ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

Monday, July 27th, 2020
ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ಹಾಲೆರೆಯುವ ಸಂದರ್ಭದಲ್ಲಿ ನಿಜ ನಾಗರ ದರ್ಶನ ನೀಡಿ ಅರ್ಚಕರಿಗೆ ಮತ್ತು ಅಲ್ಲಿ ನೆರೆದಿದ್ದವರಿಗೆ ಆಶ್ಚರ್ಯಮೂಡಿಸಿದೆ. ಮೊದಲಿಗೆ ದೇಗುಲದ ನಾಗಪ್ರತಿಷ್ಟೆ ಮಂಟಪದ ಬಳಿ, ನಂತರ ಅರ್ಚಕರು ನಾಗಮಂಟಪದಲ್ಲಿ ಪೂಜೆ ನಡೆಸುತ್ತಿದ್ದ ವೇಳೆ ಹೊರಾಂಗಣದಲ್ಲಿ ಹಾವು ಪ್ರತ್ಯಕ್ಷವಾಗಿದೆ ಎನ್ನಲಾಗಿದೆ. ನಾಗರಪಂಚಮಿಯನ್ನು ಶನಿವಾರ ಪೂರ್ವ ಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. […]