ಬೈಕ್ ಹಾಗೂ ಜೀಪು ನಡುವೆ ಅಪಘಾತ, ವಿದ್ಯಾರ್ಥಿ ಸಾವು

Wednesday, March 23rd, 2022
dharshan

ಸುಳ್ಯ : ಬೈಕ್ ಹಾಗೂ ಜೀಪು ನಡುವೆ ಸಂಭವಿಸಿದ  ಅಪಘಾತದಲ್ಲಿ  ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಮಾ.23 ರಂದು ನಡೆದಿದೆ. ಘಟನೆಯಲ್ಲಿ  ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ನಿವಾಸಿ ಆರ್.ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಹಾಗೂ ಪೆರಾಜೆಯ ನಿವಾಸಿ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂಬ ಇಬ್ಬರು ಬಾಲಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆದು ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಇಬ್ಬರು ಬೈಕಿನಲ್ಲಿ ಮನೆಗೆ ಬರುತ್ತಿದ್ದ […]

ತಂಗಿಯನ್ನು ಪ್ರೀತಿಸಬೇಡ ಅಂದಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ಯುವಕ

Saturday, November 24th, 2018
thirtalli

ತೀರ್ಥಹಳ್ಳಿ : ಜೂನಿಯರ್ ಕಾಲೇಜಿನಲ್ಲಿ ಕಲಿಯುತ್ತಿದ್ದ ತನ್ನ ತಂಗಿಯನ್ನು ಪ್ರೀತಿಸ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಚಾಕುವಿನಿಂದ ಇರಿದ ಘಟನೆ ತೀರ್ಥಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ಬಳಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಹೊಟ್ಟೆಯ ಬಲ ಭಾಗಕ್ಕೆ ಗಂಭೀರ ಗಾಯಗೊಂಡಿರುವ ಬಾಲಕನನ್ನು ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವನನ್ನು ಯಡೇಹಳ್ಳಿ ಕೆರೆಯ ದರ್ಶನ್ ಎಂದು ಗುರುತಿಸಲಾಗಿದ್ದು ಚಾಕು ಇರಿದ ಆರೋಪಿ ಅವಿನ್ ಡಿಸೋಜ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ. ತೀರ್ಥಹಳ್ಳಿ ಜೂನಿಯರ್ ಕಾಲೇಜಿಲ್ಲಿ […]

ದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವ: ನಟ ದರ್ಶನ್ ಚಾಲನೆ

Saturday, October 13th, 2018
darshan

ಚಿತ್ರದುರ್ಗ: ದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದ ಮೊದಲ ಕಾರ್ಯಕ್ರಮ ಸೌಹಾರ್ದ ನಡಿಗೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದರ್ಶನ್ ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೌಹಾರ್ದ ನಡಿಗೆಯನ್ನು ಹಮ್ಮಿಕೊಂಡಿದ್ದು, ಚಾಲನೆ ದೊರೆತ ಬೆನ್ನಲೇ ಜಾಥಾ ನಗರದ ಗಾಂಧಿ ವೃತ್ತದಿಂದ ಆರಂಭವಾಗಿ ನಂತರ ಮುರುಘಾಮಠದವರೆಗೆ ಕೊನೆಗೊಂಡಿತು. ಈ ಜಾಥದಲ್ಲಿ ದರ್ಶನ್ ಭಾಗಿಯಾಗಿದ್ದರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು, ಇದರಿಂದ ಅಭಿಮಾನಿಗಳನ್ನು ಚದುರಿಸಲು ಪೋಲಿಸರು ಹರಸಾಹಸ ಪಡಬೇಕಾಗಿತು. […]

ರಾಜ್ಯದ ಜನರ ಆಶೀರ್ವಾದದಿಂದ ದರ್ಶನ್ ಆರೋಗ್ಯವಾಗಿದ್ದಾರೆ: ರವಿಶಂಕರ್

Friday, September 28th, 2018
ravishankar

ಮೈಸೂರು: ಚಾಮುಂಡೇಶ್ವರಿ ತಾಯಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ದರ್ಶನ್ ಆರೋಗ್ಯವಾಗಿದ್ದಾರೆ. ಅವರನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾಜ್೯ ಮಾಡಲಾಗುವುದು ಎಂದು ನಟ ರವಿಶಂಕರ್ ಹೇಳಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಆರೋಗ್ಯ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಅವರೊಂದಿಗೆ ಮಾತನಾಡಿದ್ದೇನೆ. ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ.‌ ಅಭಿಮಾನಿಗಳ ಹಾಗೂ ದೇವರ ಆಶೀರ್ವಾದದಿಂದ ಹೆಚ್ಚಿನ ಅನಾಹುತವಾಗಿಲ್ಲವೆಂದು ಮಾತನಾಡಿದರು ಎಂದು ತಿಳಿಸಿದರು.

ಅಜಾಗರೂಕತೆ ಹಾಗೂ ಅತಿವೇಗದ ಚಾಲನೆ: ದರ್ಶನ್ ತಮ್ಮ ಡ್ರೈವರ್ ಮೂಲಕ ದೂರು

Wednesday, September 26th, 2018
darshan

ಮೈಸೂರು: ಆರ್ಟಿಓ ಹಾಗೂ ಬ್ರೇಕ್ ಇನ್ಸ್ಸ್ಪೆಕ್ಟರ್ ವರದಿ ಮೇಲೆ ದರ್ಶನ್ ಸ್ನೇಹಿತ ಆಂಟೋನಿ ರಾಯ್ ಭವಿಷ್ಯ ನಿರ್ಧಾರವಾಗಲಿದ್ದು, ವರದಿಯಲ್ಲಿ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಆರ್‌ಟಿಓ ಹಾಗೂ ಬ್ರೇಕ್ ಇನ್ಸ್ಪೆಕ್ಟರ್ ವರದಿ ಇಂದು ಸಂಚಾರಿ ಪೊಲೀಸರ ಕೈ ಸೇರಲಿದೆ. ಈ ವರದಿಯಲ್ಲಿ ಅಪಘಾತದ ನಿಖರ ಕಾರಣ ಸ್ಪಷ್ಟವಾಗಲಿದೆ. ಕಾರಿನಲ್ಲಿ ದೋಷ ಇಲ್ಲ ಎಂದಾದರೆ ಆಂಟೋನಿ ಈ ಕೇಸ್‌ನಲ್ಲಿ ಫಿಟ್ ಆಗಬಹುದು ಎನ್ನಲಾಗಿದೆ. ಆರ್‌ಟಿಓ ಅಧಿಕಾರಿಗಳು ನೀಡುವ ವಾಸ್ತವ ವರದಿಯನ್ನು ಇದು ಬಹುಮಟ್ಟಿಗೆ ಅವಲಂಬಿಸಿದೆ. ಹೀಗಾಗಿ ಆರ್‌ಟಿಓ […]

ಚಾಲೆಂಜಿಂಗ್‌ ಸ್ಟಾರ್‌‌ ಜೊತೆ ಸೆಲ್ಫಿಗೆ ಮುಗಿಬಿದ್ದ ಮಂಗಳೂರಿಗರು

Monday, May 28th, 2018
darshan

ಮಂಗಳೂರು: ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ‌ ಆಯೋಜಿಸಲಾಗಿದ್ದ ಯಕ್ಷ ದ್ರುವ ಪಟ್ಲ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಜೊತೆ ಮಂಗಳೂರು ಜನರು ಸೆಲ್ಫಿಗೆ ಮುಗಿಬಿದ್ದರು ಕಾರ್ಯಕ್ರಮಕ್ಕೆ ನಿಗದಿತ ಅವಧಿಗಿಂತ ವಿಳಂಬವಾಗಿ ಬಂದ ದರ್ಶನ್ ಅವರ ಆಗಮನಕ್ಕಾಗಿ ಮೂರು ಗಂಟೆಗಳ‌ ಕಾಲ ಜನರು ವೇದಿಕೆ ಮುಂಭಾಗದಲ್ಲಿ ಕಾದು ನಿಂತಿದ್ದರು. ಬಳಿಕ ದರ್ಶನ್ ಕಾರಿನಿಂದ ಇಳಿಯುತ್ತಿದ್ದಂತೆ ಅವರಿಗಾಗಿ ಕಾಯುತ್ತಿದ್ದ ಜನರು ದರ್ಶನ್‌ ಸಭಾಂಗಣದ ಒಳಗೆ ಹೋಗುವ ದಾರಿಯುದ್ದಕ್ಕೂ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡರು.

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

Saturday, May 5th, 2018
Darshan

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು. ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ […]

ಇಂದು ವರುಣಾದಲ್ಲಿ ಶಾ, ಚಾಮುಂಡೇಶ್ವರಿಯಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಪ್ರಚಾರ

Saturday, May 5th, 2018
amith-shah

ಮೈಸೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರ ರಂಗೇರುತ್ತಿದ್ದು, ರಾಷ್ಟ್ರ ನಾಯಕರು, ಸಿನಿಮಾ ನಟರು ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಇಂದು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪ್ರಚಾರಕ್ಕಿಳಿಯಲಿದ್ದಾರೆ. ಇಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೋಡ್ ಶೋ ಮತ್ತು ಬಹಿರಂಗ ಸಭೆ ನಡೆಲಿದ್ದಾರೆ. ನಂತರ ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ […]

ಯಕ್ಷಧ್ರುವ ಪಟ್ಲ ಸಂಭ್ರಮ 2018 ಕಾರ್ಯಕ್ರಮದ ತೃತೀಯ ವರ್ಷದ ವಾರ್ಷಿಕೋತ್ಸವ

Friday, March 16th, 2018
sathish-patla

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 3ನೇ ವರ್ಷದ ವಾರ್ಷಿಕೋತ್ಸವ ’ಯಕ್ಷಧ್ರುವ ಪಟ್ಲ ಸಂಭ್ರಮ’ 2018 ಕಾರ್ಯಕ್ರಮ ಮೇ 27ರಂದು ಭಾನುವಾರ ಅಡ್ಯಾರ್‌ಗಾರ್ಡ್‌ನಲ್ಲಿ ಜರಗಲಿದ್ದು ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಡ್ಯಾರ್‌ಗಾರ್ಡ್‌ನಲ್ಲಿ ಜರಗಿತು. ಸಭೆಯಲ್ಲಿ ‘ಪಟ್ಲ ಸಂಭ್ರಮ’ದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರ್ಯಕ್ರಮದ ಜವಾಬ್ದಾರಿಗಳ ಹಂಚಿಕೆಯ ಬಗ್ಗೆ ಮಾಹಿತಿಯನ್ನು ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸಭೆಗೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ […]

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ: ದರ್ಶನ್ ಅಕ್ರೋಶ

Thursday, September 8th, 2016
dharshan

ಮಂಡ್ಯ: ಕರ್ನಾಟಕದ ರೈತರು, ಜನತೆಯ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ. ಮಹದಾಯಿ ವಿಚಾರದಲ್ಲೂ ಹೀಗೆಯೇ ಆಗಿತ್ತು. ಈಗ ಮತ್ತೆ ಕಾವೇರಿ ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಚಿತ್ರನಟ ದರ್ಶನ್ ಅಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಚಿತ್ರನಟರು ನಡೆಸಿದ ಕಾವೇರಿ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್‌, ಕನ್ನಡದ ಜನ ತುಂಬಾ ಹೃದಯ ವೈಶಾಲ್ಯತೆ ಉಳ್ಳವರು ಎಂಬ ಕಾರಣಕ್ಕೆ ನಿರಂತರ ದಬ್ಬಾಳಿಕೆ ನಡೆಯುತ್ತಲೇ ಇದೆ. ಇದು ಸರಿಯಲ್ಲ. ನಾವೇನು ಬೆಳೆ ಬೆಳೆಯಲು ನೀರು ಕೇಳುತ್ತಿಲ್ಲ. ಕುಡಿಯಲು ನೀರು ಕೇಳುತ್ತಿದ್ದೇವೆ. […]