ಅಪಘಾತಕ್ಕೊಳಗಾದ ವ್ಯಕ್ತಿಗೆ ಉಪಚರಿಸಿದ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು

Sunday, July 11th, 2021
Tejas

ಮಂಗಳೂರು: ಬೈಕನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ಮುಂದಾಗಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ  ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಮೃತ ಯುವಕ ತೇಜಸ್‌ (28) ಸುಳ್ಯ ತಾಲೂಕಿನ ಮರ್ಕಜೆಯ ದೊಡ್ಡತೋಟ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಶನಿವಾರ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದ್ವಿಚಕ್ರ ವಾಹವೊಂದು ಅಪಘಾತಕ್ಕೀಡಾಗಿತ್ತು. ಇದನ್ನು ಗಮನಿಸಿದ ತೇಜಸ್, ಗಾಯಾಳುವನ್ನು ಉಪಚರಿಸಿ ಆತನ ಬೈಕ್ನನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ದೂಡಿಕೊಂಡು ಹೋಗುತ್ತಿದ್ದನು. ಅದೇ […]