ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Thursday, March 27th, 2014
Shoba Karandlaje

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.

ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಜನಾರ್ದನ ಪೂಜಾರಿ ನಾಮಪತ್ರ ಸಲ್ಲಿಕೆ

Thursday, March 27th, 2014
Poojary

ಮಂಗಳೂರು: ನಾಮಪತ್ರ ಸಲ್ಲಿಸಲು ಕೊನೆಯದಿನವಾದ ಬುಧವಾರ ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಜನಾರ್ದನ ಪೂಜಾರಿ ನಾಮಪತ್ರ ಸಲ್ಲಿಸಿದರು. ಆರೋಗ್ಯ ಸಚಿವ ಯು ಟಿ ಖಾದರ್‌ ,ಜಿಲ್ಲಾಉಸ್ತುವಾರಿ ಹಾಗೂ ಅರಣ್ಯ ಸಚಿವ ರಮನಾಥ್‌ ರೈ, ಶಾಸಕ ಜೆ. ಆರ್‌ .ಲೋಬೋ, ಮತ್ತು ಮುಖಂಡ ಪಿ ವಿ ಮೋಹನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಮ ಪೂಜಾರಿ ಅವರು, ಜನತೆ ಕೊಮುವಾದಿಗಳನ್ನು ತಿರಸ್ಕರಿಸುವುದು ಖಂಡಿತ ಎಂದರು. ಕಾಂಗ್ರೆಸ್ ಮಾಡಿದ ಅಭಿವ್ರುದ್ದಿ ಕೆಲಸಗಳೇ ನನಗೆ ಗೆಲುವು […]

ಲೋಕಸಭೆ ಉಪ ಚುನಾವಣೆ ಶಾಸಕಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.

Saturday, August 3rd, 2013
Anitha-Kumaraswami

ಬೆಂಗಳೂರು: ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದರು. ತನ್ನ ಪತಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾ ಅವರು ಉಪಸ್ಥಿತರಿದ್ದರು. ಇಲ್ಲಿ  ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಸ್ಪರ್ಧಿಸುತ್ತಿದ್ದು, ಇಬ್ಬರ ನಡುವೆ ನೇರ ಹಣಾಹಣಿ ಏರ್ಪಡಲಿದೆ. […]