ಸಸಿಕಾಂತ್ ಸೆಂಥಿಲ್ ಎಸ್. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Saturday, October 21st, 2017
Sasikant senthil

ಮ0ಗಳೂರು: ಸಸಿಕಾಂತ್ ಸೆಂಥಿಲ್ ಎಸ್. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಸಸಿಕಾಂತ್ ಸೆಂಥಿಲ್ ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಪ್ರಕಾಶ್ ಅಧಿಕಾರ ಸ್ವೀಕಾರ

Monday, December 3rd, 2012
N. Prakash Mangalore New DC

ಮಂಗಳೂರು :ಮಂಗಳೂರು ಮಾಜಿ ಜಿಲ್ಲಾದಿಕಾರಿ ಡಾ.ಎನ್.ಎಸ್.ಚನ್ನಪ್ಪಗೌಡ ರವರು ನೂತನ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ದ.ಕ.ಜಿಲ್ಲೆಯ 123ನೇ ಜಿಲ್ಲಾಧಿಕಾರಿಯಾಗಿ ಎನ್.ಪ್ರಕಾಶ್ ರವರು ಅಧಿಕಾರ ವಹಿಸಿಕೊಂಡರು. ಈ ಮೊದಲು ಇವರು ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 1955 ರಲ್ಲಿ ಜನಿಸಿದ ಇವರು ನಂಜನಗೂಡಿನಲ್ಲಿ ತನ್ನ ಪದವಿವರೆಗಿನ ಶಿಕ್ಷಣವನ್ನು ಪೂರೈಸಿ ನಂತರ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಇತಿಹಾಸ ವಿಭಾಗದಲ್ಲಿ 2ನೇ ರ್‍ಯಾಂಕ್ ನೊಂದಿಗೆ ಉತ್ತೀರ್ಣರಾಗಿ ನಂತರ ರೇಣುಕಾಚಾರ್ಯ […]