ಜಿಲ್ಲಾ ಕಾಂಗ್ರೇಸ್ ಮುಖಂಡ ಬೆಂಗ್ರೆ ಶೇಖರ್ ಸುವರ್ಣ ನಿಧನ

Friday, March 15th, 2024
shekara-Bangera

ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಂಗ್ರೇಸ್ ಪಕ್ಷದ ಮಂಗಳೂರು ದಕ್ಷಿಣದ ವಿಭಾಗದ ಉಪಾಧ್ಯಕ್ಷರಾಗಿ ರಾಜಕೀಯ ಸೇವೆಯನ್ನು ಮಾಡಿದ ಶ್ರೀಯುತರು ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷರಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದಿದ್ದರು. ಬೆಂಗ್ರೆ ಶೇಷಾಶಯನ ಮಂದಿರ ಅಲ್ಲದೆ ಇತರ ಧಾರ್ಮಿಕ […]

ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ

Wednesday, February 7th, 2024
Padmanabha naringana

ಮಂಗಳೂರು : ಪದ್ಮನಾಭ ನರಿಂಗಾನ (77)ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರುಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ನಿಧನಕ್ಕೆ […]

ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ನಿಧನ

Tuesday, January 16th, 2024
Ramanatha-Hegde

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ (72) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನ ಜ.17ರಂದು ಮಂಗಳಾದೇವಿ ದೇವಸ್ಥಾನ ಸಮೀಪದ ಸ್ವಗೃಹದಲ್ಲಿ ಬೆಳಗ್ಗೆ 8.00 ರಿಂದ 11.00 ವರೆಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರು ಪತ್ನಿ, ಪುತ್ರ […]

ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

Saturday, January 6th, 2024
ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

ಉಳ್ಳಾಲ: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನರಾದರು. ನಿಧನರಾದರು. ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗ ಮೊದಲಾದ ಸಾಹಿತ್ಯ ಲೋಕಕ್ಕೆ ಅಪಾರ ಸೇವೆಯನ್ನು ನೀಡಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27‌ ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಕೈರಂಗಳ ಶಾಲೆಯ ನಿವೃತ್ತ ಅಧ್ಯಾಪಕ ಕೆ.ಯೆನ್. ಹೊಳ್ಳ ನಿಧನ

Tuesday, November 21st, 2023
KN-Holla

ಮಂಗಳೂರು : ಕೈರಂಗಳ ಶಾಲೆಯ ನಿವೃತ್ತ ಅಧ್ಯಾಪಕ, ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ಗೌರವಾಧ್ಯಕ್ಷ , ಸಂಘಟಕ, ಕಲಾವಿದ, ವೈದ್ಯ, ಕೈರಂಗಳ ನಾರಾಯಣ ಹೊಳ್ಳ ಅವರು ಇಂದು ವಿಧಿವಶರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕೋಳ್ಯೂರಿನವರಾದ ಇವರು (ಕೆ. ಯೆನ್. ಹೊಳ್ಳ ) ಕೈರಂಗಳ ನಾರಾಯಣ ಹೊಳ್ಳ ಎಂದೇ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಕೈರಂಗಳ ಶಾಲೆಯಲ್ಲಿ ಅಧ್ಯಾಪಕರಾಗಿದ್ದ ನಾರಾಯಣ ಹೊಳ್ಳರು, ಹೋಮಿಯೋಪತಿ ಚಿಕಿತ್ಸಾ ಪದ್ಧತಿಯನ್ನು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಇನ್ನು ಯಕ್ಷಗಾನದ ವೇಷಭೂಷಣಗಳ ನಿರ್ವಹಣೆ, ಹವ್ಯಾಸಿ ಕಲಾವಿದರಿಗೆ ಬಣ್ಣ […]

ಜೆಡಿಯಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಎಸ್. ಹೆಗ್ಡೆ ನಿಧನ

Thursday, October 12th, 2023
jayalakshmi-Hegde

ಮಂಗಳೂರು : ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅಡ್ಯಾರು ಮಹಿಳಾ ಮಂಡಲದ ಅಧ್ಯಕ್ಷರಾಗಿ 40 ವರ್ಷ ಸೇವೆ ಸಲ್ಲಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಮುಖ್ಯ ಕಾರ್ಯಕರ್ತರಾಗಿಯೂ ಉಪಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು ಗ್ರಾಮ ಪಂಚಾಯಿತಿನಲ್ಲಿ ಎರಡು ಅವಧಿಗೆ ಆಯ್ಕೆಯಾಗಿ ಒಂದು […]

ಆನಂದ ಪೂಜಾರಿ ಹಳೆಯಂಗಡಿ ನಿಧನ

Friday, August 27th, 2021
Ananda Poojary

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು. ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೋರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

Thursday, August 26th, 2021
DM Kulal

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ತಾಯಿ,ಪತ್ನಿ,ಒಂದು ಹೆಣ್ಣು,ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ […]

ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಗಣ್ಯರ ಸಂತಾಪ

Friday, July 2nd, 2021
haldodderi-sudhindra

ಬೆಂಗಳೂರು  : ಖ್ಯಾತ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಚಿವರಾದ ಕೆ.ಎಸ್.ಈಶ್ವರಪ್ಪರವರ ತೀವ್ರ ಶೋಕ ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ  ನಿಧನಕ್ಕೆ, […]

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Thursday, June 17th, 2021
vijayakrishna

ಬೆಂಗಳೂರು  : ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ..ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2000 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಕಾರಣೀಭೂತರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ […]