ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ ನಕಲಿ ನೋಟುಗಳು

Thursday, December 2nd, 2021
Canara Bank

ಉಡುಪಿ : ದುಷ್ಕರ್ಮಿಗಳು 44 ನಕಲಿ ನೋಟುಗಳನ್ನು ಉಡುಪಿ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ  ಹಾಕಿರುವುದು ಪತ್ತೆಯಾಗಿವೆ. ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ನಲ್ಲಿ ಜು.14ರಿಂದ ಜು.15ರವರೆಗೆ ಆರ್‌ಬಿಐ ಡಿಪಾರ್ಟಮೆಂಟ್ ಬೆಂಗಳೂರು ಇವರು ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ 2018ರ ನ.17ರಿಂದ 2021ರ ಆ.31ರವರೆಗೆ ವಿವಿಧ ಶಾಖೆಗಳಿಂದ ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ಗೆ 44 ಖೋಟಾ ನೋಟುಗಳು ಬಂದಿರುವುದು ತಿಳಿದು ಬಂದಿದೆ. ದುಷ್ಕರ್ಮಿಗಳು ನಕಲಿ ನೋಟುಗಳನ್ನು ತಯಾರಿ ಮಾಡಿ, ನೈಜ ನೋಟು ಗಳಂತೆ […]

ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿದ ದುಷ್ಕರ್ಮಿಗಳು

Sunday, August 29th, 2021
buffalo

ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಅಮಾನವೀಯ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು, ರಕ್ತಸ್ರಾವ ಆಗಿ ಕೋಣ ಸತ್ತು ಬಿದ್ದಿದೆ. ಈ ಬಗ್ಗೆ ಸ್ಥಳೀಯರು […]

ರಾಷ್ಟ್ರೀಯ ಹೆದ್ದಾರಿ ಬಳಿ ಮೀನು ಮಾರಾಟದ ಗೂಡಂಗಡಿಗೆ ಬೆಂಕಿ

Monday, August 23rd, 2021
fish-Shop

ಉಪ್ಪಿನಂಗಡಿ : ಮೀನು ಮಾರಾಟದ ಗೂಡಂಗಡಿಯೊಂದು ರಾಷ್ಟ್ರೀಯ ಹೆದ್ದಾರಿ ಬಳಿ ರವಿವಾರ ತಡರಾತ್ರಿ ಬೆಂಕಿಗಾಹುತಿಯಾಗಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟಿದ್ದ ಮೀನು ಸುಟ್ಟು ಹೋಗಿವೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರ […]

ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು

Friday, October 16th, 2020
Manish Shetty

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ, ಐವರು ವಶಕ್ಕೆ

Friday, October 9th, 2020
Kusuma

ಮಂಗಳೂರು : ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮಂಗಳೂರು ದಕ್ಷಿಣ ಎಸಿಪಿ ನೇತೃತ್ವದ ಪೊಲೀಸ್ ತಂಡ ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಕಣಂತೂರು ಬೆಳ್ಳೇರಿ ಸಮೀಪ  ಸೆ. 25ರಂದು 50 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗ್ಯಾಸ್ ಸ್ಟೌವ್ ತೆರೆದ ಸ್ಥಿತಿಯಲ್ಲಿ ಮತ್ತು ಮನೆಯ ಕರ್ಟೈನ್ಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು, ಪ್ರಕರಣ ತಿರುಚುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ಪೊಲೀಸರ ತನಿಖೆಗೆ […]

ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯ ಮರ್ಮಾಂಗವನ್ನು ಕತ್ತರಿಸಿ ಅಮಾನವೀಯ ಕೃತ್ಯ

Saturday, February 15th, 2020
mandya

ಮಂಡ್ಯ : ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯೊಬ್ಬನ ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಕೃತ್ಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿಯು ಕೆ.ಆರ್.ಪೇಟೆ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗಲು ಪಾಂಡವಪುರ ತಾಲೂಕಿನ ಸೀತಾಪುರ ಗೇಟ್ ಬಳಿ ನಿಂತಿದ್ದ. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಎಲ್ಲಿಗೆ ಹೋಗ ಬೇಕು ಎಂದು ಕೇಳಿದ್ದರು. ಆಗ ವಿದ್ಯಾರ್ಥಿಯು, ನಾನು ಕೆ.ಆರ್.ಪೇಟೆಗೆ ಹೋಗಬೇಕು ಎಂದು ಹೇಳಿದ್ದರು. ಆದಕ್ಕೆ ದುಷ್ಕರ್ಮಿಗಳು, ‘ಬಾ ನಮ್ಮ ಜೊತೆ. ನಾವು ಆ ಕಡೆನೇ ಹೋಗುತ್ತಿದ್ದೇವೆ ಎಂದು ಕಾರಿನಲ್ಲಿ […]

ಬೆಳ್ತಂಗಡಿ : ಶಾಲಾ ಬಾವಿಯ ನೀರು ಕುಡಿದು 8 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ

Monday, December 2nd, 2019
belthangady

ಬೆಳ್ತಂಗಡಿ : ಶಾಲೆಯ ಬಾವಿ ನೀರು ಕುಡಿದು ಎಂಟು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ತಾಲೂಕಿನ ಶಿಬಾಜೆ ಪೆರ್ಲ ಎಂಬಲ್ಲಿರುವ ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳ ಪೈಕಿ ಗಂಭೀರಾವಸ್ಥೆಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಬಾವಿ ನೀರಿಗೆ ಯಾರೋ ದುಷ್ಕರ್ಮಿಗಳು ವಿಷ ಬೆರೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ಚೇತನ್ ಕುಮಾರ್(13), 8ನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್(14), ಯೋಗೀಶ್ (14), ರಾಧಾಕೃಷ್ಣ(14), 6ನೇ […]

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಜೀವಂತ ಸುಟ್ಟ ದುಷ್ಕರ್ಮಿಗಳು

Friday, November 29th, 2019
Priyanka

ಹೈದರಾಬಾದ್ : ಪಶುವೈದ್ಯೆಯೊಬ್ಬರ ಮೆಲೆ ಅತ್ಯಾಚಾರ ನಡೆಸಿ ಬಳಿಕ ಅವರನ್ನು ಜೀವಂತ ಸುಟ್ಟುಹಾಕಿರುವ ಬೀಭತ್ಸ ಘಟನೆ ಹೈದರಾಬಾದ್ ಹೊರವಲಯದಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾಗಿ ಬಳಿಕ ಕೊಲೆಯಾದ ಮಹಿಳೆ 27 ವರ್ಷದ ಪ್ರಿಯಾಂಕ ರೆಡ್ಡಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪ್ರಿಯಾಂಕ ಅವರು ತನ್ನ ಕ್ಲಿನಿಕ್ ನಿಂದ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಹೈದರಾಬಾದ್ ನಗರದ ಹೊರವಲಯದಲ್ಲಿರುವ ತೊಂಡುಪಲ್ಲಿ ಟೋಲ್ ಪ್ಲಾಝಾದ ಬಳಿ ತಲುಪಿತ್ತದ್ದಂತೆಯೇ ಅವರ ಸ್ಕೂಟರ್ ನ ಟಯರ್ ಪಂಕ್ಚರ್ ಆಗಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಪ್ರಿಯಾಂಕ ಅವರು […]

‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ

Friday, December 8th, 2017
serial-actor

ಬೆಂಗಳೂರು:‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ ನಡೆಸಲಾಗಿದೆ. ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ಕಿರುತೆರೆ ನಟನನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರು ಕಿರುತೆರೆ ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ್ದಕ್ಕೆ ನಟನ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರ ಈ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು […]

ದುಷ್ಕರ್ಮಿಗಳ ತಂಡದಿಂದ ಮನೆಯವರನ್ನು ಕಟ್ಟಿ ಹಾಕಿ ನಿಧಿಗಾಗಿ ಶೋಧ

Tuesday, January 24th, 2017
Karopady

ಮಂಗಳೂರು: ಇನ್ನೊವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮನೆಯವರನ್ನು ಕಟ್ಟಿ ಹಾಕಿ ನಿಧಿಗಾಗಿ ಶೋಧ ನಡೆಸಿದ ಘಟನೆ ಇಂದು ನಸುಕಿನ ಜಾವ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ನಡೆದಿದೆ. ಕರೋಪಾಡಿಯ ವಿಘ್ನರಾಜ್ ಭಟ್ ಎಂಬುವರ ಮನೆಗೆ ನುಗ್ಗಿದ್ದ 9 ಜನರ ತಂಡ ಮನೆಯವರಲ್ಲಿ ನಿಧಿ ಎಲ್ಲಿದೆ ಎಂದು ವಿಚಾರಿಸಿ ಅವರನ್ನು ಕಟ್ಟಿ ಹಾಕಿದೆ. ಅವರ ಮನೆಯ ಹೊರಭಾಗದಲ್ಲಿ ಮನೆಯ ಗೇಟಿನ ಬಳಿ ನೆಲವನ್ನು ಅಗೆದು ನಿಧಿಗೆ ಹುಡುಕಾಡಿದ್ದಾರೆ. ಆದರೆ ನಿಧಿ ಸಿಗದೆ ವಾಪಸ್‌ ತೆರಳಿದ್ದಾರೆ. ದುಷ್ಕರ್ಮಿಗಳು ಕನ್ನಡ, […]