ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ಕೊರೊನಾ ಸೋಂಕು ಇಳಿಮುಖವಾಗಲು ಪ್ರಾರ್ಥನೆ ಮಾಡಿದ ಸಚಿವ ಈಶ್ವರಪ್ಪ

Tuesday, May 18th, 2021
Eswarappa

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ  ಕೊರೊನಾ ಸೋಂಕಿತ ರು ಬೇಗ ಗುಣಮುಖರಾಗಲೆಂದು ಮತ್ತು ಸೋಂಕಿತರ ಸಂಖ್ಯೆ ಕಡಿಮೆಯಾಗಲಿ ಎಂದು ಸಚಿವ ಈಶ್ವರಪ್ಪ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ಪ್ರಾರ್ಥನೆ ಮಾಡಿದ್ದಾರೆ ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿರುವ ದೇವಾಲಯದಲ್ಲಿ,  ಆಯೋಜಿಸಿದ್ದ ಧನ್ವಂತರಿ ಹೋಮದಲ್ಲಿ, ಸಚಿವ ಈಶ್ವರಪ್ಪ ಕುಟುಂಬ ಸಮೇತ ಭಾಗವಹಿಸಿ, ಪೂಜೆ ನೆರವೇರಿಸಿದ್ದಾರೆ. ಈಶ್ವರಪ್ಪ ದಂಪತಿ ಸಮೇತ ಪೂರ್ಣಾಹುತಿ ನೆರವೇರಿಸಿ,  ಕೊರೊನಾ ಇಳಿಕೆಗೆ ಭಗವಂತನಿಗೆ ನಮಿಸಿದ್ದಾರೆ.