ಪಡಿತರ ಚೀಟಿ ಗೊಂದಲ, ಅನರ್ಹ ಪಡಿತರದಾರರಿಗೆ ದಂಡ ವಸೂಲಾತಿ ಕ್ರಮದ ಬಗ್ಗೆ ಚರ್ಚೆ

Thursday, November 7th, 2019
UT-Kader

ಬಂಟ್ವಾಳ : ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪಡಿತರ ಚೀಟಿ ಗೊಂದಲ, ಅನರ್ಹ ಪಡಿತರದಾರರಿಗೆ ದಂಡ ವಸೂಲಾತಿ ಕ್ರಮದ ಬಗ್ಗೆ ಚರ್ಚೆ ನಡೆಯಿತು. ಶಾಸಕ ಯು.ಟಿ. ಖಾದರ್ ಪ್ರಸ್ತಾಪಿಸಿ, ಪಡಿತರ ಚೀಟಿಯ ಬಗ್ಗೆ ಜನರು ಗೊಂದಲಕ್ಕೀಡಾಗಿದ್ದಾರೆ. ಸಾಮಾನ್ಯ ಜನರಿಗೆ ತೊಂದರೆ ನೀಡುವಂತಹ ನಿರ್ಣಯ ಜಾರಿಗೊಳಿಸುವುದು ಸರಿಯಲ್ಲ. ಉಚಿತ ಅನ್ನಕ್ಕೆ ದಂಡ ವಸೂಲಿ ಮಾಡುತ್ತಿರುವ ಪ್ರಕ್ರಿಯೆ ಇದೇ ಮೊದಲು ಎಂದರು. ಕಳೆದ ಎರಡು ವರ್ಷದ ಹಿಂದೆ […]

ಶಿರೂರು ರಾಷ್ಟ್ರೀಯ ಹೆದ್ದಾರಿ ಹಳ್ಳದಲ್ಲಿ 3ಸಾವಿರಕ್ಕೂ ಅಧಿಕ ಪಡಿತರ ಚೀಟಿ..!

Thursday, June 21st, 2018
ration-card

ಬೈಂದೂರು: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹಳ್ಳದಲ್ಲಿ 3ಸಾವಿರಕ್ಕೂ ಅಧಿಕ ಪಡಿತರ ಚೀಟಿಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. ಬಂಟ್ವಾಳ ಗ್ರಾಮ ಪಂಚಾಯತ್ ಸಂಬಂಧಪಟ್ಟಿರುವ 2003,2004 ಹಾಗೂ 2011 ಇಸವಿಯ ಸಾಕಷ್ಟು ಪಡಿತರ ಚೀಟಿಗಳು ಪತ್ತೆಯಾಗಿದೆ. ಇಷ್ಟೇ ಅಲ್ಲದೇ ಗ್ರಾಮ ಪಂಚಾಯತ್‍ನ ಹಲವಾರು ದಾಖಲೆಗಳು ಕೂಡ ಪತ್ತೆಯಾಗಿದೆ. ಬುಧವಾರ ತಡರಾತ್ರಿ ಅಪರಿಚಿತರು ಬಂದು ಬಿಸಾಡಿರುವುದು ಅಥವಾ ಗುಜರಿ ವಾಹನದಿಂದ ಗೋಣಿ ಚೀಲ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಬೈಂದೂರು ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ […]

ಕೇರಳದ ಎಡರಂಗ ಸರಕಾರದ ಆಡಳಿತದ ವಿರುದ್ದ ಬಿಜೆಪಿ ಸಮಿತಿಯ ಧರಣಿ

Wednesday, November 2nd, 2016
kerala-bjp-protest

ಮಂಜೇಶ್ವರ: ಕೇರಳದ ಎಡರಂಗ ಸರಕಾರದ ಆಡಳಿತ ರಾಜ್ಯದ ಜನತೆಯನ್ನು ಉಪವಾಸಕ್ಕೆ ತಳ್ಳುತ್ತಿದೆ. ಕಳೆದ ನಾಲ್ಕು ತಿಂಗಳ ಎಡರಂಗದ ಸಾಧನೆ ಹಲವಾರು ರಾಜಕೀಯ ಕೊಲೆಗಳು, ಸ್ವಜನ ಪಕ್ಷಪಾತ, ಪಡಿತರ ವ್ಯವಸ್ಥೆಯ ಬುಡಮೇಲುಗಳು ಮಾತ್ರವೆಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಪ್ರಮೀಳಾ ಸಿ,ನಾಯ್ಕ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಜೇಶ್ವರ ಪಂಚಾಯತ್ ಬಿಜೆಪಿ ಸಮಿತಿ ನೇತೃತ್ವದಲ್ಲಿ ಮಂಗಳವಾರ ವಿವಿಧೆಡೆ ನಡೆದ ರಾಜ್ಯ ಸರಕಾರದ ಜನದ್ರೋಹಿ ಆಡಳಿತ ವಿರುದ್ದದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಂಜೇಶ್ವರದಲ್ಲಿ ನಡೆದ ಸಭೆ ಉದ್ಘಾಟಿಸಿ ಮಾತನಾಡುತ್ತಿದ್ದರು. ಬಿಜೆಪಿ ಮಂಜೇಶ್ವರ ಮಂಡಲ ಪ್ರಧಾನ […]

ರಾಜ್ಯಾದ್ಯಂತ ಜು.8ರಿಂದ ಕೆಜಿ ತೊಗರಿ ಬೇಳೆ 130 ರೂ.ಗೆ ಲಭ್ಯವಾಗಲಿದೆ: ಖಾದರ್

Thursday, July 7th, 2016
Khadar

ಮಂಗಳೂರು: ರಾಜ್ಯಾದ್ಯಂತ ಜು.8ರಿಂದ ಕೆಜಿ ತೊಗರಿ ಬೇಳೆ 130 ರೂ.ಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ತೊಗರಿ ದಾಸ್ತಾನಿಗೂ ಮಿತಿ ನಿಗದಿ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಬಗೆಯ ತೊಗರಿಗೂ ಮುಂದಿನ ಮೂರು ತಿಂಗಳವರೆಗೆ ಇದೇ ದರ ಅನ್ವಯವಾಗಲಿದೆ. ವ್ಯಾಪಾರಿಗಳಿಗೂ ಸ್ವಲ್ಪ ಲಾಭ ದೊರೆಯಲಿದೆ. ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಜು. 8ರಂದು ಸಭೆ ನಡೆಸಿ ನಂತರ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದರು. […]

ಉಸ್ತುವಾರಿ ಸಚಿವರ ಸೀಮೆಎಣ್ಣೆ ಮುಕ್ತ ನಗರ ಅವಾಸ್ತವಿಕ DYFI

Wednesday, September 17th, 2014
Rai

ಮಂಗಳೂರು : ಮಂಗಳೂರು ನಗರವನ್ನು ನವೆಂಬರ್ ಒಂದರಿಂದ ಸೀಮೆಎಣ್ಣೆ ಮುಕ್ತ ನಗರವನ್ನಾಗಿ ಘೋಷಿಸಲಾಗುವುದು ಎಂಬ ಉಸ್ತುವಾರಿ ಸಚಿವರ ಹೇಳಿಕೆಯನ್ನು ಅವಾಸ್ತವಿಕ ಎಂದು DYFI ನಗರ ಸಮಿತಿ ಹೇಳಿದೆ. ಮಂಗಳೂರು ನಗರದಲ್ಲಿ ವಾಸಿಸುವ ಕಡುಬಡವರಿಗೆ ಬ್ಯಾಂಕ್ ಸಾಲದ ಮೂಲಕ ಅಡುಗೆ ಅನಿಲ ಸಂಪರ್ಕವನ್ನು ಬಲವಂತವಾಗಿ ನೀಡುವುದು, ಹಾಗೆಯೇ ವಾಸ್ತವ್ಯ ದಾಖಲೆ ಗುರುತು ಚೀಟಿ ಇದ್ದವರಿಗಷ್ಟೇ ಅಡುಗೆ ಸಂಪರ್ಕ ನೀಡುತ್ತೇವೆ. ಅದಕ್ಕಾಗಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯುತ್ತೇವೆ ಅನ್ನುವ ಮಾತುಗಳು ಆಡಳಿತದ ಬಾಲಿಶತನವನ್ನು ಎತ್ತಿ ತೋರಿಸುತ್ತಿದೆ. ಇನ್ನು ಪ್ರತಿಯೊಬ್ಬರಿಗೂ ಪಡಿತರ ಚೀಟಿ […]

ಪಡಿತರ ಚೀಟಿ: ಗೊಂದಲ ನಿವಾರಿಸಲು ಜಿ.ಪಂ. ಅಧ್ಯಕ್ಷರ ಸೂಚನೆ

Wednesday, August 13th, 2014
zp kdp

ಮಂಗಳೂರು : ಪಡಿತರ ಚೀಟಿಗೆ ಎಪಿಕ್  ಕಾರ್ಡ್ ಸಂಖ್ಯೆ ಜೋಡಣೆ ಸಂಬಂದ ಎಪಿಕ್ ನೀಡದವರ ರೇಷನ್ ಕಾರ್ಡ್ ಗಳನ್ನು  ಅಮಾನತಿನಲ್ಲಿಡುವ ಅಥವಾ ರದ್ದುಗೊಳಿಸುವ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುತ್ತಿದ್ದು, ಈ ಬಗ್ಗೆ ಸ್ಪಷ್ಟವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಪಡಿತರ ಚೀಟಿ ವ್ಯವಸ್ಥೆಯನ್ನು ಸುಗಮಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಸೂಚಿಸಿದ್ದಾರೆ. ಅವರು ಬುಧವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ)ಗಳ ಮಾಸಿಕ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರು ಹಲವೆಡೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು […]

ಪಡಿತರ ಚೀಟಿ ಪಡೆಯಲು ಆನ್‌ಲೈನ್‌ ವ್ಯವಸ್ಥೆ ಆರಂಭ

Saturday, November 19th, 2011
Online Ration card

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೊಸ ವ್ಯವಸ್ಥೆ ಜಾರಿಮಾಡಿದ್ದು ಇನ್ನು ಮುಂದೆ ಪಡಿತರ ಚೀಟಿಗಾಗಿ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲಬೇಕಿಲ್ಲ. ನೀವು ಕುಳಿತಲ್ಲಿಂದಲೇ ಆನ್‌ಲೈನ್‌ ಮೂಲಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ (http://ahara.kar.nic.in) ಅರ್ಜಿ ಸಲ್ಲಿಸಿ ಪಡಿತರ ಚೀಟಿ ಪಡೆಯುವ ವಿನೂತನ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಇದು ನವಂಬರ್ 19 ಶನಿವಾರದಿಂದಲೇ ಆರಂಭಗೊಳ್ಳಲಿದೆ. ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. […]