ರಸ್ತೆ ಅಗಲೀಕರಣ, ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ನೆಲಸಮ

Friday, January 28th, 2022
Kalladka Prabhakara bhat

ಬಂಟ್ವಾಳ : ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣದ ಕಾಮಗಾರಿ ರಾತ್ರಿಹಗಲು ಎನ್ನದೆ ಭರದಿಂದ ನಡೆಯುತ್ತಿದ್ದು. ರಸ್ತೆಯ ಪಕ್ಕದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ . ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ರಸ್ತೆ ಅಗಲೀಕರಣ ಕಾಮಗಾರಿಗಾಗಿ […]

ನಗರದ ಸೆಂಟ್ರಲ್ ಮಾರುಕಟ್ಟೆ ಹಳೆ ಕಟ್ಟಡ ನೆಲಸಮ

Wednesday, May 26th, 2021
central Market

ಮಂಗಳೂರು :  ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆಯ ಕಟ್ಟಡ ನಿರ್ಮಾಣಕ್ಕಾಗಿ ನಗರದ ಸೆಂಟ್ರಲ್ ಮಾರುಕಟ್ಟೆಯ  ಈಗಿರುವ  ಕಟ್ಟಡವನ್ನು ಬುಧವಾರ ಮೇ 26 ರಂದು ನೆಲಸಮ ಮಾಡಲಾಯಿತು. ಸುಮಾರು 55 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಸೆಂಟ್ರಲ್ ಮಾರುಕಟ್ಟೆಯ ಕಟ್ಟಡ ಪೊಲೀಸ್ ಬಂದೋಬಸ್ತ್‌ನಲ್ಲಿ ಜೆಸಿಬಿ ಬಳಸಿಕೊಂಡು ಬುಧವಾರ ಪೂರ್ವಾಹ್ನ ಸುಮಾರು 11 ಗಂಟೆಗೆ ಒಳಗಿನ ಕಟ್ಟಡವನ್ನು ನೆಲಸಮ ಮಾಡಲಾಯಿತು. ಯಾರೂ ಒಳಗೆ ಪ್ರವೇಶಿದಂತೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು.  ಈ ಮಧ್ಯೆ ವಿಷಯ ತಿಳಿದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮುಖಂಡರು, ಮನಪಾದ ವಿಪಕ್ಷ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸೆಂಟ್ರಲ್ […]