ಕತ್ತು ಸೀಳಿದ ಗಾಳಿಪಟದ ದಾರ: ವೈದ್ಯೆ ದುರ್ಮರಣ

Tuesday, October 9th, 2018
pune-died

ಪುಣೆ: ಗಾಳಿ ಪಟದ ಚೈನಾ ಮಾಂಜಾ ದಾರ ಕತ್ತು ಸೀಳಿದ ಪರಿಣಾಮ ಫ್ಲೈಓವರ್‌ನಲ್ಲಿ ಸ್ಕೂಟರ್‌ ಸವಾರೆಯಾಗಿ ತೆರಳುತ್ತಿದ್ದ ಯುವ ವೈದ್ಯೆ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಬೋಸಾರಿ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ. 26 ರ ಹರೆಯದ ಆಯುರ್ವೇದ ವೈದ್ಯೆ ಕೃಪಾಲಿ ನಿಕ್ಕಂ ಅವರು ಮೃತ ದುರ್‌ದೈವಿ. ಹಾರಾಡುತ್ತಿದ್ದ ಗಾಳಿಪಟದ ಮಾಂಜಾ ದಾರ ಕತ್ತನ್ನು ಸೀಳಿದ ಪರಿಣಾಮ ಏಕಾಏಕಿ ಸ್ಕೂಟರ್‌ನಿಂದ ಕುಸಿದು ಬಿದ್ದಿದ್ದಾರೆ. ಕತ್ತಿನ ಭಾಗದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಆಕೆ ಮಾತನಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ […]

ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ ಸ್ನೇಹಿತನ ತಲೆ ಕಡಿದು ಪೊಲೀಸ್‌ ಠಾಣೆಗೆ ಶರಣು

Wednesday, August 24th, 2016
Anjaneya

ದೇವನಹಳ್ಳಿ: 27 ಸಾವಿರ ರೂಪಾಯಿ ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ, ಸ್ನೇಹಿತನ ತಲೆ ಕಡಿದು ರುಂಡ ಸಮೇತ ಪೊಲೀಸ್‌ ಠಾಣೆಗೆ ಬಂದು ಶರಣಾಗಿರುವ ಘಟನೆ ತಾಲೂಕಿನ ವಿಶ್ವನಾಥಪುರ ಠಾಣೆಯಲ್ಲಿ ನಡೆದಿದೆ. ತಾಲೂಕಿನ ಕೆಂಪತಿಮ್ಮನಹಳ್ಳಿಯ ಮಂಜುನಾಥ್‌ (26) ಬರ್ಬರವಾಗಿ ಕೊಲೆಯಾದ ದುರ್ದೈವಿ. ಉಗನವಾಡಿ ಶಶಿಕುಮಾರ್‌ ಕೊಲೆ ಮಾಡಿ ಪೊಲೀಸರಿಗೆ ಶರಣಾದವ. ಈತ ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಅವರ ಪುತ್ರ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕುಮಾರ್‌ ಮತ್ತು ಮಂಜುನಾಥ್‌ ಸ್ನೇಹಿತರಾಗಿದ್ದು ಶಶಿಕುಮಾರ್‌, ಮಂಜುನಾಥಗೆ 27 ಸಾವಿರ ರೂ. […]