ಸ್ಫೋಟಕ ತಯಾರಿಸುತ್ತಿದ್ದ ಮೂವರು ಕಾರ್ಮಿಕರು ದುರ್ಮರಣ, ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Monday, January 29th, 2024
venuru-blast

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ತೊಡದ ಮದ್ಯೆ ಸ್ಫೋಟಕ ತಯಾರಿಸುತ್ತಿದ್ದಾಗ ಉಂಟಾದ ಅವಘಡದಲ್ಲಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, […]