ಜನಪ್ರತಿನಿಧಿಗಳಿಗೆ ಮಗ್ಗುಲ ಮುಳ್ಳಾಗಲಿದಿಯೇ ಎತ್ತಿನ ಹೊಳೆ?

Monday, December 18th, 2017
janaprathinidi

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ.ಒಂದೆಡೆ ರಥಯಾತ್ರೆಗಳು ಆರಂಭವಾದರೆ ಇನ್ನೊಂಡೆದಡೆ ಪಾದಯಾತ್ರೆಗಳಿಗೆ ಚಾಲನೆ ನೀಡಲಾಗಿದೆ.ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯ ಎತ್ತಿನಹೊಳೆ ಯೋಜನೆ ಹೋರಾಟ ಮುಂಬರು ಚುನಾವಣೆಯ ಪ್ರಮುಖ ವಿಷಯವಾಗಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ಆರಂಭಗೊಂಡಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರು ದುಮುಕಲು ಮುಂದಾಗಿದ್ದಾರೆ.ಬಯಲು ಸೀಮೆಗೆ ನೀರುಣಿಸುವ ಉದ್ದೇಶಹೊಂದಿರುವ ಎತ್ತಿನಹೊಳೆ ಯೋಜನೆ ವಿವಾದದ ಮೂಲ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಎತ್ತಿನಹೊಳೆ ಹೋರಾಟಗಾರರು ಚುನಾವಣೆಗೆ ಸ್ಪರ್ದಿಸಲು ಮುಂದಾಗಿದ್ದಾರೆ. ಕರಾವಳಿಯನ್ನೇ […]