ಮೂಲರಪಟ್ಣ ನೂತನ ಸೇತುವೆ ವಾಹನ ಸಂಚಾರಕ್ಕೆ ಮುಕ್ತ

Friday, November 12th, 2021
mularapatna

ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು […]

ಪಾಣೆಮಂಗಳೂರು ನೂತನ ಸೇತುವೆ ಬಳಿ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

Monday, July 13th, 2020
Panemangaluru

ಬಂಟ್ವಾಳ : ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಮಹಿಳೆ ಗೋಪಿ ಪೂಜಾರಿ(49) ಎಂಬುವರ ಮೃತದೇಹ ಸೋಮವಾರ ತುಂಬೆ ಸಮೀಪದಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಹಿಳೆ ಪಾಣೆಮಂಗಳೂರು ನೂತನ ಸೇತುವೆ ಬಳಿಯಿಂದ ಶನಿವಾರ ನಾಪತ್ತೆಯಾಗಿರುವ ಬಗ್ಗೆ ಗುಮಾನಿ ಇತ್ತು. ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳದ ಸಿಬ್ಬಂದಿ ಮಹಿಳೆಗಾಗಿ ಭಾನುವಾರ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಬಿ.ಸಿ.ರೋಡಿನ ಚಿಕ್ಕಯ್ಯಮಠದಲ್ಲಿರುವ ಅಕ್ಕನ ಮನೆಗೆ ಕೆಲವು ದಿನಗಳ ಹಿಂದೆ ಬಂದಿದ್ದ ಮಹಿಳೆ ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದರು. […]