂಬಿದ್ದಾಳೆ. ಈ ಬಗ್ಗೆ ಅರಿವು ಇಲ್ಲದಿದ್ದ ಉಮಾ ಪಾಲಕರು ಮಗಳಿಗೆ ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಮನೆಯವರಿಗೆ […]

ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲು ತೆಲಂಗಾಣ ಸರ್ಕಾರ ನಿರ್ಧಾರ

Monday, February 17th, 2020
CAA

ನವದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ತೆಲಂಗಾಣ ಸರ್ಕಾರವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುವುದಾಗಿ ಸಿಎಂ ಚಂದ್ರಶೇಖರ್ ರಾವ್ ಕಳೆದ ತಿಂಗಳು ಹೇಳಿದ್ದರು. ಕೇರಳ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ […]

ಇಂದು ಕೆಸಿಆರ್​ಗೆ ಪಟ್ಟಾಭಿಷೇಕ… ಎರಡನೇ ಬಾರಿ ಸಿಎಂ ಆಗಿ ಪ್ರಮಾಣವಚನ

Thursday, December 13th, 2018
chandrashekar-rao

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾಣೆಯಲ್ಲಿ ದಿಗ್ವಿಜಯ ಸಾಧಿಸಿರುವ ಕೆ. ಚಂದ್ರಶೇಖರ ರಾವ್ ಅವರು ಇಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ಅವಧಿಗೆ ಮುನ್ನ ವಿಧಾನಸಭೆ ವಿಸರ್ಜಿಸಿಯೂ ತೆಲಂಗಾಣದಲ್ಲಿ ಬಹುಮತ ಪಡೆದ ಏಕೈಕ ಪಕ್ಷವಾಗಿ ಟಿಆರ್ಎಸ್ ಇತಿಹಾಸ ನಿರ್ಮಿಸಿದೆ. ರಾಷ್ಟ್ರೀಯ ನಾಯಕರಿಗೆ ಸೆಡ್ಡು ಹೊಡೆದು, ಜಯ ಸಾಧಿಸಿರುವ ಕೆಸಿಆರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಸಮಾರಂಭದಲ್ಲಿ ಕೆಸಿಆರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಜೊತೆ ಮತ್ತಿಬ್ಬರು ಸಚಿವರು ಪ್ರಮಾಣವಚನ ಸ್ವೀಕರಿಸುವ […]

ಕಿರಣ್‌ ಕುಮಾರ್‌ ರೆಡ್ಡಿ ಹೊಸ ಪಕ್ಷ

Friday, March 7th, 2014
Kiran-Kumar-Reddy

ನವದೆಹಲಿ: ತೆಲಂಗಾಣ ವಿಭಜನೆ ಖಂಡಿಸಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಿರಣ್‌ ಕುಮಾರ್‌ ರೆಡ್ಡಿ ಸಿಂಮಾಧ್ರ ಪ್ರದೇಶದಲ್ಲಿ ಹೊಸ ಪಕ್ಷ ರಚಿಸುವುದಾಗಿ ಗುರುವಾರ ತಿಳಿಸಿದ್ದಾರೆ. ರಾಜಮಹೇಂದ್ರಿಯಲ್ಲಿ ಮಾರ್ಚ್‌ 12ರಂದು ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ನೂತನ ಪಕ್ಷದ ನೀತಿ ನಿರ್ಧಾರಗಳು ಹಾಗೂ ಕಾರ್ಯಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಕಿರಣ್‌ ಕುಮಾರ್‌ ಹೇಳಿದ್ದಾರೆ. ಆಂಧ್ರಪ್ರದೇಶದ ವಿಭಜನೆಯನ್ನು ವಿರೋಧಿಸಿ ಕಿರಣ್‌ ಕುಮಾರ್‌ ರೆಡ್ಡಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲದೇ ಕಾಂಗ್ರೆಸ್‌ ಪಕ್ಷವನ್ನೂ ತ್ಯಜಿಸಿದ್ದರು. ಕಿರಣ್‌ ಕುಮಾರ್‌ಗೆ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆಗೊಂಡಿದ್ದ […]

ಆಂಧ್ರ ವಿಭಜನೆ ಅಧಿಕೃತ, ಜೂ.2 ತೆಲಂಗಾಣ ಉದಯ ದಿನ

Wednesday, March 5th, 2014
Sampath

ನವದೆಹಲಿ: ತೆಲಂಗಾಣ ರಾಜ್ಯ ರಚನೆ ಈಗ ಅಧಿಕೃತವಾಗಿದ್ದು, ಜೂ.2 ತೆಲಂಗಾಣ ಉದಯ ದಿನ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರೊಂದಿಗೆ ಭಾರತದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ತೆಲಂಗಾಣ ರಾಜ್ಯ ರಚನೆ ಮಸೂದೆ ರಾಜ್ಯಸಭೆಯಲ್ಲಿ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ, ಮಾರ್ಚ್ 1ರಂದು ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ್ದರು. ಇದಾದ ಬಳಿಕ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವಾಲಯ, ಆಂಧ್ರಪ್ರದೇಶ ವಿಭಜನೆ ಕಾಯ್ದೆ 2014ರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಜೂನ್ 2 ತೆಲಂಗಾಣ ದಿನವನ್ನಾಗಿ ಘೋಷಿಸಿದೆ. […]

ಕಾಂಗ್ರೆಸ್‌ನಲ್ಲಿ ವಿಲೀನ ಇಲ್ಲ: ಕೆಸಿಆರ್ ಹೇಳಿಕೆ

Tuesday, March 4th, 2014
Candrasekhara-Rao

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗುವುದಿಲ್ಲ ಎಂದು ಟಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರರಾವ್ ಅವರು ಹೇಳಿದ್ದಾರೆ. ಹೈದರಾಬಾದ್ ನಲ್ಲಿ ಮಾತನಾಡಿದ ಕೆಸಿಆರ್, ತೆಲಂಗಾಣ ರಾಜ್ಯ ರಚನೆ ನಂತರ ಟಿಆರ್‌ಎಸ್ ಕಾಂಗ್ರೆಸ್ ಪಕ್ಷದಲ್ಲಿ ವಿಲೀನವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗಲು ಉತ್ಸುಕತೆ ತೋರಿದ್ದ ಕೆಸಿಆರ್ ಅವರು, ಪಕ್ಷದಲ್ಲಿನ ಭಿನ್ನಮತ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಯಿಂದಾಗಿ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ. ಟಿಆರ್‌ಎಸ್ ಪಕ್ಷದ ವಿರುದ್ಧ ರೆಬೆಲ್ ಆಗಿದ್ದ ಶಾಸಕರನ್ನು ಕಾಂಗ್ರೆಸ್ ನಾಯಕರು ತಮ್ಮ […]

ತೆಲಂಗಾಣ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ

Saturday, March 1st, 2014
Pranab-Mukherjee

ನವದೆಹಲಿ: ಆಂಧ್ರ ಪ್ರದೇಶವನ್ನು ವಿಭಜಿಸಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಕಲಾಪಗಳಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದ ನೂತನ ತೆಲಂಗಾಣ ರಾಜ್ಯ ರಚನೆ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ಅಧಿಕೃತವಾಗಿ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ಫೆಬ್ರವರಿ 18ರಂದು ನಡೆದ ಲೋಕಸಭೆ ಕಲಾಪದಲ್ಲಿ ಅನುಮೋದನೆ ಪಡೆದಿದ್ದ ವಿಧೇಯಕಕ್ಕೆ ಕೊಂಚ ತಡವಾಗಿ ರಾಜ್ಯಸಭೆಯಲ್ಲಿ ಅಂಗೀಕಾರ ನೀಡಲಾಗಿತ್ತು. ಸೀಮಾಂಧ್ರ ಸಂಸದರ […]

ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

Friday, February 21st, 2014
ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

ನವದೆಹಲಿ: ದೇಶಕ್ಕೆ ಇನ್ನೊಂದು ರಾಜ್ಯದ ಸಂತಸ. 29ನೇ ರಾಜ್ಯವಾಗಿ ತೆಲಂಗಾಣ ಉದಯಕ್ಕೆ ಗುರುವಾರ ರಾಜ್ಯಸಭೆ ಸಾಕ್ಷಿಯಾಯಿತು. ಮಂಗಳವಾರವಷ್ಟೇ ಲೋಕಸಭೆಯಲ್ಲಿ ತೆಲಂಗಾಣ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಎರಡು ದಿನಗಳ ಹಗ್ಗಜಗ್ಗಾಟದ ನಡುವೆ ಗುರುವಾರ ರಾತ್ರಿ 08.07 ಗಂಟೆಗೆ ಹೊಸ ರಾಜ್ಯದ ಉದಯವಾಯಿತು. ಆದರೆ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಬೇಕು. ಆಗಷ್ಟೇ ಈ ರಾಜ್ಯ ಉದಯವಾಗಿದೆ ಎಂಬುದು ಅಧಿಕೃತವಾಗುತ್ತದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆದರೂ ಕೂಡ, ಮಸೂದೆಗೆ ಬೆಂಬಲ ನೀಡುತ್ತೇವೆ ಎಂಬ […]

ಹಿರಿಯರ ಮನೆ ಮಾನ ಮುಕ್ಕು

Thursday, February 20th, 2014
Rajya-Sabha

ನವದೆಹಲಿ: ಸದನದ ಬಾವಿಯಲ್ಲಿ ಗದ್ದಲ, ಘೋಷಣೆ, ರಾಜ್ಯಸಭೆ ಸೆಕ್ರೆಟರಿ ಜನರಲ್ ಶಂಷೇರ್ ಕೆ. ಶರೀಫ್‌ರಿಂದ ಬಲವಂತವಾಗಿ ಕಾಗದಪತ್ರ ಕಿತ್ತುಕೊಳ್ಳಲು ಯತ್ನ, ಉಪಸಭಾಪತಿಗಳಿಗೇ ಗದರಿದ ಸಂಸದರು, ಮೂರು ಬಾರಿ ಮುಂದೂಡಲ್ಪಟ್ಟ ಕಲಾಪ… ಇದು ತೆಲಂಗಾಣ ಮಸೂದೆಗೆ ಸಂಬಂಧಿಸಿ ರಾಜ್ಯಸಭೆಯಲ್ಲಿ ಕಂಡ ಘಟನಾವಳಿಗಳು. ಕೆಳಮನೆಯಲ್ಲಿ ಮಂಗಳವಾರವಷ್ಟೇ ನಾಟಕೀಯ ರೀತಿಯಲ್ಲಿ ಅಂಗೀಕಾರ ಪಡೆದಿದ್ದ ಮಸೂದೆಯನ್ನು ರಾಜ್ಯಸಭೆಯಲ್ಲಿ ಬುಧವಾರ ಮಂಡಿಸುವ ಸರ್ಕಾರದ ಪ್ರಯತ್ನ ಟಿಡಿಪಿ ಸಂಸದರ ಗದ್ದಲದಿಂದಾಗಿ ವಿಫಲವಾಗಿದೆ. ದಿನದ ಆರಂಭದಿಂದಲೇ ಕಲಾಪವನ್ನು ರಣರಂಗವಾಗಿ ಪರಿವರ್ತಿಸಿದ್ದ ಟಿಡಿಪಿ ಸಂಸದರು ಸದನದ ಬಾವಿಗೆ ನುಗ್ಗಿ […]