ಕೊರೋನಾ ವೈರಸ್‌ನಿಂದಾಗಿ ಅಕ್ಷರದಾಸೋಹ ನೌಕರರರಿಗೆ ವೇತನವಿಲ್ಲ, ಪ್ರತಿಭಟನೆ

Friday, August 7th, 2020
citu

ಮಂಗಳೂರು : ಮುಂದೆ ಸಿಐಟಿಯು ನೇತೃತ್ವದ ಅಕ್ಷರದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಸಂಘದ ಅಧ್ಯಕ್ಷರಾದ ಪದ್ಮಾವತಿ ಶೆಟ್ಟಿಯವರು ಮಾತನಾಡುತ್ತಾ, ಕೊರೋನಾ ವೈರಸ್‌ನಿಂದಾಗಿ ಸ್ಕೀಂ ಕಾರ್ಮಿಕರಲ್ಲಿ ಒಂದು ವಿಭಾಗವಾದ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನವಿಲ್ಲವಾಗಿದೆ. ಕೊರೋನಾ ವೈರಸ್ ಲಾಕ್‌ಡೌನ್ ಅವಧಿಯ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡಬೇಕೆಂದು ವಿನಂತಿಸಿದರೂ ಲಕ್ಷಾಂತರ ಕಾರ್ಮಿಕರಿಗೆ ಪರಿಹಾರವನ್ನು ನೀಡಿಲ್ಲ. ಬಿಸಿಯೂಟ ನೌಕರರಿಗೆ ಮುಂದಿನ 6 ತಿಂಗಳ ತನಕ ಕನಿಷ್ಟ ರೂ.7.500/- […]

ವಿಟ್ಲದ ಹಾಳೆತಟ್ಟೆ ಕಂಪನಿಯ 9ನೌಕರರಿಗೆ ಕೊರೊನಾ ಸೋಂಕು ದೃಡ, ಕಂಪೆನಿ ಸೀಲ್ ಡೌನ್

Wednesday, July 29th, 2020
Vitla Factory

ವಿಟ್ಲ : ಕೊಡಂಗಾಯಿ ಬಲಿಪಗುಳಿಯಲ್ಲಿರುವ ಇಕೋ-ಬ್ಲಿಝ್  ಕಂಪನಿಯ 9ನೌಕರರಿಗೆ ಕೊರೊನಾ ಸೋಂಕು ದೃಡ ವಾಗಿದ್ದು,  ಸುಮಾರು  300ಕ್ಕೂ ಹೆಚ್ಚಿನ ಕಾರ್ಮಿಕರಲ್ಲಿ ಆತಂಕ ಮಡುಗಟ್ಟಿದೆ. ಹಾಳೆತಟ್ಟೆ ತಯಾರಿಕೆಯಲ್ಲಿ ಅಂತರ್ರಾಷ್ಟೀಯ ಮಾರುಕಟ್ಟೆ ಹೊಂದಿರುವ ಇಕೋ-ಬ್ಲಿಝ್ ಕಂಪೆನಿಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳ ಸಾಕಷ್ಟು ಜನ ಕಾರ್ಮಿಕರಿದ್ದಾರೆ. ಅದೇ ರೀತಿ ಸ್ಥಳೀಯರು ಕೂಡಾ ಸಾಕಷ್ಟು ಸಂಖ್ಯೆಯಲ್ಲಿ ದುಡಿಯುತ್ತಿದ್ದಾರೆ. ಇದೀಗ 9ಕಾರ್ಮಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಮಂಗಳವಾರ ಕಂಪೆನಿಗೆ ಆಗಮಿಸಿದ ಟಾಸ್ಕ್ ಫೋರ್ಸ್ ಅಧಿಕಾರಿಗಳ ತಂಡ ಸೀಲ್ ಡೌನ್ ಮಾಡಿದ್ದಾರೆ. ಮುನ್ನೆಚ್ಚರಿಕೆಯ […]