ಪ್ರಧಾನಿಯಿಂದ ಸಂವಿಧಾನಕ್ಕೆ ಗುಂಡಿಡುವ ಪ್ರಯತ್ನ ನಡೆದಿದೆ : ದೇವನೂರು ಮಹದೇವ ಗಂಭೀರ ಆರೋಪ

Saturday, January 11th, 2020
samavesha

ಮಡಿಕೇರಿ : ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಡುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹದೇವ ಗಂಭೀರ ಆರೋಪ ಮಾಡಿದ್ದಾರೆ. ಪ್ರಗತಿಪರರ ಜನಾಂದೋಲನ ವೇದಿಕೆ ವತಿಯಿಂದ ಮಡಿಕೆರಿಯ ಗಾಂಧಿ ಮೈದಾನದಲ್ಲಿ ನಡೆದ ’ಪೌರತ್ವ ಕಾಯ್ದೆ ವಿರುದ್ಧದ ಜನಾಂದೋಲನ ಸಮಾವೇಶ’ದಲ್ಲಿ ಮಾತನಾಡಿದ ಅವರು, ಕಾಯ್ದೆ ಕುರಿತು ಆತಂಕ ವ್ಯಕ್ತಪಡಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿಯವರಿಗೆ ನಮಸ್ಕರಿಸಿದ ಬಳಿಕ ಎದೆಗೆ […]