ಕಾಪು ಲೈಟ್‌ಹೌಸ್ ಸಮೀಪ ಸಮುದ್ರ ಮಧ್ಯದಲ್ಲಿ ದರೋಡೆ, ಮೀನುಬಾಕ್ಸ್ ಗಳನ್ನು ದರೋಡೆ ಮಾಡಿದ ಕಳ್ಳರು

Wednesday, January 31st, 2024
kaup

ಪಡುಬಿದ್ರಿ: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಬಂದು, ಮೀನುಗಾರಿಕೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಾಪು ಲೈಟ್‌ಹೌಸ್ ಬಳಿ ಸಮುದ್ರ ಮಧ್ಯೆ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಮೀನುಗಾರರ ಬಳಿಯಿದ್ದ ನಾಲ್ಕು ಮೊಬೈಲ್ ಸಹಿತ ಸೊತ್ತುಗಳನ್ನು ದರೋಡೆ ಮಾಡಿರುವ ಘಟನೆ ಕಾಪು ಲೈಟ್‌ಹೌಸ್ ಸಮೀಪದಲ್ಲಿ ಮಂಗಳವಾರ ನಡೆದಿದೆ. ಆಂಧ್ರ ಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘು ರಾಮಯ್ಯ, ಶಿವರಾಜ್, ಕೆ.ಶೀನು, ಏಳುಮಲೆ, ಚಿನ್ನೋಡು, ರಾಜು ಎಂಬುವರು ಜ. 27ರಂದು ಮಹಮ್ಮದ್ ಮುಸ್ತಫ್ ಬಾಷಾರ ಟ್ರಾಲ್ ಬೋಟ್‌ನಲ್ಲಿ ಮಂಗಳೂರು ಬಂದರಿನಿಂದ […]

ನಾಲ್ಕು ಜನ ದರೋಡೆ ಕೋರರ ತಂಡದಿಂದ ರಾತ್ರಿ ವೇಳೆ ಹೈವೇ ದರೋಡೆ

Friday, July 2nd, 2021
Highway Loot

ಗದಗ : ನಾಲ್ಕು ಜನ ದರೋಡೆ ಕೋರರ ತಂಡವೊಂದು ಹೈವೇ ಪೆಟ್ರೋಲ್ ಬಂಕ್ ಬಳಿ ರಾತ್ರಿ ನಿಲ್ಲಿಸಿದ ವಾಹನಗಳ ಮೇಲೆ ದಾಳಿಮಾಡುತ್ತಿರುವ ಘಟನೆ ಜಿಲ್ಲೆಯ ಮುಂಡರಗಿ ಹೊರವಲಯದಲ್ಲಿ ನಡೆದಿದೆ. ತಡರಾತ್ರಿ ನಿದ್ರೆ ಬರುತ್ತಿದ್ದಂತೆ ಬಂಕ್ ಹಾಗೂ ಡಾಬಾ ಬಳಿ ವಾಹನಗಳನ್ನು ನಿಲ್ಲಿಸಿ ರೆಸ್ಟ್ ಮಡುವ ವೇಳೆ ದಾಳಿ ಮಾಡುತ್ತಿರುವ ದೃಶ್ಯ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯ ಮುಂಡರಗಿ ಹೊರವಲಯದ ವಿರೇಶ್ ಎಂಟರ್ ಪ್ರೈಸಸ್ ಪೆಟ್ರೋಲ್ ಬಂಕ್ ಬಳಿ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜರ್ಕಿನ್ ಹಾಕಿಕೊಂಡು ಮುಖಕ್ಕೆ ಮಂಕಿ ಕ್ಯಾಪ್, ಅಥವಾ ಕರವಸ್ತ್ರ ಕಟ್ಟಿಕೊಂಡು […]

ಮುಂದೆ ಗಲಾಟೆ ನಡೆಯುತ್ತಿದೆ ಎಂದು ಚಿನ್ನಾಭರಣ ದರೋಡೆ ಮಾಡುತ್ತಿದ್ದ ನಾಲ್ವರ ಬಂಧನ

Thursday, October 22nd, 2020
chain snatchers

ಉಡುಪಿ : ಉಡುಪಿ ಡಿಸಿಐಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ  ನಾಲ್ವರು ಅಂತರ್ ‌ರಾಜ್ಯ ಸರ ಕಳವು ಆರೋಪಿಗಳನ್ನು ಪೊಲೀಸರು ಉಡುಪಿ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದ ಬಳಿ ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಆರೋಪಿಗಳು ಕಳವು ಮಾಡುತಿದ್ದರು. ಬಂಧಿತರನ್ನು ಇರಾನಿ ಗ್ಯಾಂಗ್‌ಗೆ ಸೇರಿದ ಅಂತಾರಾಜ್ಯ ವಂಚಕರಾದ ಮಹಾರಾಷ್ಟ್ರ ರಾಜ್ಯದ ಅಹ್ಮದ್‌ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ […]

ಸುರತ್ಕಲ್ ಅಪಾರ್ಟ್‌ಮೆಂಟ್‌ನಲ್ಲಿ ದರೋಡೆ, ನಾಲ್ವರು ಆರೋಪಿಗಳ ಬಂಧನ

Tuesday, September 22nd, 2020
VikasKumar

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ  ಯಾರು ಇಲ್ಲದೆ ಇರುವುದನ್ನು ಗಮನಿಸಿ ಸುರತ್ಕಲ್ ಇಡ್ಯಾದಲ್ಲಿ  ಆಗಸ್ಟ್‌ನಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಪ್ರಮುಖ ಸೂತ್ರಧಾರ ಆರೋಪಿ ಅದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನಿವೃತ್ತ ಸೈನಿಕನಾಗಿದ್ದು, ಪ್ರಕರಣದ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಪ್ರಕರಣದ ಕುರಿತಂತೆ ಮಾಹಿತಿ ನೀಡಿದ ಅವರು, ಆಗಸ್ಟ್ 17ರಂದು ಇಡ್ಯಾ ಗ್ರಾಮದ ಜಾರ್ಡಿನ್ ಅಪಾರ್ಟ್ ಮೆಂಟ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ […]

ತುರ್ತುಸೇವೆ ಪಾಸ್ ಪಡೆದು ಪಿಕಪ್ ವಾಹನ ದಲ್ಲಿ ಅಕ್ರಮ ದನ ಸಾಗಾಟ, ತಡೆದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

Monday, July 20th, 2020
cow smuggler

ಬೆಳ್ತಂಗಡಿ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರನ್ನ ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೆಳ್ತಂಗಡಿಯ ಸುರ್ಯಪಡ್ಪು ಎಂಬಲ್ಲಿ ನಡೆದಿದೆ ನಡೆದಿದೆ. ಆಟೋ ಚಾಲಕ ರಾಜೇಶ್ ಎಂಬವ ಮನೆಯಲ್ಲಿ ಗೋವುಗಳನ್ನು ಸಾಕಿ  ಅವುಗಳನ್ನು ಕಸಾಯಿ ಖಾನೆಗೆ ಮಾರುತ್ತಿದ್ದರು. ಇಂದು ಸಹ  ರಾಜೇಶ್ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರುವನ್ನು ಅಮಾನುಷವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದರು. ಗೋವುಗಳನ್ನು ಪಿಕಪ್ ವಾಹನದಲ್ಲಿ ಕಳುಹಿಸಿ ರಾಜೇಶ್ ಮತ್ತು ಆತನ ಸಹಚರರು ಬೆಂಗಾವಲು ವಾಹನ ಆಲ್ಟೋ ಕಾರಿನಲ್ಲಿಹೋಗುತ್ತಿದ್ದರು. ಸಂಪೂರ್ಣ ಲಾಕ್ ಡೌನ್ ವೇಳೆ […]

ವಾಟ್ಸಾಪ್​ ವಿಡಿಯೋ ಕಾಲ್ ಬಳಸಿ ದರೋಡೆ ಮಾಡುತ್ತಿದ್ದ ಬೆಂಗಳೂರಿನ ಹೈಟೆಕ್ ಕಳ್ಳನ ಬಂಧನ

Tuesday, January 28th, 2020
bengaluru

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಅದಕ್ಕೆ ಪರ್ಯಾಯವಾಗಿ ದರೋಡೆಕೋರರು ಹೊಸ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಅದೇರೀತಿ, ಮೊಬೈಲ್ ತಂತ್ರಜ್ಞಾನವನ್ನು ದರೋಡೆಗೆ ಬಳಕೆ ಮಾಡಿಕೊಳ್ಳುತ್ತಿದ್ದ ಕಳ್ಳರ ಜಾಲವೊಂದನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಕಳ್ಳತನ ಮಾಡಲು ಹೋಗಬೇಕಾದ ಮನೆಯಲ್ಲಿ ಯಾರಾದರೂ ಇದ್ದಾರಾ? ಎಂದು ನೋಡಲು ನಾನಾ ಉಪಾಯಗಳನ್ನು ಕಂಡುಕೊಂಡಿದ್ದ ಮಹಾನಗರಗಳ ಕಳ್ಳರು ಈಗ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ತಡರಾತ್ರಿ ವಿಡಿಯೋ ಕಾಲ್ ಮುಖಾಂತರ […]

ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ದರೋಡೆ ; ಇಬ್ಬರು ಆರೋಪಿಗಳ ಬಂಧನ

Monday, August 12th, 2019
Bengre-accused

ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯನ್ನು ದರೋಡೆ ಮಾಡಿದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬ ಬೆಂಗ್ರೆ ತೌಹೀದ್ ಮಂಜಿಲ್ ನಿವಾಸಿ ಸರ್ಫರಾಜ್ (28) ಹಾಗೂ ಕಸಬ ಬೆಂಗ್ರೆಯ ಸೈಯದ್ ಅಫ್ರಿದ್ ಯಾನೆ ಕುಡಿಯ ಅಪ್ಪಿ (21) ಬಂಧಿತರು ಆರೋಪಿಗಳು. ಆಗಸ್ಟ್ 6 ರಂದು ಆರೋಪಿಗಳು ಬೈಕಂಪಾಡಿಯ ಕಾವೇರಿ ಫೋರ್ಡ್ ಕಂಪೆನಿಯ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರ ಮೊಬೈಲ್ ಹಾಗೂ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದರು. […]

ಆಗುಂಬೆ : ಕಾರಿನಲ್ಲಿ ಬಂದ ಗೂಂಡಾಗಳಿಂದ ಖಾಸಗಿ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ, 20,000 ರೂ ದರೋಡೆ

Tuesday, July 2nd, 2019
Gundas

ಉಡುಪಿ  : ಶಿವಮೊಗ್ಗ ದಿಂದ ಮಂಗಳೂರು ಮಧ್ಯೆ ಸಂಚರಿಸುವ  ಖಾಸಗಿ ಬಸ್ ಸೈಡ್  ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾರಿನಲ್ಲಿದ್ದ ಗೂಂಡಾಗಳು ನಿರ್ವಾಹಕ ಮತ್ತು ಡ್ರೈವರ್ ಮೇಲೆ  ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ  ಆಗುಂಬೆ ಸಮೀಪ  ದ ಸೀತಾನದಿ ಬಳಿ ಭಾನುವಾರ ನಡೆದಿದೆ. ಆಗುಂಬೆ ಘಾಟಿಯಲ್ಲಿ ಸೈಡ್ ಕೊಡುವಷ್ಟು ಸ್ಥಳವಿಲ್ಲ ಆದರೂ ಅರ್ಥ ಮಾಡದ ಗೂಂಡಾಗಳು  ಕುಡಿದ ಮತ್ತಿನಲ್ಲಿ ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕ ನ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ್ದಾರೆ. ಗೂಂಡಾಗಳು ನಡೆಸಿದ ಈ ಎಲ್ಲಾ ಕೃತ್ಯಗಳು ಬಸ್ಸಿನಲ್ಲಿ ಅಳವಡಿಸಿದ ಸಿಸಿ  ಟಿವಿ ಯಲ್ಲಿ […]

ದರೋಡೆಗೆ ಯತ್ನ, ಸಿಸಿಬಿ ಪೊಲೀಸರಿಂದ ಯುವಕರ ಬಂಧನ

Saturday, October 21st, 2017
robbery case

ಮಂಗಳೂರು: ದರೋಡೆಗೆ ಯತ್ನಿಸುತ್ತಿದ್ದರು ಎನ್ನುವ ಆರೋಪದ ಮೇಲೆ 7 ಮಂದಿ ಯುವಕರನ್ನು ಮಂಗಳೂರು ನಗರದ ಬಿಜೈ ಬಿಗ್ ಬಜಾರ್ ಎದುರು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಜೈ ಕಾಪಿಕಾಡ್ ರಸ್ತೆಯಲ್ಲಿರುವ ಬಿಗ್ ಬಜಾರ್ ಎದುರು 3 ಬೈಕ್ ಗಳಲ್ಲಿ ಕೆಲವು ಯುವಕರು ದರೋಡೆಗೆ ಯತ್ನಿಸುತ್ತಿರುವ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 7 ಯುವಕರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾವೂರು ನಿವಾಸಿಗಳಾದ ಪ್ರೀತಂ ಪೂಜಾರಿ(23), ವಿಶಾಲ್ […]

ಕೋಟೆಕಾರು : ಕಲ್ಲು ಎಸೆದು ದರೋಡೆಕೋರನ್ನು ಓಡಿಸಿದ ಬ್ಯಾಂಕ್ ಸಿಬ್ಬಂದಿ

Friday, June 23rd, 2017
Kotekar Bank

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಕೆ.ಸಿ. ರೋಡ್ ಶಾಖೆಯಲ್ಲಿ ಖದೀಮರ ತಂಡವೊಂದು ದರೋಡೆಗೆ ಯತ್ನಿಸಿದಾಗ, ಬ್ಯಾಂಕ್ ಸಿಬ್ಬಂದಿ ದರೋಡೆಕೋರರಿಗೆ ಕಲ್ಲು ಎಸೆದು ಓಡಿಸಿದ ಘಟನೆ ವರದಿಯಾಗಿದೆ. ಇಬ್ಬರು ದರೋಡೆಕೋರರು ಹೆಲ್ಮೆಟ್ ಧರಿಸಿಕೊಂಡು ಬ್ಯಾಂಕ್ ಒಳಗೆ ಅಕ್ರಮವಾಗಿ ಪ್ರವೇಶಿಸಿ ಕರ್ತವ್ಯದಲ್ಲಿದ್ದ ಮೂವರು ಸಿಬ್ಬಂದಿಗಳಿಗೆ ಚೂರಿ ತೋರಿಸಿ ಬೆದರಿಸಿ ಅವರನ್ನು ಶೌಚಾಲಯದೊಳಗೆ ಕೂಡಿ ಹಾಕಿ ಚಿನ್ನಾಭರಣವನ್ನು ದೋಚಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸುಮಾರು 20 ಕೆಜಿ ಚಿನ್ನವನ್ನು ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಸಂದರ್ಭ ಶೌಚಾಲಯದಲ್ಲಿದ್ದ […]