ಹೆಜ್ಜೇನು ದಾಳಿಯಿಂದ ವೃದ್ಧೆಯೊಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯ

Friday, December 9th, 2016
bee-attack

ಮಂಗಳೂರು: ಹೆಜ್ಜೇನು ದಾಳಿಯಿಂದ ವೃದ್ಧೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಸೋಮೇಶ್ವರ ಪಂಚಾಯತ್‌ ವ್ಯಾಪ್ತಿಯ ಪಿಲಾರು ಲಕ್ಷ್ಮೀಗುಡ್ಡೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಉಳಾಯಿಬೆಟ್ಟು ನಿವಾಸಿ ಕಮಲಾ (65) ಮೃತ ವೃದ್ಧೆ. ಅವರ ರಕ್ಷಣೆಗೆ ಬಂದ ಅಳಿಯ ಶ್ರೀಧರ್ (49), ಮಗಳು ಲೀಲಾವತಿ (45) ಮತ್ತು ಅಳಿಯನ ತಾಯಿ ಜಾನಕಿ (70) ಎಂಬುವರು ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಕ್ಷ್ಮೀಗುಡ್ಡೆಯಲ್ಲಿರುವ ಅಳಿಯ ಶ್ರೀಧರ್ ಮನೆಗೆ ಕಮಲಾ ಎರಡು ದಿನಗಳ ಹಿಂದೆ ಬಂದಿದ್ದರು. ನಿನ್ನೆ ಮಧ್ಯಾಹ್ನ ಮನೆ […]

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಕಾರ್ತಿಕ್ ರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವು

Monday, October 24th, 2016
karthik

ಮಂಗಳೂರು: ನಿನ್ನೆ ಬೆಳಗ್ಗೆ ಕೊಣಾಜೆ ಪೊಲೀಸ್ ಠಾಣೆಯ ಸಮೀಪ ದುಷ್ಕರ್ಮಿಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಕಾರ್ತಿಕ್ ರಾಜ್ ಚಿಕಿತ್ಸೆ ಫಲಕಾರಿಯಾಗದೆ ಇಂದು ದೇರಳಕಟ್ಟೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸುದರ್ಶನ್ ನಗರದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ಕಾರ್ತಿಕ್ ರಾಜ್ (27) ಎಂದಿನಂತೆ ವಾಯು ವಿಹಾರಕ್ಕೆ ತೆರಳಿದ್ದರು. ಮರಳಿ ಕೊಣಾಜೆ ಪೊಲೀಸ್ ಠಾಣೆಯ ಹತ್ತಿರ ಬರುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್‌ನಿಂದ ನಡು ರಸ್ತೆಯಲ್ಲೇ ಕಾರ್ತಿಕ್ ಅವರನ್ನು ಕೊಚ್ಚಿ ಪರಾರಿಯಾಗಿದ್ದರು. […]

ಮೀನು ತಿಂದು ಅಸ್ವಸ್ಥರಾದ ಕಾರ್ಮಿಕರು ಆಸ್ಪತ್ರೆಗೆ ದಾಖಲು

Monday, October 3rd, 2016
fish

ಮಂಗಳೂರು: ಮೀನು ತಿಂದು ಅಸ್ವಸ್ಥರಾದ ಸುಮಾರು 200 ಕಾರ್ಮಿಕರು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಬರಾಕಾ ಮೀನಿನ ಕಾರ್ಖಾನೆಯ ಕಾರ್ಮಿಕರು ಸಹಿತ ನಾಟೆಕಲ್ ಹಾಗೂ ಉಳ್ಳಾಲದ ಮನೆಮಂದಿ ಅಸ್ವಸ್ಥರಾಗಿ ತೊಕ್ಕೊಟ್ಟು ಸಹಿತ ದೇರಳಕಟ್ಟೆಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇವರ ಪೈಕಿ ಒಂದೇ ಮನೆಯ ನಾಲ್ವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಉಳ್ಳಾಲದಲ್ಲಿರುವ ಫಿಶ್ ಮಿಲ್‌‌ನಲ್ಲಿ ಇರುವ ಸುಮಾರು 300 ಕಾರ್ಮಿಕರು ಶುಕ್ರವಾರ ರಾತ್ರಿ ಊಟ ಮುಗಿಸಿ ಮಲಗುವ ವೇಳೆಗೆ ಅಸ್ವಸ್ಥಗೊಂಡಿದ್ದರು. ಊಟ ಮುಗಿದ ತಕ್ಷಣ […]