ಸೌಹಾರ್ದತೆ ಬೆಸೆದ ಜುಮ್ಮಾ ಕಮಿಟಿ: ದೇವಸ್ಥಾನ ಜೀರ್ಣೋದ್ಧಾರಕ್ಕೆ ಮಸೀದಿಯಿಂದ ದೇಣಿಗೆ

Thursday, February 22nd, 2018
souhardathe

ಮಂಗಳೂರು: ಪುತ್ತೂರು ತಾಲೂಕಿನ ಪಡುಮಲೆಯ ಪೂಮಾಣಿ-ಕಿನ್ನಿಮಾಣಿ (ಉಳ್ಳಾಕುಲು) ವ್ಯಾಘ್ರಚಾಮುಂಡಿ (ರಾಜನ್ ದೈವ) ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆದಿದ್ದು, ಇದೇ ಫೆ. 23ರಿಂದ 25ರ ತನಕ ಇಲ್ಲಿ ಪುನರ್ ಬ್ರಹ್ಮಕಲಶೋತ್ಸವ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಡುಮಲೆಯ ಜುಮ್ಮಾ ಮಸೀದಿ ಕಮಿಟಿಯವರು ಬುಧವಾರ 40,011 ರೂ. ನೆರವು ನೀಡುವ ಮೂಲಕ ಸೌಹಾರ್ದತೆ ಬೆಸೆದಿದ್ದಾರೆ. ಪಡುಮಲೆ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಡಗನ್ನೂರು, ಮಸೀದಿಯ ಧರ್ಮಗುರು ಸಂಶುದ್ದೀನ್ ದಾರಿಮಿ, ಮಸೀದಿಯ ಉಪಾಧ್ಯಕ್ಷ ಪಕ್ರುದ್ದೀನ್ […]