ಮುಂಬೈಯಲ್ಲಿ ಉಗ್ರರು ಹಲವಾರು ಮಂದಿಯನ್ನು ಬಲಿ ಪಡೆದ ದಿನವೇ ಮಂಗಳೂರಿನಲ್ಲಿ ಗೋಡೆ ಬರಹ : ಎಬಿವಿಪಿ ಖಂಡನೆ

Saturday, November 28th, 2020
Abvp Protest

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಅಪಾರ್ಟ್‌ಮೆಂಟ್‌ನ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು. 2008 ನ.26ರಂದು ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನ. ಅದೇ ದಿನ ದೇಶದ್ರೋಹಿಗಳು ಉಗ್ರರ […]

ದೇಶದ್ರೋಹಿ ಕೃತ್ಯ ಮಾಡುವ ಕನ್ಹಯ್ಯ ಕುಮಾರ್ ಗೆ ಮಂಗಳೂರು ಜೆಪ್ಪು ಮೊಗರು ಕಾರ್ಯಕ್ರಮದಲ್ಲಿ ಅವಕಾಶ ನೀಡಬಾರದು

Thursday, March 5th, 2020
jeppu-mogaru

ಮಂಗಳೂರು : ದಿನಾಂಕ 8 ಮಾರ್ಚ್, 2020 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪೌರ ಸಮುದಾಯ ಸಮಿತಿ ಆಯೋಜಿಸಿದ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟನೆ ಯಲ್ಲಿ ದೇಶ ವಿರೋಧಿ ಕೃತ್ಯ ಮಾಡುವ ಕನ್ಹಯ್ಯ ಕುಮಾರ್ ಭಾಗವಹಿಸಿತ್ತಿದ್ದಾರೆ. ಕನ್ನಯ್ಯ ಕುಮಾರ ಇತ್ತೀಚಿಗೆ ದೆಹಲಿ, ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧದ ಪ್ರತಿಭಟನೆಯಲ್ಲಿ ಹಿಂದೂಗಳ ವಿರುದ್ಧ ಅನೇಕ ಪ್ರಚೋದನೆ ಭಾಷಣ ನೀಡಿ, ದಂಗೆ ಮಾಡಲು ಕಾರಣರಾಗಿದ್ದಾರೆ. ಈ ಹಿಂದೆ ಜೆಎನ್ ಯು ವಿಶ್ವವಿದ್ಯಾಲಯ ಆವರಣದಲ್ಲಿ ಭಯೋತ್ಪಾದಕ ಅಪ್ಜಲ್ ಗುರು ಕಾರ್ಯಕ್ರಮ […]

ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ : ಸಿ.ಟಿ ರವಿ

Monday, February 17th, 2020
ravi

ಬೆಂಗಳೂರು : ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸಿ.ಟಿ ರವಿ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು ದೇಶದ್ರೋಹಿ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು. ಹುಬ್ಬಳ್ಳಿಯ ಕೆ.ಎಲ್‌.ಇ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ ಕಾಶ್ಮೀರಿ ಮೂಲದ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿದ್ಯಾರ್ಥಿಗಳನ್ನು ಬಂಧಿಸಿದ್ದ ಪೊಲೀಸರು ಬಳಿಕ ಬಿಡುಗಡೆಗೊಳಿಸಿದ್ದರು. ಪೊಲೀಸರ ಈ ನಡೆಗೆ ವ್ಯಾಪಕ ವಿರೋಧ […]