ಕೇಂದ್ರದ ವಿರುದ್ಧ ಕಾಂಗ್ರೆಸ್ ನ ಧನಂಜಯ ಅಡ್ಪಂಗಾಯ ತರಾಟೆ

Wednesday, April 11th, 2018
dananjay

ಮಂಗಳೂರು: ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಆಡಳಿತಾವಧಿಯ 2015-17ನೆ ಸಾಲಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ನಡೆದ ವಂಚನೆಯನ್ನು ನಿಂಯತ್ರಿಸಲಾಗದವರು ರಾಜ್ಯಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಕಿಡಿಕಾರಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷಗಳ ಅವಧಿಯಲ್ಲಿ ಪಿಎನ್‌ಬಿ, ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿರುವ ಭಾರೀ ವಂಚನೆ ಸೇರಿದಂತೆ ಒಟ್ಟು 17504 ಪ್ರಕರಣಗಳು ದಾಖಲಾಗಿವೆ. ಬ್ಯಾಂಕ್‌ಗಳಿಗೆ ಒಟ್ಟು […]

ಪುತ್ತೂರು ಬಳಿ ಗುಡುಗು ಸಿಡಿಲಿನ ಅಬ್ಬರ… ಓರ್ವ ಸಾವು, ಇಬ್ಬರಿಗೆ ಗಾಯ

Tuesday, March 20th, 2018
puttur

ಮಂಗಳೂರು: ಸಿಡಿಲು ಬಡಿಲು ವ್ಯಕ್ತಿವೋರ್ವ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕು ಸವಣೂರು ಗ್ರಾಮದ ಪುಣ್ಯಪ್ಪಾಡಿ ಎಂಬಲ್ಲಿ ಸಂಜೆ ನಡೆದಿದೆ. ಮೃತರನ್ನು ಧನಂಜಯ (35)ಎಂದು ಗುರುತಿಸಲಾಗಿದೆ. ಮೃತನ ಸಹೋದರಿ ಗೀತಾ ಹಾಗೂ ದೊಡ್ಡಪ್ಪ ಕುಂಡ ಎಂಬುವರು ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡಿಕೆ ಕ್ಯಾನ್ಸರ್‌ ಕಾರಕ ವರದಿ ಹಿಂಪಡೆವ ತನಕ ಹೋರಾಟ: ಐವನ್‌ ಡಿ’ಸೋಜಾ

Friday, March 9th, 2018
ivan-desouza

ಸುಳ್ಯ: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ವರದಿಯನ್ನು ಹಿಂಪಡೆಯುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು. ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸದೇ ಇದ್ದರೆ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಡಿಕೆ ಬೆಳೆಗಾರರನ್ನು ಸೇರಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ವಿಷಕಾರಕ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ಬಗ್ಗೆ […]

ಸುಳ್ಳು ಹೇಳುವುದು ಬಿಜೆಪಿಯವರ ಹುಟ್ಟು ಗುಣ: ರಾಮಲಿಂಗಾರೆಡ್ಡಿ ವಾಗ್ದಾಳಿ

Tuesday, March 6th, 2018
ramlinga-reddy

ಮಂಗಳೂರು: ಬಿಜೆಪಿಯವರು ವಿನಾಕಾರಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿಯವರಿಗೆ ಸುಳ್ಳು ಹೇಳುವುದು ಹುಟ್ಟು ಗುಣವೆಂದು ರಾಜ್ಯದ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಮುಲ್ಕಿ -ಹಳೆಯಂಗಡಿಯ ಓಂ ಅಪಾರ್ಟ್‌ಮೆಂಟ್‌ ಸಭಾಂಗಣದಲ್ಲಿ ಜರುಗಿದ ಮೂಡಬಿದ್ರಿ ಕ್ಷೇತ್ರದ ಮೂಲ್ಕಿ ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಳೆದ ಐದು ವರ್ಷಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಶಿಕ್ಷಣ, ರಸ್ತೆ, ನೀರಾವರಿ ಸೇರಿದಂತೆ […]

ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್

Saturday, February 17th, 2018
gang-rape

ಮಂಗಳೂರು: ದಲಿತ ಯುವತಿಯ ಮೇಲೆ ಯುವಕರಿಬ್ಬರು ಅತ್ಯಾಚಾರ ನಡೆಸಿದ ಪೈಶಾಚಿಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಈ ಘಟನೆ ನಡೆದಿದೆ. ಗುರುವಾರ ತಡ ರಾತ್ರಿ ಈ ಘಟನೆ ನಡೆದಿದ್ದು ದಲಿತ ಯುವತಿಯ ಮೇಲೆ ಕಾಮುಕರು ನೆಲ್ಯಾಡಿ ಎಂಬಲ್ಲಿ ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು […]