ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿದ್ದಗೊಂಡ ಮಂಗಳೂರು ನಗರ

Wednesday, November 4th, 2020
BJP Executive

ಮಂಗಳೂರು  :  ನ. 5ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಮಹತ್ವದ ಸಭೆಗೆ ಮಂಗಳೂರು  ಸರ್ವ ರೀತಿಯಿಂದ ಸಿದ್ಧಗೊಂಡಿದೆ. ನಗರದೆಲ್ಲೆಡೆ ಬಿಜೆಪಿ ಬಂಟಿಂಗ್ಸ್‌ ಹಾಗೂ ಧ್ವಜಗಳನ್ನು ಮತ್ತು ಬಣ್ಣದ ಬೆಳಕುಗಳನ್ನು  ಅಳವಡಿಸಲಾಗಿವೆ. ನಗರದ ಎಂ.ಜಿ. ರಸ್ತೆಯ ವ್ಯಾಪ್ತಿಯಲ್ಲಿ ಬಿಜೆಪಿ ಬಂಟಿಂಗ್ಸ್‌, ವಿವಿಧ ಮುಖ್ಯ ರಸ್ತೆಗಳಲ್ಲಿ ಬಿಜೆಪಿ ಧ್ವಜಗಳನ್ನು ಅಳವಡಿಸಲಾಗಿವೆ. ಸಭೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ಬಿಜೆಪಿಯ ಅಗ್ರಗಣ್ಯ ನಾಯಕರ ಭಾವಚಿತ್ರಗಳ ಬ್ಯಾನರ್‌ಗಳನ್ನು ಅಳವಡಿಸಲಾಗಿವೆ. ನಗರದ ವಿವಿಧ ವೃತ್ತಗಳನ್ನು ಅಲಂಕರಿಸಲಾಗಿವೆ. […]

ಮಂಗಳೂರಿನ ನೆಹರೂ ಮೈದಾನಿನಲ್ಲಿ 67ನೇ ಸ್ವಾತಂತ್ರ್ಯೊತ್ಸವ ಆಚರಣೆ

Thursday, August 15th, 2013
independence-day

ಮಂಗಳೂರು : ಆಗಸ್ಟ್ 15 ಇಂದು ನಗರದ ನೆಹರೂ ಮೈದಾನದಲ್ಲ್ಲಿ 67ನೇ ಸ್ವಾತಂತ್ರ್ಯೊತ್ಸವ ಸಮಾರಂಭವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮನಾಥ ರೈಯವರು ಧ್ವಜರೋಹನವನ್ನು ನೆರವೇರಿಸಿದರು. ನಂತರ ಮಾತಾಡಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 67 ವರ್ಷಗಳಾದವು, ಮಹಾತ್ಮಗಾಂಧಿ ಹಾಗೂ ಹಲವಾರು ಮಹನೀಯರು ಅಹಿಂಸ ಮತ್ತು ಸತ್ಯಾಗ್ರಹದ ಮೂಲಕ ಬ್ರಿಟಿಷರ ವಿರುಧ್ದ ಹೋರಾಡಿ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅಸಂಖ್ಯ ನಾಯಕರಿಗೆ ಮತ್ತು ಪ್ರಜೆಗಳಿಗೆ ಸತ್ಯ, ಅಹಿಂಸೆ ಮತ್ತು ಶಾಂತಿಸಹಿಸ್ಣುತೆಗಳೇ ತಾರಕಮಂತ್ರಗಳಾಗಿದ್ದವು […]