ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಕುಟುಂಬಕ್ಕೆ ಬೆಳಕಾದ ವೇದವ್ಯಾಸ ಕಾಮತ್..!

Wednesday, October 24th, 2018
vedavyas-kamath

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಅಕ್ಷರಶ: ಆ ಕುಟುಂಬಕ್ಕೆ ಬೆಳಕಾಗಿದ್ದಾರೆ. ಮಂಗಳೂರಿನ ಬಿಜೈ ಕಾಪಿಕಾಡ್ ಪರಿಸರದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ವಾಸವಿರುವ ಜಯಮ್ಮ ಎನ್ನುವ ಹಿರಿಯ ಜೀವ ಕಳೆದ ನಲ್ವತ್ತು ವರ್ಷಗಳಿಂದ ವಿದ್ಯುತ್ ಇಲ್ಲದೆ ಚಿಮಣಿ ದೀಪದಲ್ಲಿ ದಿನ ದೂಡುತ್ತಿದ್ದರು. ಈ ವಿಷಯ ಭಾರತೀಯ ಜನತಾ ಪಾರ್ಟಿಯ ಸ್ಥಳೀಯ ಕಾರ್ಯಕರ್ತರಿಂದ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ಬಂತು. ಜಯಮ್ಮ […]

ವಿದ್ಯುತ್ ಲೈನ್​ ಸರಿಪಡಿಸಲು ಹೋಗಿ ಯುವಕ ಸಾವು

Thursday, October 11th, 2018
died

ಮಂಗಳೂರು: ಮನೆಗೆ ವಿದ್ಯುತ್ ಸರಬರಾಜಿನಲ್ಲಿ ಆದ ವ್ಯತ್ಯಯದ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಯತ್ನಿಸುತ್ತಿದ್ದ ವೇಳೆ ವಿದ್ಯುತ್ ಅಘಾತಕ್ಕೊಳಗಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿನ ಕೆದಿಲ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ರಾಮ ಬಂಗೇರ ಎಂಬವರ ಪುತ್ರ ದಯಾನಂದ (30) ಮೃತಪಟ್ಟ ಯುವಕ. ಟೈಲ್ಸ್, ಮಾರ್ಬಲ್, ಗ್ರಾನೈಟ್ ಅಳವಡಿಸುವ ಗಾರೆ ಕಾರ್ಮಿಕರಾಗಿದ್ದ ದಯಾನಂದ, ಕುಕ್ಕಾಜೆಯ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ಅವರು ಮನೆಯ ವಿದ್ಯುತ್ ಸರಬರಾಜಿನಲ್ಲಿ […]

ಪಡೀಲ್‌ನ ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಪ್ರಯಾಣಿಕರಿಂದ ರಕ್ಷಣೆ

Friday, October 27th, 2017
nethravathi

ಮಂಗಳೂರು:ನೇತ್ರಾವತಿ ಸೇತುವೆ ಮೇಲಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿಗೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನಲಾದ ವ್ಯಕ್ತಿಯೋರ್ವನನ್ನು ಪ್ರಯಾಣಿಕಯೋರ್ವರು ರಕ್ಷಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪಡೀಲ್‌ನ ದಯಾನಂದ (43) ಎಂದು ಗುರುತಿಸಲಾಗಿದೆ. ಬಶೀರ್ ಜಪ್ಪು ಎಂಬವರು ಇವರ ರಕ್ಷಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 10ಗಂಟೆಯ ಹೊತ್ತಿಗೆ ದಯಾನಂದ ಅವರು ನೇತ್ರಾವತಿ ನದಿಯ ಸೇತುವೆಯ ಮೇಲೆ ಕುಳಿತು ನೀರಿಗೆ ಹಾರಲು ಯತ್ನಿಸುತ್ತಿದ್ದಾಗ ಅದೇ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಜಪ್ಪುವಿನಿಂದ ಉಳ್ಳಾಲದ ಕಡೆಗೆ ಹೋಗುತ್ತಿದ್ದ ಬಶೀರ್ ವಾಹನವನ್ನು ನಿಲ್ಲಿಸಿ […]