ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ ನಕಲಿ ನೋಟುಗಳು

Thursday, December 2nd, 2021
Canara Bank

ಉಡುಪಿ : ದುಷ್ಕರ್ಮಿಗಳು 44 ನಕಲಿ ನೋಟುಗಳನ್ನು ಉಡುಪಿ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ  ಹಾಕಿರುವುದು ಪತ್ತೆಯಾಗಿವೆ. ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ನಲ್ಲಿ ಜು.14ರಿಂದ ಜು.15ರವರೆಗೆ ಆರ್‌ಬಿಐ ಡಿಪಾರ್ಟಮೆಂಟ್ ಬೆಂಗಳೂರು ಇವರು ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ 2018ರ ನ.17ರಿಂದ 2021ರ ಆ.31ರವರೆಗೆ ವಿವಿಧ ಶಾಖೆಗಳಿಂದ ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ಗೆ 44 ಖೋಟಾ ನೋಟುಗಳು ಬಂದಿರುವುದು ತಿಳಿದು ಬಂದಿದೆ. ದುಷ್ಕರ್ಮಿಗಳು ನಕಲಿ ನೋಟುಗಳನ್ನು ತಯಾರಿ ಮಾಡಿ, ನೈಜ ನೋಟು ಗಳಂತೆ […]

ಅತ್ತಾವರ ದೈವಸ್ಥಾನದ ಹುಂಡಿಯಲ್ಲಿ“ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟು ಪತ್ತೆ

Sunday, January 3rd, 2021
note

ಮಂಗಳೂರು  : ಅತ್ತಾವರದಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನ ದಲ್ಲಿ ದುಷ್ಕರ್ಮಿಗಳು ಪ್ರವೇಶಿಸಿ ದೇವರ ಹುಂಡಿಯಲ್ಲಿ “ಪ್ರಭು ಏಸು ಕ್ರಿಸ್ತನು ಮಾತ್ರ ಆರಾಧನೆ ಹೊಂದಲು ಸೂಕ್ತ ವ್ಯಕ್ತಿ”, “ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟುಗಳನ್ನು ಹಾಕಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ನೋಯಿಸುವ ದುರುದ್ದೇಶದಿಂದಲೇ ಈ ರೀತಿ ದುಷ್ಕೃತ್ಯ ಮಾಡಲಾಗಿದೆ, ಯಾವುದೇ ಚರ್ಚ್ ಅಥವಾ ಮಸೀದಿಯಲ್ಲಿ ಇಂತಹ ಘಟನೆಗಳು ನಡೆದಿದ್ದಲ್ಲಿ ಸರ್ಕಾರವು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಮತ್ತು ಮಾಧ್ಯಮಗಳು ಧ್ವನಿ ಎತ್ತುತ್ತವೆ. ಈ ಸಂದರ್ಭದಲ್ಲಿಯೂ ಸರ್ಕಾರವು ದುಷ್ಕರ್ಮಿಗಳ […]

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ – ಭಾರಿ ಪ್ರಮಾಣದ ಖೋಟಾ ನೋಟು ವಶ

Monday, November 2nd, 2020
Counterfeit note

ವಿಟ್ಲ: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಣಿಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡ ತನಿಖೆ ನಡೆಸಿದಾಗ ಬರೋಬ್ಬರಿ 5,5೦ಲಕ್ಷ (500ರ ನೋಟುಗಳು) ನಕಲಿ ನೋಟುಗಳು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಅಂತರ್ರಾಜ್ಯ ಖೋಟಾನೋಟು ಜಾಲ ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್ ಪಿನ್ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ […]