ಕೂಳೂರು ಬಳಿ ನಾಗನ ಕಟ್ಟೆಯನ್ನು ಒಡೆದ ಕಿಡಿಗೇಡಿಗಳು

Saturday, October 23rd, 2021
Kulooru Nangana Katte

ಮಂಗಳೂರು: ಬಂಟ್ವಾಳ ಮುಂಡಾಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಕಟ್ಟೆ ಒಡೆದ ಮಾದರಿಯಲ್ಲೇ  ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಒಡೆದು ಹಾನಿ ಮಾಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ನಗರದ ಕಾರಾಗೃಹದಲ್ಲಿ ಕೈದಿಗಳ ನಡುವೆ ಜಗಳ, ಇಬ್ಬರು ಆಸ್ಪತ್ರೆಗೆ ದಾಖಲು

Sunday, April 25th, 2021
jail clash

ಮಂಗಳೂರು: ದರೋಡೆ ಪ್ರಕರಣದ ಆರೋಪಿ ಮತ್ತು ಇಬ್ಬರು ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಗಾಯಗೊಂಡಿರುವ ಘಟನೆ ನಗರದ ಕಾರಾಗೃಹದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಅನ್ಸಾರ್ ಮತ್ತು ಝೈನುದ್ದೀನ್ ಗಾಯಾಳುಗಳು. ಬೆಳಗ್ಗೆ ಉಪಹಾರ ವಿತರಣೆ ವೇಳೆ ಘರ್ಷಣೆ ನಡೆದಿದೆ. ಪಣಂಬೂರು ಪೊಲೀಸರು ಬಂಧಿಸಿದ ದರೋಡೆ ಪ್ರಕರಣದ ಆರೋಪಿ ಸಮೀರ್ ಎಂಬಾತ ಹಲ್ಲೆ ನಡೆಸಿದ್ದಾನೆ. ಚಮಚೆ ಮತ್ತಿತರ ಅಡುಗೆ ಪಾತ್ರೆಗಳಿಂದ ಹಲ್ಲೆ ನಡೆದಿದೆ. ಅನ್ಸಾರ್ ನ ಕೈ ಮತ್ತು ಕಾಲಿಗೆ, ಝೈನುದ್ದೀನ್ ಭುಜಕ್ಕೆ ಗಾಯವಾಗಿದೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ […]

ರಶೀದ್ ಮಲಬಾರಿ ಸಹಚರನ ಬಂಧನ

Saturday, October 14th, 2017
Mahamad shameer

ಮಂಗಳೂರು: ಭೂಗತ ಪಾತಕಿ ರಶೀದ್ ಮಲಬಾರಿ ಸಹಚರನನ್ನು ಪಣಂಬೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಜೋಕಟ್ಟೆ ನಿವಾಸಿ ಮಹಮ್ಮದ್ ಶಮೀರ್ ಅಲಿಯಾಸ್ ಡೆಡ್ಲಿ ಎಂಬಾತನನ್ನು ಪುತ್ತೂರಿನಲ್ಲಿ ಬಂಧಿಸಲಾಗಿದೆ. 2013 ರಲ್ಲಿ ಪಣಂಬೂರು ಠಾಣೆಯಲ್ಲಿ ಮಹಮ್ಮದ್ ಸಮೀರ್ ವಿರುದ್ಧ ಹಫ್ತಾ ವಸೂಲಿ, ಹಲ್ಲೆ, ದರೋಡೆ ಸೇರಿದಂತೆ ಬೆದರಿಕೆ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿ ಮಹಮ್ಮದ್ ಶಮೀರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ನ್ಯಾಯಾಲಯ ದಿಂದ ಜಾಮೀನು ಪಡೆದಿದ್ದ ಶಮೀರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ […]