ಮಹಾಶಿವಾರಾತ್ರಿ ದಿನವೇ ಧರ್ಮಸ್ಥಳದ ಆನೆ ಲತಾ ಶಿವೈಕ್ಯ

Saturday, March 9th, 2024
Latha-elephant

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿಯ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಮಹಾಶಿವಾರಾತ್ರಿ ದಿನವೇ ಹೃದಯಾಘಾತದಿಂದ ಶಿವೈಕ್ಯವಾಗಿದೆ . ಆನೆ ಲತಾ ಧರ್ಮಸ್ಥಳ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಾ ಭಕ್ತರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವಾರ ಪ್ರೀತಿಗೆ ಪಾತ್ರವಾಗಿತ್ತು. 60 ವಯಸ್ಸಿನ ಲತಾ ಅಂತ್ಯಸಂಸ್ಕಾರವನ್ನು ಸಂಜೆ ಧರ್ಮಸ್ಥಳದಲ್ಲಿ ನೆರವೇರಿಸಲಾಗಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥನ ಸೇವೆ ಸಲ್ಲಿಸುತ್ತಾ ಬಂದಿದೆ. ಮಂಜುನಾಥನ ವಿಶೇಷ ಪೂಜೆ, ಉತ್ಸವ, ಲಕ್ಷದಿಪೋತ್ಸೋವ, ಶಿವರಾತ್ರಿ […]

ಮರಳು ಸಾಗಾಣಿಕೆ ಲಾರಿ ‌ಮಾಲೀಕರಿಂದ ಹಣ ಪಡೆದಿಲ್ಲ ಎಂದು‌ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

Saturday, February 12th, 2022
Haratalu Halappa

ಧರ್ಮಸ್ಥಳ : ಮರಳು ಸಾಗಾಣಿಕೆ ಲಾರಿ ‌ಮಾಲೀಕರಿಂದ ಹಣ ಪಡೆದಿಲ್ಲ ಎಂದು‌ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದೇನೆ‌ ಎಂದು‌ ಶಾಸಕ ಹರತಾಳು ಹಾಲಪ್ಪ ಮಾಧ್ಯಮಗಳಿಗೆ ತಿಳಿಸಿದರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರೋಪ ಹಾಗೂ ಆಹ್ವಾನದ ಹಿನ್ನೆಲೆ, ಸವಾಲು ಸ್ವೀಕರಿಸಿದ ಶಾಸಕ ಹರತಾಳು ಹಾಲಪ್ಪ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ ಮಾತನಾಡಿದರು. ಮಾಜಿ ಶಾಸಕರ ಆಹ್ವಾನದಂತೆ‌ ಆರು ದಿನಗಳ‌ ಮೊದಲೇ ಅವರಿಗೆ ತಿಳಿವಳಿಕೆ ಪತ್ರದ ಮೂಲಕ ನೋಟಿಸ್ ನಿಡಿ ಇಂದಿಗೆ ದಿನ ನಿಗದಿಪಡಿಸಲಾಗಿತ್ತು. ಅವರು ದಿನಾಂಕ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆನ್‌ಲೈನ್ ಬುಕ್ಕಿಂಗ್‌ ಸೇವೆಗಳು ರದ್ದು

Friday, January 7th, 2022
dharmasthala

ಮಂಗಳೂರು  : ಕೋವಿಡ್-19 ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳದ ಆನೆಗಳಿಗೆ ಉಪಾಹಾರದ ಯೋಗ ಭಾಗ್ಯ!

Saturday, January 1st, 2022
Dharmasthala-Elephant

ಉಜಿರೆ: ಶನಿವಾರ ಚತುರ್ದಶಿಯ ಪರ್ವ ದಿನ. ಹೊಸ ವರ್ಷದ ಶುಭಾರಂಭ. ಆನೆಗಳಾದ ಲತಾ, ಲಕ್ಷ್ಮಿ ಮತ್ತು ಶಿವಾನಿ ಅಮೃತವರ್ಷಿಣಿ ಸಭಾ ಭವನದಲ್ಲಿ ಸೂರ್ಯಾಸ್ತದ ಮೊದಲೆ ಶುದ್ಧ ಸಸ್ಯಾಹಾರವಾದ ಉಪಾಹಾರ ಸ್ವೀಕರಿಸಿದವು. ಸೇಬು, ಮುಸುಂಬಿ, ದಾಳಿಂಬೆ, ಸೌತೆ, ಮುಳ್ಳು ಸೌತೆ, ಕಬ್ಬು, ಬಾಳೆಹಣ್ಣು, ಜೋಳ, ಸಿಹಿಕುಂಬಳಕಾಯಿ, ಬಾಳೆಗಿಡ ಹೀಗೆ ಆನೆಗಳಿಗೆ ಇಷ್ವಾದ ಹಾಗೂ ಹಿತವಾದ ವಸ್ತುಗಳನ್ನು ಜೋಡಿಸಿ ಇಡಲಾಗಿತ್ತು. ಅವರವರಿಗೆ ಬೇಕಾದ, ಆಯ್ಕೆಯಾದ ಹಣ್ಣುಗಳನ್ನು ತರಕಾರಿಗಳನ್ನು ಆನೆಗಳು ತಿಂದು ಆನಂದಿಸಿದವು. ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ […]

ಧರ್ಮಸ್ಥಳ ವಸತಿ ಛತ್ರದ ನಿವೃತ್ತ ಪ್ರಬಂಧಕ ಸುರೇಂದ್ರ ಬಲ್ಲಾಳ್ ನಿಧನ

Monday, December 6th, 2021
Surendra Ballal

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಸುರೇಂದ್ರ ಬಲ್ಲಾಳ್ (66) ಸೋಮವಾರ ಹೃದಯಾಘಾತದಿಂದ ನಿಧನರಾದರು. ಅವರು ಕಬಡ್ಡಿ ಆಟಗಾರರಾಗಿದ್ದು ಹಲವಾರು ಪಂದ್ಯಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದರು. ಧರ್ಮಸ್ಥಳದಲ್ಲಿ ದೇವಸ್ಥಾನದ ವಸತಿ ಛತ್ರದಲ್ಲಿ ಪ್ರಬಂಧಕರಾಗಿ ಅವರು ಮೂವತ್ತು ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಧರ್ಮಸ್ಥಳ ಲಕ್ಷ ದೀಪೋತ್ಸವ: ರಾಜ್ಯಪಾಲರಿಂದ 89 ನೆ ಸರ್ವಧರ್ಮ ಸಮ್ಮೇಳನ ಅಧಿವೇಶನ ಉದ್ಘಾಟನೆ

Thursday, December 2nd, 2021
Dharmasthala-Deepothsava4

ಉಜಿರೆ: ತಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಗೌರವಿಸಿದಾಗ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯವಾಗುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಗುರುವಾರ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ 89 ನೆ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬದುಕು ಮತ್ತು ಬದುಕಲು ಬಿಡು ಎಂಬುದು ಜೈನಧರ್ಮದ ಶ್ರೇಷ್ಠ ತತ್ವವಾಗಿದೆ. ಸತ್ಯ, ಅಹಿಂಸೆ, ತ್ಯಾಗ, ಪರರ ಸೇವೆಯಿಂದ ಜೀವನ ಪಾವನವಾಗುತ್ತದೆ ಎಂದು ಭಗವಾನ್ ಮಹಾವೀರರು ಬೋಧಿಸಿದ್ದಾರೆ. ಸಾಧಿಸಿ ತೋರಿಸಿದ್ದಾರೆ. ಲೋಕಸಭೆಯಲ್ಲಿ ಹಾಗೂ ಸರ್ವೋಚ್ಛ […]

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Monday, November 29th, 2021
Dharmasthala-Deepothsava1

ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]

ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಲೋಕಾರ್ಪಣೆ

Sunday, November 28th, 2021
Dristi

ಉಜಿರೆ: ನಾನು ಯಾವುದೇ ರೀತಿಯ ಕೃತಕ ಮುಖವಾಡವಿಲ್ಲದೆ ಸ್ವಾಭಾವಿಕವಾಗಿ, ಸಹಜವಾಗಿ ಬದುಕುತ್ತಿದ್ದೇನೆ. ಇಂದಿನ ಪುಸ್ತಕ ಬಿಡುಗಡೆ ಸಮಾರಂಭವು ಕನ್ನಡಿಯ ಎದುರು ನಿಂತು ನನ್ನನ್ನು ನಾನು ಅವಲೋಕನ ಮಾಡುವಂತೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾನುವಾರ ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಡಾ. ಎಮ್. ಪ್ರಭಾಕರ ಜೋಶಿ ಬರೆದ ಲೇಖನಗಳ ಸಂಕಲನ ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಾವು ನಿತ್ಯವೂ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ವರ್ಷದ ಜನ್ಮ ದಿನಾಚರಣೆ

Thursday, November 25th, 2021
Veerendra Hegde Birthday

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ದೇವಳದ ನೌಕರರು, ಊರಿನ ನಾಗರಿಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ,  ಆಪ್ತರು, ಅಭಿಮಾನಿಗಳು ಹಾಗೂ ಭಕ್ತರು ಶ್ರದ್ಧಾ-ಭಕ್ತಿಯಿಂದ ಹೆಗ್ಗಡೆಯವರಿಗೆ ಜನ್ಮ ದಿನದ ಶುಭಾಶಯ ಅರ್ಪಿಸಿದರು. ಮೂಡಬಿದ್ರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆ ದಂಪತಿಗಳಿಗೆ ವಿಶೇಷ ಪ್ರಸಾದ ನೀಡಿ ಶುಭ ಹಾರೈಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಟ್ನಶೆಟ್ಟಿ ಸುಧೇಶ್ ಕುಮಾರ್ ಜೈನ್, ಬಸದಿಗಳ ಆಡಳಿತ ಮೊಕ್ತೇಸರ ಆನಡ್ಕ […]