ಮಂಗಳೂರು ನೆಹರು ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Friday, January 26th, 2024
Republicday

ಮಂಗಳೂರು : ನೆಹರು ಮೈದಾನದಲ್ಲಿ ನಡೆದ 75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ಮಾಡಿದರು. ಪರೇಡ್ ವೀಕ್ಷಣೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ‘ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದ ರಾಷ್ಟ್ರನಾಯಕರನ್ನು ತೆರೆಮರೆಗೆ ಸರಿಸಿ ಅವರ ಬಗ್ಗೆ ಯುವತಲೆಮಾರಿಗೆ ತಿಳಿಯದಂತೆ ಮಾಡುವ ಒಳಸಂಚು ರಾಷ್ಟ್ರದಲ್ಲಿ ನಡೆಯುತ್ತಿದೆ. ಇದು ಕಳವಳಕಾರಿ ಸಂಗತಿ‘ ಎಂದರು.  ಆದರ್ಶ ಪುರುಷ ಶ್ರೀರಾಮನಂತೆ ನಾಡಿನ ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ರಾಮರಾಜ್ಯದ ಕನಸು […]

ಡಾ. ಐ ಶಶಿಕಾಂತ್ ಜೈನ್‌ಗೆ ಜಿಲ್ಲಾ ಪ್ರಶಸ್ತಿ

Thursday, November 1st, 2018
ujjiri

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್‌ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನೆಹರು ಮೈದಾನದಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಆಚರಣೆ..!

Thursday, November 1st, 2018
Kannada-Rajyotsava43

ಮಂಗಳೂರು: ಕನ್ನಡ ರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ಸೇರಿರುವ ಕನ್ನಡಾಭಿಮಾನಿಗಳಿಗೆ, ಗಣ್ಯರಿಗೆ, ಸಾರ್ವಜನಿಕ ಬಂಧುಗಳಿಗೆ, ಅಧಿಕಾರಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಮಾಧ್ಯಮ ಸ್ನೇಹಿತರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳುತ್ತಾ ಯು.ಟಿ.ಖಾದರ್ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಎಂಟು ಜ್ಞಾನಪೀಠ ಪ್ರಶಸ್ತಿ ಗಳಿಸಿರುವ ಕನ್ನಡ ನಾಡಿನಲ್ಲಿ ಕುವೆಂಪು ಅವರ ‘ಕನ್ನಡ ನಾಡಿಗೆ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ’ ಎಂಬ ಕರೆಗೆ ಓಗೊಟ್ಟು ನಾವೆಷ್ಟು ಮಂದಿ ಕನ್ನಡಕ್ಕಾಗಿ ಕೈ ಎತ್ತಿದ್ದೇವೆ? ಕನ್ನಡಕ್ಕಾಗಿ ಕೊರಳೆತ್ತಿದ್ದೇವೆ? ವರ್ಷಕ್ಕೊಮ್ಮೆ ಬರುವ ಕನ್ನಡ ರಾಜ್ಯೋತ್ಸವದ ಒಂದು ದಿನ […]

ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತಿದೆ: ಕುಮಾರಸ್ವಾಮಿ

Friday, December 29th, 2017
kumaraswamy

ಮಂಗಳೂರು: ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತದೆ. ವ್ಯಾಪಕ ಅಭಿವೃದ್ಧಿಗೆ ಇಲ್ಲಿ ಉತ್ತಮ ಅವಕಾಶ ಇದೆ. ಆದರೆ, ಭಯದ ವಾತಾವರಣ ನಿರ್ಮಾಣ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 9ರಂದು ಮಂಗಳೂರಿನಲ್ಲಿ ಕಡಲ ತಡಿಗೆ ಜೆಡಿಎಸ್‌ನ ಸೌಹಾರ್ದ ನಡಿಗೆ ಎನ್ನುವ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರು ಮೈದಾನದಲ್ಲಿ ಬೃಹತ್ ಐತಿಹಾಸಿಕ ಸಭೆ ನಡೆಯಲಿದೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಒಮ್ಮೆ ಸಭೆ ನಡೆದಿತ್ತು ಎಂದು ಹೇಳಿದರು. ರಾಜ್ಯದ ಕಾನೂನು ಸುವ್ಯವಸ್ಥೆ […]

ದಿಲ್ಲಿ ಸ್ಫೋಟ ಮಂಗಳೂರು ನಗರದಲ್ಲಿ ಬಿಗಿ ಬಂದೋಬಸ್ತು

Thursday, September 8th, 2011
Delhi Blast/ದಿಲ್ಲಿ ಸ್ಫೋಟ

ಮಂಗಳೂರು: ದಿಲ್ಲಿಯಲ್ಲಿ ಹೈಕೋರ್ಟ್ ಆವರಣದಲ್ಲಿ ನಿನ್ನೆ ಸಂಭವಿಸಿದ ಸ್ಫೋಟ ಹಾಗೂ ನಗರದ ನೆಹರು ಮೈದಾನಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಬುಧವಾರ ಆಯ್ದ ಸ್ಥಳಗಳಲ್ಲಿ ವ್ಯಾಪಕ ತಪಾಸಣೆ ನಡೆಸಲಾಗಿದ್ದು, ಪೊಲೀಸ್‌ ಬಂದೋಬಸ್ತು ಬಿಗಿಗೊಳಿಸಲಾಗಿತ್ತು. ಮಹಾವೀರ ವೃತ್ತ, ನಂತೂರು ಜಂಕ್ಷನ್, ಸರ್ವೀಸ್‌ ಬಸ್‌ ನಿಲ್ದಾಣ ಮತ್ತು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಮಾಲ್‌, ಬಂದರು ಮತ್ತಿತರ ಕಡೆಗಳಲ್ಲಿ ಎರಡೆರಡು ಬಾರಿ ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳದವರು ತಪಾಸಣೆ […]