ಕಾರಿಗೆ ಲಾರಿ ಡಿಕ್ಕಿಯಾಗಿ ವಿಟ್ಲದ ಇಬ್ಬರು ಯುವಕರು ಮೃತ್ಯು

Saturday, January 15th, 2022
Channarayapattana-Accident

ವಿಟ್ಲ : ಚನ್ನರಾಯಪಟ್ಟಣ ಬೈಪಾಸ್ ರಸ್ತೆಯಲ್ಲಿ ಲಾರಿ ಕಾರಿಗೆ ಡಿಕ್ಕಿಯಾಗಿ ವಿಟ್ಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಾಯಗೊಂಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೆಳಗಿನ ಬಾರೆಬೆಟ್ಟು ನಿವಾಸಿ ಸುದರ್ಶನ್(32), ಪುತ್ತೂರು ತಾಲೂಕು ಈಶ್ವರಮಂಗಲ ಸಮೀಪದ ಬಂಟಕಲ್ಲು ನಿವಾಸಿ ದೇವಿಪ್ರಸಾದ್(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ನಿವಾಸಿ ಪ್ರಮೋದ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿ ಬೆಂಗಳೂರಿನಿಂದ ಬೆಳಗ್ಗೆ 6.30ಕ್ಕೆ ಊರಿಗೆ ಬರುವ ನಿಟ್ಟಿನಲ್ಲಿ ಕಾರ್‌ನಲ್ಲಿ ಹೊರಟಿದ್ದು, 10 ಗಂಟೆ ಸುಮಾರಿಗೆ ಹಾಸನ […]

ವರದಕ್ಷಿಣೆ ಕಿರುಕುಳ, ಪತ್ನಿ ಕೊಲೆ… ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ!

Wednesday, December 20th, 2017
dowry-case

ಮಂಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ಕನ್ಯಾನ ಕಾಂಚಾರು ನಿವಾಸಿ ದೇವಿಪ್ರಸಾದ್ (43) ಎಂಬಾತನಿಗೆ ಮಂಗಳೂರು ಆರನೇ ಹೆಚ್ಚುವರಿ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿ ಸವಿತಾ ಎಂಬುವರನ್ನು ದೇವಿಪ್ರಸಾದ್ 2013ರಲ್ಲಿ ಮದುವೆಯಾಗಿದ್ದ. ಬಳಿಕ ವರದಕ್ಷಿಣೆಗಾಗಿ ವಿಪರೀತ ಪೀಡಿಸುತ್ತಿದ್ದ. ಅಲ್ಲದೆ, ಸವಿತಾಳ ಮೇಲೆ ಹಲ್ಲೆ ಮಾಡುತ್ತಿದ್ದ. 2014ರಲ್ಲಿ ದೇವಿಪ್ರಸಾದ್‌ ಪತ್ನಿಗೆ ನೇಣು ಹಾಕಿ ಕೊಲೆ […]