ರೌಡಿಶೀಟರ್ ಪಿಂಕಿ ನವಾಸ್ ಮೇಲೆ ಕಾಟಿಪಳ್ಳದಲ್ಲಿ ಮಾರಕಾಸ್ತ್ರಗಳಿಂದ ದಾಳಿ

Wednesday, February 10th, 2021
pinki-nawaz

ಮಂಗಳೂರು : ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ರೌಡಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ. ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಪಿಂಕಿ ನವಾಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ್ ರಾವ್ ಹತ್ಯೆಗೆ ಪ್ರತಿಕಾರದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯೋಗ ಗುರು ಬಾಬಾ ರಾಮದೇವ್ ಮುಖಕ್ಕೆ ಮಸಿ ಎಸೆದ ಕಮ್ರಾನ್ ಸಿದ್ದಿಕಿ

Saturday, January 14th, 2012
Baba Ramdev

ನವದೆಹಲಿ : ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ  ಯೋಗ ಗುರು ಬಾಬಾ ರಾಮದೇವ್ ಅವರ ಮುಖಕ್ಕೆ ಮಸಿ ಎಸೆದ ಪ್ರಕರಣ ಶನಿವಾರ ಮಧ್ಯಾಹ್ನ ನಡೆದಿದೆ. ಮುಂಬರುವ ಚುನಾವಣೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲು ಬಾಬಾ ರಾಮದೇವ್ ಈ ಸುದ್ದಿಗೋಷ್ಠಿ ಕರೆದಿದ್ದರು. ಆ ವೇಳೆ ಅವರ ವಿರುದ್ಧ ಹಲವರು ಪ್ರತಿಭಟನೆ ನಡೆಸಿ, ಘೋಷಣೆ ಕೂಗತೊಡಗಿದ್ದರು. ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ರಾಮದೇವ್ ಅವರ ಮುಖಕ್ಕೆ ಮಸಿ ಎಸೆದ, ಅತನನ್ನು ರಾಮದೇವ್ ಬೆಂಬಲಿಗರು ದಾಳಿ ನಡೆಸಿ ಥಳಿಸಿದ್ದಾರೆ. ರಾಮದೇವ್ ಅವರನ್ನು ಸ್ಥಳದಿಂದ ಬೇರೆಡೆಗೆ ಕರೆದೊಯ್ಯಲಾಗಿದೆ. ಈ […]

ಕ್ರೈಸ್ತರ ಮೇಲಿನ 23 ಪ್ರಕರಣಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ನಿರ್ಧಾರ

Saturday, December 3rd, 2011
DVS and Fathers

ಮಂಗಳೂರು : 2008ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಚರ್ಚ್‌ ದಾಳಿಯ ವೇಳೆ ಪ್ರತಿಭಟಿಸಿದ್ದ ಹಾಗೂ ಕ್ರೈಸ್ತರ ಮೇಲೆ ದಾಖಲಿಸಲಾಗಿದ್ದ 23 ಪ್ರಕರಣಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕಳೆದ 3 ವರ್ಷಗಳಿಂದ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್‌ ವರಿಷ್ಠರಿಗೆ ತಮ್ಮ ಅಹವಾಲು ಸಲ್ಲಿಸಿದ್ದರೂ ಅಮಾಯಕರ ಮೇಲಿನ ಪ್ರಕರಣಗಳನ್ನು ಸರಕಾರ ಹಿಂದಕ್ಕೆ ಪಡೆದಿರಲಿಲ್ಲ. ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ಈ ನಿರ್ಧಾರವನ್ನು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ರೈ| ರೆ| ಡಾ| ಎಲೋಶಿಯಸ್‌ ಪಾವ್ಲ್ […]

ವೈದ್ಯರ ನಿವಾಸ ಮತ್ತು ಕ್ಲಿನಿಕ್‌ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿ

Thursday, November 24th, 2011
it Official Raid

ಮಂಗಳೂರು : ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬುಧವಾರ ಮಂಗಳೂರಿನ ಆಯ್ದ ಪ್ರಸಿದ್ಧ ವೈದ್ಯರ ನಿವಾಸಗಳಿಗೆ ಮತ್ತು ಕ್ಲಿನಿಕ್‌ಗಳಿಗೆ ದಾಳಿ ಮಾಡಿ ದಾಖಲೆ ಪತ್ರಗಳನ್ನು ಪರಿಶೀಲಿಸಿ ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಐ.ಟಿ. ಅಧಿಕಾರಿಗಳು ಕದ್ರಿಯ ಕೈಬಟ್ಟಲ್‌, ಡಾಕ್ಟರ್ ಕಾಲನಿಗಳಲ್ಲಿರುವ ವೈದ್ಯರ ನಿವಾಸಗಳು, ಬಲ್ಮಠದಲ್ಲಿರುವ ಕ್ಲಿನಿಕ್‌ಗೆ ದಾಳಿ ನಡೆಸಸಿದ್ದಾರೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಲಾಗುತ್ತಿದೆ ಯಾದರೂ ಯಾವ್ಯಾವ ದಾಖಲೆಗಳನ್ನು ಕೊಂಡೊಯ್ದಿದ್ದಾರೆ ಎಂಬ ವಿಚಾರ ತಿಳಿದು ಬಂದಿಲ್ಲ. ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಈ ಕುರಿತು […]