ನರಿಂಗಾನ ಗ್ರಾಮದ ಮರೀಕಳದ ಕಸಾಯಿಖಾನೆಗೆ ಅಕ್ರಮ ದನ ಸಾಗಾಟ, ಒಬ್ಬ ಆರೋಪಿಯನ್ನು ಬಿಟ್ಟ ಪೊಲೀಸರು – ಬಜರಂಗದಳ ಖಂಡನೆ

Friday, September 17th, 2021
Marikkala

ಮಂಗಳೂರು :  ಮುಡಿಪು ಸಮೀಪದ ನರಿಂಗಾನ ಗ್ರಾಮದ ಮೊಂಟೆಪದವು ಸರಕಾರೀ ಶಾಲೆ ಸಮೀಪ ದ ಮರೀಕಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನು ಹಾಗು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು ಕಾಣದ ಕೈಗಳ ಪ್ರಭಾವದಿಂದ ಒಬ್ಬ ಆರೋಪಿಯನ್ನು ಕೇಸು ದಾಖಲಿಸದೆ ಬಿಟ್ಟಿರುವ ಪೊಲೀಸ್ ಇಲಾಖೆಯ ಈ ಕೃತ್ಯ ಖಂಡನೀಯ ಎಂದು ಬಜರಂಗದಳ  ಹೇಳಿದೆ. ನರಿಂಗಾನ ಗ್ರಾಮದ ಮರೀಕಳದಲ್ಲಿ ನಿರಂತರವಾಗಿ ದನಗಳನ್ನು ವಧೆಗೋಸ್ಕರ ಪಿಕ್ ಅಪ್ ವಾಹನ ಸಂಖ್ಯೆ KA 18 8539 ದಲ್ಲಿ ಕಾನೂನು ಬಾಹಿರವಾಗಿ ಸಾಗಿಸುತ್ತಿರುವ ಮಾಹಿತಿ ಪ್ರಕಾರ ಈ ವಾಹನದಲ್ಲಿ […]

ದನ ಕಟ್ಟುವ ವಿಷಯದಲ್ಲಿ ತಂದೆಯಿಂದ ಪೆಟ್ರೋಲ್ ದಾಳಿಗೊಳಗಾಗಿದ್ದ ಮಗ ಸಾವು

Thursday, July 1st, 2021
Vishwanath-Shetty

ಮಂಗಳೂರು : ದನ ಕಟ್ಟುವ ವಿಷಯದಲ್ಲಿ ಉಂಟಾದ ಜಗಳದಲ್ಲಿ ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವಾಮಿತ್ ಶೆಟ್ಟಿ (25) ಜು.01 ರ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೆಪ್ಪಿನಮೊಗರು ತಾರ್ದೊಲ್ಯದ ದನ ಕಟ್ಟುವ ವಿಷಯದಲ್ಲಿ ತಂದೆಯೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಆರೋಪಿ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಘಟನೆ ನಡೆದಂದೇ ಮಂಗಳೂರು ಗ್ರಾಮಾಂತರ ಪೊಲೀಸರು […]

ದನವನ್ನು ಕಳವು ಮಾಡಿ ಮನೆಗೆ ತಂದು ಕಡಿದು 164 ಕೆ.ಜಿ. ಮಾಂಸ ಮಾಡಿದ ದನ ಕಳ್ಳರು

Saturday, April 10th, 2021
cow thieves

ಮಂಗಳೂರು  : ದನವನ್ನು ಕಳವು ಮಾಡಿ ತಂದು ಅಕ್ರಮವಾಗಿ ಕಡಿದು ಮಾಂಸಮಾಡಿದ ಘಟನೆ  ಅಡ್ಡೂರು ಸಮೀಪ ಮನೆಯೊಂದರಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಡ್ಡೂರು ಪಾಂಡೇಲು ಗದ್ದೆ ಮನೆಯ ಮೊಹಮ್ಮದ್ ಎಂಬವರ ಮಗ  ಅಬ್ದುಲ್ ಮಜೀದ್ ಕಕ್ಕೆ, ಪ್ರಾಯ:35 ವರ್ಷ ಮತ್ತು  ಪಿ. ಮುಸ್ತಾಪ, ಪ್ರಾಯ: 30 ವರ್ಷ, ಈ ಇಬ್ಬರು ದನವನ್ನು ಕದ್ದು ತಂದು  ಕಡಿದು 164 ಕೆ.ಜಿ. ಮಾಂಸ ಮಾಡಿದ್ದರು. ಖಚಿತ ಮಾಹಿತಿ ತಿಳಿದ  ಬಜಪೆ ಠಾಣಾ ಪಿಎಸ್ಐ ಪೂವಪ್ಪ ರವರ ನೇತ್ರತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, 2 ಜನ ಆರೋಪಿ ಸಮೇತ ಮಾರಾಟ ಮಾಡಲು ತಯಾರು […]

ದನ ಮೇಯಿಸಲು ತೆರಳಿದ್ದ ಬಾಲಕನನ್ನು ತಿಂದು ಹಾಕಿದ ಮೊಸಳೆ

Thursday, December 3rd, 2020
ದನ ಮೇಯಿಸಲು ತೆರಳಿದ್ದ ಬಾಲಕನನ್ನು ತಿಂದು ಹಾಕಿದ ಮೊಸಳೆ

ರಾಯಚೂರು: ದನ ಮೇಯಿಸಲು ತೆರಳಿದ್ದ ಬಾಲಕ ನೀರು ಕುಡಿಯಲು ಕೃಷ್ಣಾ ನದಿಗೆ ಇಳಿದಿದ್ದಾಗ  ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ. ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣಾ ನದಿಯಲ್ಲಿ ನೀರು‌ ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ ವೇಳೆ ಬಾಲಕನನ್ನು ಎಳೆದೊಯ್ದ ಮೊಸಳೆ ದೇಹವನ್ನ ಸಂಪೂರ್ಣವಾಗಿ ತಿಂದು ತಲೆ ಬುರುಡೆ […]

ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚನೆ, 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್ : ವಿಕಾಸ್‌ ಕುಮಾರ್

Tuesday, October 27th, 2020
Ujjodi Cow

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದ್ದು, ಇಲ್ಲಿಯವರೆಗೆ 28 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ. ದನ ಕಳವು, ಅಕ್ರಮ ದನ ಸಾಗಾಟ ಮತ್ತು ಅಕ್ರಮ ದನಗಳ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದೆ. ನಗರಕ್ಕೆ […]

ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ

Thursday, July 11th, 2013
leopard

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮದ ಅಂಗಡಿ ಪಲ್ಕೆ ಕುಲಾಲು ಎಂಬಲ್ಲಿ ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮಾಧವ ಎಂಬವರ ಜಮೀನಿಗೆ ದಾಳಿ ಮಾಡುತ್ತಿದ್ದ ಈ ಚಿರತೆ ದನ, ಕರುಗಳನ್ನು ತಿಂದಿತ್ತು. ಇದರಿಂದ ಬೇಸತ್ತ ಮಾಧವ ಅವರು  ಅರಣ್ಯ ಇಲಾಖೆಯ ನೆರವಿನಲ್ಲಿ ಚಿರತೆಗೆ ಬೋನು ಇರಿಸಿದ್ದು, ನಿರೀಕ್ಷೆಯಂತೆ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದಿದೆ. ಚಿರತೆ ಬೋನಿಗೆ ಸಿಕ್ಕಿಬಿದ್ದ ಸುದ್ದಿ ತಿಳಿದು […]