ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ನಗರ ಪೊಲೀಸ್ ಕಮಿಷನರ್

Monday, January 25th, 2021
commissioner

ಮಂಗಳೂರು :  ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತುಳು ಭಾಷೆಯಲ್ಲಿ ಮಂಗಳೂರಿನ ಜನತೆಗೆ ಗಣರಾಜ್ಯೋತ್ಸವ ಕುರಿತು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಪ್ರತಿವರ್ಷ ಜ.26ರಂದು ವಿಶ್ವದೆಲ್ಲೆಡೆ ದೇಶದ ಗಣರಾಜ್ಯೋತ್ಸವವನ್ನು ಭಾರೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನಗರದ ಸಮಸ್ತ ನಾಗರಿಕರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ತುಳು ಭಾಷೆಯಲ್ಲಿದ್ದು, ಕರಾವಳಿಯ ಜನತೆ ಸಂತಸ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ. ಪ್ರತಿ ವರ್ಷ ಜನವರಿ ಇರ್‌ವತ್ತ ಆಜೆಕ್ಕ್‌ (26) ಲೋಕೊಡು ನಮ್ಮ ಭಾರತ ದೇಶದ ಗಣರಾಜ್ಯೋತ್ಸವನ್‌ ಬಾರೀ ಗೌಜಿಡ್‌ […]

ಉಗ್ರರ ಪರ ಗೋಡೆ ಬರಹ ಬರೆದ ಇಬ್ಬರು ಆರೋಪಿಗಳ ಬಂಧನ

Saturday, December 5th, 2020
vikasa kumar

ಮಂಗಳೂರು: ಬಿಜೈ ಮತ್ತು  ಕೋರ್ಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ  ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ. ತೀರ್ಥಹಳ್ಳಿ ಮೂಲದ ಮುಹಮ್ಮದ್ ಶಾರೀಕ್ (22) ಮತ್ತು ಮಾಝ್ ಮುನೀರ್ ಅಹಮ್ಮದ್ (21) ಬಂಧಿತ ಆರೋಪಿಗಳು. ಪ್ರಚಾರ ಪಡೆಯುವ ಉದ್ದೇಶದಿಂದ ವಿವಾದಿತ ಪ್ರಚೋದನಕಾರಿ ಗೋಡೆ ಬರಹವನ್ನು ಬರೆದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಬಳಿಕ ಪೊಲೀಸ್ ವಶಕ್ಕೆ ನೀಡಲಾಗುತ್ತದೆ. ಆ ಬಳಿಕ […]

ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ

Friday, August 9th, 2019
CPC

ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ಅವರು ಶುಕ್ರವಾರ ಸಂಜೆ ಅಧಿಕಾರ ಸ್ವೀಕಾರ ಮಾಡಿದರು. ದ.ಕ. ಜಿಲ್ಲೆಯ ಜನತೆ ಕಾನೂನು ಮೀರುವವರಲ್ಲ. ಅಧಿಕಾರವನ್ನು ಚಾಲೆಂಜಿಂಗ್ ಆಗಿ ಸ್ವೀಕರಿಸುವೆ. ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ಕಾಳಜಿ ವಹಿಸುವುದಾಗಿ ಡಾ.ಪಿ.ಎಸ್.ಹರ್ಷ ಹೇಳಿದರು. ಜನಸಂಖ್ಯೆಗೆ ಅನುಗುಣ ಪೊಲೀಸರಿಲ್ಲ, ನಾವು ಶಕ್ತಿ ಮೀರಿ ಜನರ ರಕ್ಷಣೆ ಮುಂದಾಗುತ್ತೇವೆ. ಜನಪರ ಸೇವೆಗಾಗಿ ತಂಡದ ಪರವಾಗಿ ನಿಲ್ಲುತ್ತೇವೆ. ಜನಪ್ರತಿನಿಧಿ, ಸಮುದಾಯಗಳ ನಾಯಕರ, ಜನರ ಸಹಕಾರ ಕೇಳುವೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ತರುತ್ತೇವೆ ಎಂದು ಹೇಳಿದರು. ಈ ಸಂದರ್ಭ […]