ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಿ : ನ್ಯಾಯಾಧೀಶ ವಿ.ವಿ.ಮಲ್ಲಾಪುರ ಸಲಹೆ

Wednesday, November 27th, 2019
Madikeri

ಮಡಿಕೇರಿ : ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್‌ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ’ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ 25 ವಿಭಾಗಗಳಲ್ಲಿ […]