ಕುಸಿದು ಬಿದ್ದು ಮೃತಪಟ್ಟ ಹೋಟೆಲು ಕಾರ್ಮಿಕ, ಕೊರೊನಾ ಎಂದು ವದಂತಿ

Friday, May 29th, 2020
dead body

ಉಪ್ಪಿನಂಗಡಿ : ಮನೆಯವರಿಂದ ದೂರವಾಗಿದ್ದ ಉಡುಪಿ ಮೂಲದ 56 ವರ್ಷ ವ್ಯಕ್ತಿಯೋರ್ವ ಪರಿಚಯಸ್ಥರ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ  ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ದರ್ಬೆಯಲ್ಲಿ ಬುಧವಾರ ನಡೆದಿದೆ. ಮೃತ ವ್ಯಕ್ತಿ ಉಪ್ಪಿನಂಗಡಿಯ ಹೊಟೇಲ್‌‌ವೊಂದರಲ್ಲಿ ಕಾರ್ಮಿಕರಾಗಿದ್ದರು. ಲಾಕ್ ಡೌನ್ ಕಾರಣದಿಂದ ಹೊಟೇಲ್‌‌ ಮುಚ್ಚಿದ ಕಾರಣ ಕಾರಣ ಅವರು ನೆಕ್ಕಿಲಾಡಿಯ ಪರಿಚಯಸ್ಥರ ಮನೆಯಲ್ಲಿದ್ದರು. ಈ ನಡುವೆ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ಯಾರೋ ವದಂತಿ ಹಬ್ಬಿಸಿದ್ದು, ಕೊರೊನಾ ಭಯದಿಂದಾಗಿ ಯಾರೂ ಕೂಡಾ ಶವದ ಬಳಿ ಬರಲು ಒಪ್ಪದೆ  ಹೆಣ ಬೀದಿಯಲ್ಲಿಯೇ ಉಳಿಯುವಂತಾಯಿತು. ತಂದೆ ಮೃತಪಟ್ಟ ವಿಷಯ […]

ಪುತ್ತೂರು: 700 ಕೆಜಿ ಗೋಮಾಂಸ ಅಕ್ರಮ ಸಾಗಣೆ – ಮೂವರನ್ನು ಬಂಧಿಸಲಾಗಿದೆ

Friday, August 16th, 2019
go-mamsa

ಪುತ್ತೂರು : ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದಿರುವ ಪುತ್ತೂರು ನಗರ ಠಾಣೆಯ ಪೊಲೀಸರು, ಸುಮಾರು 700 ಕಿ. ಗ್ರಾಂ. ಮಾಂಸ ಸಹಿತ ಮೂವರನ್ನು ಬಂಧಿಸಿದ್ದಾರೆ. ಕುದ್ರೋಳಿ ಕರ್ಬಲ ರಸ್ತೆಯ ಮುನಿರಾ ಮಂಜಿಲ್‌ ನಿವಾಸಿ ಮುಸ್ತಾಕ್‌ (50), ಕಲ್ಲಡ್ಕ ಗೋಳ್ತ ಮಜಲು ನಿವಾಸಿ ತೌಫೀಕ್‌ (26) ಹಾಗೂ ಕಲ್ಲಡ್ಕ -ವಿಟ್ಲ ರಸ್ತೆ ನಿವಾಸಿ ಮಹಮ್ಮದ್‌ ಕಬೀರ್‌ (40) ಬಂಧಿತರು. ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಮಹೇಂದ್ರ ಝೈಲೋ ಕಾರಿನಲ್ಲಿ […]