ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ

Tuesday, February 6th, 2024
Kadaba

ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ. ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು […]

ಹೊತ್ತಿ ಉರಿದ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ : ಚಾಲಕ ಸಜೀವ ದಹನ

Thursday, March 25th, 2021
lorry

ನೆಲ್ಯಾಡಿ : ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ. ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಟ್ರಾವೆಲ್ಸ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. […]

ಬೆಳ್ತಂಗಡಿ : ಹಲ್ಲು ನೋವಿನ ಚಿಕಿತ್ಸೆಗೆ ಬಂದ ಮಹಿಳಾ ರೋಗಿಯೊಂದಿಗೆ ಅಸಭ್ಯ ವರ್ತನೆ; ದೂರು ದಾಖಲು

Thursday, January 30th, 2020
sudhakar

ಬೆಳ್ತಂಗಡಿ : ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು […]

ನೆಲ್ಯಾಡಿ: ಜೀಪ್ ಹಾಗೂ ಕಂಟೇನರ್ ಡಿಕ್ಕಿ, ಜೀಪು ಚಾಲಕ ಮೃತ್ಯು

Monday, December 30th, 2019
jeep-accident

ಉಪ್ಪಿನಂಗಡಿ : ಜೀಪ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿ ಮೃತಪಟ್ಟು, ಆರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪ್ ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತದ್ದ ಸಂದರ್ಭದಲ್ಲಿ ಮಾರ್ಗ […]

ನೆಲ್ಯಾಡಿ : ಅಕ್ರಮ 22 ಜಾನುವಾರು ಸಾಗಾಟ; ಓರ್ವ ಆರೋಪಿ ಬಂಧನ

Saturday, October 19th, 2019
Akrama-jaanuvaru

ನೆಲ್ಯಾಡಿ : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೊಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆದು 22 ಜಾನುವಾರುಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ತುಮಕೂರು ನಿವಾಸಿ ನವಾಝ್ ಬಂಧಿತ ಆರೋಪಿ. ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಪೊಲೀಸ್ ವಾಹನವನ್ನು ಕಂಡು ಪರಾರಿಯಾಗಲು ಯತ್ನಿಸಿದ ಲಾರಿಯನ್ನು ಬೆನ್ನಟಿದ ಪೊಲೀಸರು ಕೋಲ್ಪೆಯಲ್ಲಿ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ 22 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿದ್ದುದು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ […]

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ ಮರು ಡಾಂಬರೀಕರಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Friday, September 27th, 2019
jilaadhikaari

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ನಿರ್ಮಾಣಗೊಂಡಿರುವ ಹೊಂಡಗಳನ್ನು ಮುಚ್ಚಿಸಿ ಹೆದ್ದಾರಿ ಮರು ಡಾಂಬರೀಕರಣಗೊಳಿಸುವಂತೆ ಮಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ-ಬಿ.ಸಿ ರೋಡ್ ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ನಿರ್ಮಾಣಗೊಂಡಿರುವ ಹೊಂಡಗಳನ್ನು ಮುಚ್ಚಿಸಿ ಹೆದ್ದಾರಿ ಮರು ಡಾಂಬರೀಕರಣಗೊಳಿಸುವ ಸಂಬಂಧ ಡಿಸಿಯವರನ್ನು ಭೇಟಿ ಮಾಡಲಾಯಿತ್ತು. ಸೆ.30ರೊಳಗೆ ತಮ್ಮ ಮನವಿಗೆ ಸ್ಪಂದನೆ ಸಿಗದೇ ಇದ್ದಲ್ಲಿ ಅಕ್ಟೋಬರ್‌ 10ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ75ರ ಶಿರಾಡಿ […]

ಕಾರುಗಳ ನಡುವೆ ಡಿಕ್ಕಿ 5 ಮಂದಿಗೆ ಗಾಯ

Monday, May 6th, 2019
Nelyadi

ಮಂಗಳೂರು : ಆ್ಯಂಬುಲೆನ್ಸ್ಗೆ ಸೈಡ್ ಕೊಡುವ ಸಂದರ್ಭದಲ್ಲಿ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿವೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಪುತ್ತೂರಿನ ಮಾರುತಿ ಸೆಲರಿಯೋ ಅಪಘಾತಕ್ಕೊಳಗಾಗಿವೆ. ಅತೀ ವೇಗದಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸಂತ್ರಸ್ತರಿಗೆ ಯಾವುದೇ ಸರ್ವೆ ನಡೆಸಲಾಗುತ್ತಿಲ್ಲ: ಜಿಲ್ಲಾಧಿಕಾರಿ ಕುಮಾರ್

Wednesday, September 26th, 2018
kumar

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಈಗಾಗಲೇ ಭೂಮಿಯನ್ನು ಬಿಟ್ಟು ಕೊಟ್ಟಿರುವ ಸಂತ್ರಸ್ತರ ಭೂಮಿಯಲ್ಲಿ ಮತ್ತೊಮ್ಮೆ ಸರ್ವೆ ನಡೆಸಿದ ವಿಚಾರ ಆತಂಕ ಸೃಷ್ಟಿಸಿತ್ತು. ಸದ್ಯ ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆತಂಕ ನಿವಾರಣೆ ಮಾಡಲಾಯಿತು. ಪುತ್ತೂರು ತಾಲೂಕಿನ ನೆಲ್ಯಾಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಹೆದ್ದಾರಿ ಬದಿಯಲ್ಲಿದ್ದಂತಹ ಹಲವರ ಭೂಮಿಯನ್ನು ಒತ್ತುವರಿ ಮಾಡಲಾಗಿತ್ತು. ಈ ಒತ್ತುವರಿಯ ಸಂತ್ರಸ್ತರಿಗೆ ಪರಿಹಾರವನ್ನೂ ವಿತರಿಸಲಾಗಿತ್ತು. ಇದೆಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅದೇ ಭಾಗದಲ್ಲಿ ಎಲ್‌ ಆಂಡ್ ಟಿ ಕಂಪನಿಯವರು ಇತೀಚೆಗೆ […]

ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್

Saturday, February 17th, 2018
gang-rape

ಮಂಗಳೂರು: ದಲಿತ ಯುವತಿಯ ಮೇಲೆ ಯುವಕರಿಬ್ಬರು ಅತ್ಯಾಚಾರ ನಡೆಸಿದ ಪೈಶಾಚಿಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಈ ಘಟನೆ ನಡೆದಿದೆ. ಗುರುವಾರ ತಡ ರಾತ್ರಿ ಈ ಘಟನೆ ನಡೆದಿದ್ದು ದಲಿತ ಯುವತಿಯ ಮೇಲೆ ಕಾಮುಕರು ನೆಲ್ಯಾಡಿ ಎಂಬಲ್ಲಿ ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು […]

ರಸ್ತೆ ಅಫಘಾತ ಮಂಜೇಶ್ವರ ಆನೆಕಲ್ಲು ನಿವಾಸಿ ಸಾವು

Tuesday, August 9th, 2011
Car Accident/ ರಸ್ತೆ ಅಫಘಾತ

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 48 ರ ನೆಲ್ಯಾಡಿ ಸಮೀಪದ ಗೋಳಿತ್ತೂಟ್ಟು ಎಂಬಲ್ಲಿ ರಿಟ್ಜ್ ಕಾರು ಮತ್ತು ಟಿಪ್ಪರ್‌ ಡಿಕ್ಕಿ ಹೊಡೆದು ಓರ್ವ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೇ ಮೃತ ಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರು ಮಂಜೇಶ್ವರ ಆನೆಕಲ್ಲು ನಿವಾಸಿ ಮಮ್ಮದರ ಪುತ್ರ ಅಬ್ದುಲ್‌ ರಝಾಕ್‌(36ವ).ಇವರು ಈಗ 2 ವರ್ಷಗಳಿಂದ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿಯಲ್ಲಿ ಬಾಡಿಗೆಗೆ ವಾಸವಿದ್ದು ಬ್ರೋಕರ್‌ ಕೆಲಸ ಮಾಡುತ್ತಿದ್ದರು.ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ಟಿಪ್ಪರ್‌ ಜಲ್ಲಿ ಇಳಿಸಲು ಹಿಂದಕ್ಕೆ ಚಲಾಸುತ್ತಿದ್ದಾಗ […]