ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ..ಮೂವರು ಬಂಧನ!

Tuesday, July 3rd, 2018
arrested

ಪುತ್ತೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೇಲೂರು ತಾಲೂಕು ಹಳೇಬೀಡು ಕೆರೆಕ್ಕೋಡಿ ಸಂತೆ ಮೈದಾನದ ನಿವಾಸಿ ಸಾಧಿಕ್ (35), ಸುಳ್ಯ ಐವತ್ತೊಕ್ಲು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (25), ಸುಳ್ಯ ಕಳಂಜ ಗ್ರಾಮದ ವಿಷ್ಣು ನಗರ ನಿವಾಸಿ ಮಹಮ್ಮದ್ ನೌಸಾದ್ ಅಲಿಯಾಸ್ ನೌಸು ಬಂಧಿತ ಆರೋಪಿಗಳು. ಬಂಧಿತರಿಂದ 20,000 ರೂ. ಮೌಲ್ಯದ 950 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ […]