ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

Saturday, March 30th, 2024
Jyoti

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು […]

ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

Monday, October 30th, 2023
ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ನವ ವಿವಾಹಿತೆ ಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ […]

ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

Wednesday, October 18th, 2023
ಐಟಿ ಕಂಪನಿ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ : ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬಿಜೆಪಿ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Tuesday, February 15th, 2022
jyotish

ಕಾಸರಗೋಡು : ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಮೃತದೇಹ  ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ […]

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುಂಬಳೆಯ ಮನೆಯಲ್ಲಿ ಆತ್ಮಹತ್ಯೆ

Saturday, September 18th, 2021
sneha

ಮಂಜೇಶ್ವರ :  ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ವೀರ ವಿಠಲ ಕ್ಷೇತ್ರ ಸಮೀಪದ ಚಂದ್ರಹಾಸ ಎಂಬವರ ಪುತ್ರಿ ಸ್ನೇಹಾ (17) ಆತ್ಮಹತ್ಯೆ ಮಾಡಿಕೊಂಡವಳು. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದ ಸ್ನೇಹಾ ಕೆಲ ಸಮಯದ ಬಳಿಕ ಕೋಣೆಯೊಳಗೆ ತೆರಳಿದ್ದು, ರಾತ್ರಿ ಸುಮಾರು 7 ಗಂಟೆ ಕಳೆದರೂ ಕೋಣೆಯಿಂದ ಹೊರ ಬರದ ಹಿನ್ನೆಲೆಯಲ್ಲಿ ಗಾಬರಿಗೊಂಡ ತಾಯಿ ಬಾಗಿಲು ಬಡಿದರೂ ತೆರೆಯಲಿಲ್ಲ. ಕೊನೆಗೆ […]

ಕಾರ್ಕಳ : ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Tuesday, September 14th, 2021
Sharma

ಕಾರ್ಕಳ : ದೇವಳವೊಂದರ ಅರ್ಚಕ ರವಳನಾಥ ಶರ್ಮ(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು.  ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು. ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಮಾನಸಿಕ ಖಿನ್ನತೆ ಘಟನೆಗೆ ಕಾರಣವೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ನಾಪತ್ತೆಯಾಗಿದ್ದ ಹೋಟೆಲ್ ಉದ್ಯೋಗಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, September 5th, 2021
Rajesh Poojary

ಬಂಟ್ವಾಳ : ಸೆ.2ರಂದು ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಭಾನುವಾರ ಬೆಳಗ್ಗೆ  ಪತ್ತೆಯಾಗಿದ್ದಾರೆ. ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು […]

ಅಪ್ರಾಪ್ತ ಮಗನನ್ನು ಕಡಿದು ಕೊಲೆಗೈದು, ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ತಂದೆ

Wednesday, June 23rd, 2021
Sathwik

ಪುಂಜಾಲಕಟ್ಟೆ :  ಬಾಡಿಗೆ ಮನೆಯಲ್ಲಿ ವಾಸವಿದ್ದ ತಂದೆಯೊಬ್ಬ  ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಬುಧವಾರ ನಡೆದಿದೆ. ಬಾಬು ನಾಯ್ಕ (58) ತನ್ನ ಪುತ್ರ ಸಾತ್ವಿಕ್ (15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.  ಘಟನೆ ವೇಳೆ ಬಾಬು ನಾಯ್ಕನ ಪತ್ನಿ […]

ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು, ಗಂಡನ ಮನೆಯಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

Wednesday, May 26th, 2021
hanging

ಗೌರಿಬಿದನೂರು :  ತನ್ನ ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆಯನ್ನು ತೆಗೆದುಕೊಟ್ಟಿಲ್ಲ ಎಂದು ಮನನೊಂದು 16 ವರ್ಷದ ಬಾಲಕಿ ಮಹಡಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  5ನೇ ವಾರ್ಡಿನ ಮಾರುತಿ ಸರ್ಕಲ್‌ ಬಳಿ ಬುಧವಾರ  ನಡೆದಿದೆ. ಮೃತ ಬಾಲಕಿ ಮತ್ತು ಮಹದೇವ ಅಲಿಯಾಸ್‌ ಮಣಿ ಒಂದೂವರೆ ವರ್ಷದಿಂದ ಪ್ರೀತಿಸಿದ್ದು ಒಂದು ವರ್ಷದಿಂದ ಮಹದೇವನ ಮನೆಯಲ್ಲೇ ಇದ್ದಳು. ಕಳೆದ 3 ತಿಂಗಳ ಹಿಂದೆಯಷ್ಟೇ ಇಬ್ಬರೂ ಮದುವೆಯಾಗಿದ್ದರು ಎನ್ನಲಾಗಿದೆ. ಮೃತಳು ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಬಳಿಯ ಬೇವನಹಳ್ಳಿ ಗ್ರಾಮದ […]

ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮೀ ವಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Thursday, December 17th, 2020
lakshmi

ಬೆಂಗಳೂರು : ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಬುಧವಾರ  ರಾತ್ರಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಬಗ್ಗೆ ಅನೇಕ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ವಿ. ಲಕ್ಷ್ಮೀ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮೀ […]