ಬೈಕಂಪಾಡಿಗೆ ಸ್ಥಳಾಂತರಗೊಂಡ ಕೇಂದ್ರ ಮಾರುಕಟ್ಟೆಯನ್ನು ನಗರದ ಹ್ರದಯ ಭಾಗದಲ್ಲೇ ಪುನರಾರಂಭಿಸಲು ಒತ್ತಾಯ

Monday, April 20th, 2020
cpim

ಮಂಗಳೂರು  :  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ದ.ಕ.ಜಿಲ್ಲೆಯ ಆರ್ಥಿಕತೆಯ ಜೀವನಾಡಿ ನಗರದ ಹ್ರದಯ ಭಾಗದಲ್ಲಿರುವ ಕೇಂದ್ರ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಬೈಕಂಪಾಡಿಯ APMC ಯಾರ್ಡ್ ಗೆ ಸ್ಥಳಾಂತರಿಸಿದ್ದು,ಅಲ್ಲಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು,ಕೂಡಲೇ ಕೇಂದ್ರ ಮಾರುಕಟ್ಟೆಯನ್ನು ನಗರದ ಹ್ರದಯ ಭಾಗದಲ್ಲಿ ಹಿಂದೆ ಇದ್ದ ಕಟ್ಟಡದಲ್ಲೇ ಪುನರಾರಂಭಿಸಬೇಕೆಂದು ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘ(ರಿ)ವು ದ.ಕ.ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಈ ಬಗ್ಗೆ ಸಂಘದ ಉನ್ನತ ಮಟ್ಟದ ನಿಯೋಗವೊಂದು ದ.ಕ.ಜಿಲ್ಲಾಧಿಕಾರಿಗಳನ್ನು ಹಾಗೂ ಮನಪಾ ಆಯುಕ್ತರನ್ನು ಭೇಟಿಯಾಗಿ […]

ಸಾರ್ವಜನಿಕ ಹಿತದೃಷ್ಠಿ ಕಾಪಾಡುವುದು ಲೋಕಾಯುಕ್ತರ ಗುರಿ : ಲೋಕಾಯುಕ್ತ ನ್ಯಾಯಮೂರ್ತಿ

Friday, November 17th, 2017
loakyuktha-at-townhall

ಮ0ಗಳೂರು: ಸರಕಾರದ ಆಡಳಿತ ವ್ಯವಸ್ಥೆಯನ್ನು ಉತ್ತಮಗೊಳಿಸುವುದರ ಜೊತೆಗೆ ದುರಾಡಳಿತವನ್ನು ಕೊನೆಗೊಳಿಸಿ ಸಾರ್ವಜನಿಕರಿಗೆ ತ್ವರಿತ ಪರಿಹಾರವನ್ನು ಒದಗಿಸಿ ಕೊಡುವುದು ಲೋಕಾಯುಕ್ತದ ಮುಖ್ಯ ಉದ್ದೇಶ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಹೇಳಿದರು. ನಗರದ ಪುರಭವನದಲ್ಲಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಮತ್ತು ದ.ಕ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ನಡೆದ ಸಾರ್ವಜನಿಕ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜನರಿಗೆ ಆಗಿರುವ ತೊಂದರೆಯನ್ನು ತಿಳಿದುಕೊಂಡು ಸೂಕ್ತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಧ್ಯವಾದಷ್ಟರ ಮಟ್ಟಿಗೆ ಅದರ ನಿವಾರಣೆಯನ್ನು ಮಾಡುವುದಾಗಿ ಭರವಸೆಯಿತ್ತರು. ಈಗಾಗಲೇ […]

ಶ್ರೀಕೃಷ್ಣನ ಗೀತೋಪದೇಶ ಅರ್ಥ ಮಾಡಿಕೊಂಡರೆ ಸಮಸ್ಯೆಗಳಿಗೆ ಉತ್ತರ ಸಿಗುತ್ತದೆ : ರಮಾನಾಥ ರೈ

Monday, August 14th, 2017
Krishna janmashtami

ಮಂಗಳೂರು : ದ.ಕ. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಜಂಟಿಯಾಗಿ ಸರಕಾರದ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ನಗರ ಪುರಭವನದ ಮಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಉದ್ಘಾಟನೆ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಯಾದವ ಸಮುದಾಯದಲ್ಲಿ ಹುಟ್ಟಿ ಜಗತ್ತಿಗೆ ಗೀತೆಯ ಮೂಲಕ ಸಂದೇಶ ನೀಡಿರುವ ಶ್ರೀ ಕೃಷ್ಣ ಸಾಮಾಜಿಕ ನ್ಯಾಯದ ಸಂಕೇತ ಎಂದು ಅಭಿಪ್ರಾಯಿಸಿದ್ದಾರೆ. ಶೋಷಣೆ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಎಲ್ಲರೂ ಭಾಷಣ ಮಾಡುತ್ತಾರೆ. ಆದರೆ, ಅನುಷ್ಠಾನಕ್ಕೆ ಹಿಂಜರಿಯುತ್ತಾರೆ, ಶ್ರೀಕೃಷ್ಣನ ಗೀತೋಪದೇಶ […]

ದ.ಕ.ಜಿಲ್ಲಾಡಳಿತದ ವತಿಯಿಂದ 58ನೇ ಕನ್ನಡ ರಾಜ್ಯೋತ್ಸವವ ಆಚರಣೆ

Friday, November 1st, 2013
ದ.ಕ.ಜಿಲ್ಲಾಡಳಿತದ ವತಿಯಿಂದ  58ನೇ ಕನ್ನಡ ರಾಜ್ಯೋತ್ಸವವ ಆಚರಣೆ

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನದಲ್ಲಿ 58ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಧ್ವಜಾರೋಹಣ ನೆರವೇರಿಸಿ, ಬಳಿಕ ಪಥಸಂಚಲನ ಕಮಾಂಡರ್ ರಿಂದ ಗೌರವವಂದನೆ ಸ್ವೀಕರಿಸಿದರು. ಬಿ.ರಮನಾಥ ರೈ ಅವರು ಕನ್ನಡ ರಾಜ್ಯೋತ್ಸವದ ಸಂದೇಶದಲ್ಲಿ ನಮ್ಮ ನಾಡಿನ ಭಾಷೆ, ಕಲೆ, ಸಂಸ್ಕೃತಿ ಹಾಗೂ ಪರಂಪರೆಗಳನ್ನು ನೆನೆದು ಅವುಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರುವುದರ ಮೂಲಕ ಅವುಗಳನ್ನು ಅಭಿವೃದ್ದಿಗೊಳಿಸುವ ಮಹತ್ವದ ದಿನ. ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಹೆಚ್ಚಿನ […]

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಜಾಗೃತಿ ನಡೆಯಬೇಕು : ಜಿಲ್ಲಾಧಿಕಾರಿ

Friday, March 15th, 2013
Consumer Day

ಮಂಗಳೂರು : ದ.ಕ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ ಜಿಲ್ಲೆ ಹಾಗೂ ಗ್ರಾಹಕ ಸಂಘ ಮತ್ತು ಯೋಜನಾ ವೇದಿಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ. ವಿಶ್ವ ಗ್ರಾಹಕ ದಿನಾಚರಣೆ ಮತ್ತು ಗ್ರಾಹಕ ಶಿಕ್ಷಣ ಸರ್ಟಿಪಿಕೇಟ್ ಪ್ರದಾನ ಸಮಾರಂಭವನ್ನು ಮಾರ್ಚ್ 15 ಶುಕ್ರವಾರ ಬೆಳಿಗ್ಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದ.ಕ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ […]

ಸ್ಥಳೀಯ ಸಂಸ್ಥೆ ಚುನಾವಣೆಗೆ ಸರ್ವ ಸಿದ್ದತೆ

Thursday, March 7th, 2013
ಸ್ಥಳೀಯ ಸಂಸ್ಥೆ ಚುನಾವಣೆಗೆ ಸರ್ವ ಸಿದ್ದತೆ

ಮಂಗಳೂರು : ಮಾರ್ಚ್ 7 ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ  ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗೆ ದ.ಕ. ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್‌. ಪ್ರಕಾಶ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 544 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 84 ಮತಗಟ್ಟೆಗಳನ್ನು ಅತಿಸೂಕ್ಷ್ಮಹಾಗೂ 70 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ 31 ಸೂಕ್ಷ್ಮ ಹಾಗೂ 61 ಅತಿಸೂಕ್ಷ್ಮ, ಮೂಡಬಿದಿರೆ […]

ಕನ್ನಡದ ಅಭಿಮಾನ ಇಲ್ಲದವರಿಂದಲೇ ಕನ್ನಡಕ್ಕೆ ಅಪಾಯವಿದೆ : ಸಿ ಟಿ ರವಿ

Thursday, November 1st, 2012
Kannada Rajyothsava Mangalore

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ (ನ.1) ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 7.45 ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಸುರಿಯುವ ತುಂತುರು ಮಳೆಯನ್ನೂ ಲೆಕ್ಕಿಸದೆ ಕನ್ನಡಾಭಿಮಾನದ ಸಂದೇಶವನ್ನು ಸಾರುವ ಅನೇಕ ವಾಹನಗಳ ಜಾಥ ಕನ್ನಡ ರಾಜ್ಯೋತ್ಸವಕ್ಕೆ ಮೆರುಗನ್ನು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಪಥಸಂಚಲನದ ಕಮಾಂಡರ್ ನಿಂದ ಗೌರವ ಸ್ವೀಕರಿಸಿ, ಪ್ಯಾರೆಡ್ ವೀಕ್ಷಿಸಿದರು. ಬಳಿಕ ಜಿಲ್ಲೆಯ ಜನತೆಗೆ ಸಂದೇಶ ನೀಡಿದರು. ಕನ್ನಡಿಗರಿಗೆ ರಾಜ್ಯೋತ್ಸವ ನಿತ್ಯನೂತನವಾಗಿರಬೇಕು ಅದು ನವೆಂಬರ್ […]

ಪಟ್ಟಿಯಲ್ಲಿ ಹೆಸರು, ಫೋಟೋ ಇಲ್ವಾ? ಓಟು ಹಾಕಲು ಅಸಾಧ್ಯ ಗೊತ್ತಾ?

Saturday, October 20th, 2012
Vote for election

ಮಂಗಳೂರು: ಭಾರತದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಸಮೇತ ಹೆಸರು ಸೇರ್ಪಡೆಗೆ ಇದೀಗ ದ.ಕ. ಜಿಲ್ಲಾಡಳಿತ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಒಂದು ವೇಳೆ ಅಕ್ಟೋಬರ್ 31ರೊಳಗೆ ನಿಮ್ಮ ಹೆಸರನ್ನು ನೊಂದಾಯಿಸದಿದ್ದರೆ 2013ರಲ್ಲಿ ನಡೆಯುವ ರಾಜ್ಯ ವಿಧಾನ ಸಭೆ ಅಥವಾ ಲೋಕಸಭಾ ಚುನಾವಣೆಯಲ್ಲಿ ಓಟು ಹಾಕಲು ನಿಮಗೆ ಸಾಧ್ಯವಿಲ್ಲ. ನಿಮ್ಮ ನಿಮ್ಮ ಮತ ಚಲಾಯಿಸುವ ಹಕ್ಕನ್ನು ಕೈಯಾರೆ ಕಳಕೊಳ್ಳುವಿರಿ. 2013ರ ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ […]

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಸೇವಾ ಕೌಂಟರ್‌ ಪುನರಾರಂಭ

Monday, October 3rd, 2011
Auto Pre Paid counter

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ ಮತ್ತು ಬಿಜೈ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ಗಳನ್ನು ರವಿವಾರ ಆರಂಭಿಸಲಾಯಿತು. ದ.ಕ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಹಕಾರದಲ್ಲಿ ಎಸೋಸಿಯೇಶನ್‌ ಆಫ್‌ ಟ್ರಾವಲ್‌ ಏಜಂಟ್ಸ್‌ ಈ ಕೌಂಟರ್‌ಗಳನ್ನು ನಿರ್ವಹಣೆ ಮಾಡಲಿದೆ. ರೈಲು ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ನ್ನು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಅವರು ಉದ್ಘಾಟಿಸಿದರು. ಬಳಿಕ ಮಾತನಾದಿದ ಅವರು ಪ್ರೀಪೇಯ್ಡ ಕೌಂಟರ್‌ನಲ್ಲಿ ಕೌಂಟರ್‌ ನಿರ್ವಹಣೆಗಾಗಿ 1 ರೂ.ವನ್ನು […]

ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್

Friday, December 3rd, 2010
ಜೆ. ಕೃಷ್ಣ ಪಾಲೆಮಾರ್

ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]