ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ ಮತ್ತು ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

Thursday, December 24th, 2020
Pandeshwara Station

ಮಂಗಳೂರು : ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ, ಹಾಗೂ ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಎಸಿಪಿ ಜಗದೀಶ್, ನಟರಾಜ್, ಪಾಂಡೇಶ್ವರ ಇನ್ ಸ್ಪೆಕ್ಟರ್ ಎ. ಸಿ ಲೋಕೇಶ್, ಸಬ್ ಇನ್ ಸ್ಪೆಕ್ಟರ್ ಸುರೇಶ್, ಶೀತಲ್, ಹಿರಿಯ ಸಿಬ್ಬಂದಿ ಸುನಿಲ್ SB, ಸ್ಥಳೀಯ ಪ್ರಮುಖರಾದ ನಿತಿನ್ ಕಾಮತ್, ಅನಿಲ್ […]

ಕೊರೊನಾ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ಒಂದು ವಾರ ಬಂದ್

Sunday, June 28th, 2020
mcc

ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ನಗರ ಪಾಲಿಕೆಗೆ ಸೋಮವಾರದಿಂದ ಪ್ರವೇಶ ನಿರ್ಬಂಧಿಸ ಲಾಗಿದೆ ಎಂದು ಮೇಯರ್ ರವರ ಪ್ರಕಟಣೆ ತಿಳಿಸಿದೆ ಪಾಲಿಕೆಗೆ ಪ್ರತಿದಿನ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಸೋಮವಾರದಿಂದ ಜೂನ್  29 ರಿಂದ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ ಎಂದು  ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ

Friday, February 28th, 2020
meyar

ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಂಟೋನ್ಮೆಂಟ್‌ ವಾರ್ಡ್‌ನ ದಿವಾಕರ ಪಾಂಡೇಶ್ವರ ಹಾಗೂ ನೂತನ ಉಪಮೇಯರ್ ಆಗಿ ಕುಳಾಯಿ ವಾರ್ಡ್‌ನ ವೇದಾವತಿಯವರು ಆಯ್ಕೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಹಾಗೂ ಸ್ಥಾಯೀ ಸಮಿತಿ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. 60 ಕಾರ್ಪೋರೇಟರ್‌ಗಳು ಹಾಗೂ ಶಾಸಕ ವೇದವ್ಯಾಸ ಕಾಮತ್, ಶಾಸಕ ಭರತ್ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜರನ್ನು ಸೇರಿಸಿ ಒಟ್ಟು 63 ಮತಗಳಿದ್ದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು […]