ಸಿದ್ಧಕಟ್ಟೆ: ಪತ್ರಿಕಾ ದಿನಾಚರಣೆ, ಸನ್ಮಾನ

Wednesday, July 28th, 2021
Rotary-Club

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಇವರನ್ನು ಸನ್ಮಾನಿಸಿ ಗೌರವಿಸಿದರು. ರೋಟರಿ ಕ್ಲಬ್ಬಿನ ಅಧ್ಯಕ್ಷ ಮೈಕೆಲ್ ಡಿಕೋಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ, ಶಿಕ್ಷಕ ರಾಜೇಶ ನೆಲ್ಯಾಡಿ ಶುಭ ಹಾರೈಸಿದರು. ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ ಮತ್ತಿತರರು ಇದ್ದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ರಾಯಿ ಸ್ವಾಗತಿಸಿ, ವಂದಿಸಿದರು.

ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ

Monday, July 30th, 2018

ಹುಬ್ಬಳ್ಳಿ : ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಆಗಸ್ಟ್ 7 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ವಿಧಾನ ಪರಿಷತ್ತಿನ ಸದಸ್ಯ ಎಸ್.ಎಲ್. ಬೋಜೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ. ಸಿದ್ದರಾಜು, ಬೆಂಗಳೂರಿನ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್, […]

ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಪತ್ರಿಕಾ ದಿನಾಚರಣೆ’ ಕಾರ್ಯಕ್ರಮ

Wednesday, July 25th, 2018
alwas-clg

ಮೂಡುಬಿದಿರೆ: ಪತ್ರಿಕೋದ್ಯಮದ ಅಸ್ಮಿತೆ ಮುದ್ರಣಾ ಮಾಧ್ಯಮದಲ್ಲಿ ಅಡಗಿದ್ದು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನವನ್ನು ಮುದ್ರಣ ಮಾಧ್ಯಮದಲ್ಲಿ ಪ್ರಾರಂಭಿಸಿದರೆ, ಮಾಧ್ಯಮ ಲೋಕದಲ್ಲಿ ಉನ್ನತ ಸ್ಥಾನವನ್ನು ಏರಬಹುದು ಎಂದು ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ತಿಳಿಸಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಇಂದು ಕುವೆಂಪು ಸಭಾಭವನದಲ್ಲಿ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಿಟ್ಟತನ ಹಾಗೂ ನೇರನುಡಿ ಪತ್ರಕರ್ತರಿಗೆ ಇರಬೇಕಾದ ಪ್ರಮುಖ ಗುಣಗಳಾಗಿದ್ದು, ಹೊಸತನದ ಆಳವಡಿಕೆ ಪ್ರತಿ ಹಂತದಲ್ಲೂ ಅಗತ್ಯವಿದೆ ಎಂದು ಹೇಳಿದರು. ನವಮಾಧ್ಯಮಗಳ ಅನ್ವೇಷಣೆಯಿಂದ […]

ಮಂಗಳೂರು ಪ್ರೆಸ್‌‌ ಕ್ಲಬ್‌‌ನಲ್ಲಿ ಪತ್ರಿಕಾ ದಿನಾಚರಣೆ

Saturday, July 1st, 2017
patrika dinacharane

ಮಂಗಳೂರು : ಮಂಗಳೂರಿನ ವರದಿಗಾರರು ರಾಜಧಾನಿಯ ವರದಿಗಾರರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಇಲ್ಲಿನವರು ವಿಭಿನ್ನವಾಗಿ ಯೋಚಿಸುವ ಕೌಶಲ್ಯ ಹೊಂದಿದ್ದಾರೆ ಎಂದು ಬೆಂಗಳೂರು ಪ್ರೆಸ್‌‌ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರು ಪ್ರೆಸ್‌‌ ಕ್ಲಬ್‌‌ನಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವರದಿಗಾರರ ಬರಹ ಜನರ ಬದುಕಲ್ಲಿ ಪರಾರಿಣಾಮ ಬೀರುವಂತಿರಬೇಕು. ಸುದ್ದಿಯ ಸತ್ಯಾಸತ್ಯತೆಯನ್ನು ಅರಿತು ಜನರಿಗೆ ಅರ್ಥೈಸುವ ಕೆಲಸವವನ್ನು ವರದಿಗಾರರು ಮಾಡಬೇಕು ಎಂದು ಸಲಹೆ ನೀಡಿದರು. ಮಾಧ್ಯಮಗಳ ಹೊಸ ಆಯಾಮಗಳ ಬಗ್ಗೆ […]

ಪತ್ರಿಕಾ ದಿನಾಚರಣೆ ರೋನ್ಸ್ ಬಂಟ್ವಾಳ್ ಗೆ ದಶಮಾನದ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ

Thursday, July 3rd, 2014
Press Day

ಮುಂಬಯಿ: ಪತ್ರಕರ್ತರ ವೇದಿಕೆ ಬೆಂಗಳೂರು, ಕರ್ನಾಟಕ ಮೀಡಿಯಾ ಮತ್ತು ನ್ಯೂಸ್ ಸೆಂಟರ್ ಇವರ ವತಿಯಿಂದ ಕಳೆದ ಮಂಗಳವಾರ ಸಂಜೆ ಪತ್ರಿಕಾ ದಿನಾಚರಣೆ-2014 ಸಂಭ್ರಮಿಸಲಾಗಿದ್ದು, ಇದೇ ಸಂದರ್ಭದಲ್ಲಿ ದಶಮಾನದ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿಸಲಾಯಿತು. ಕರ್ನಾಟಕ ರಾಜಧಾನಿಯಲ್ಲಿನ ಬೆಂಗಳೂರು ಕನ್ನಡ ಭವನದ ನಯನ ಸಭಾಂಗಣದಲ್ಲಿ ನೇರವೇರಿಸಲಾಗಿದ್ದು, ಹಿರಿಯ ಪತ್ರಕರ್ತ ಕೆ.ಜಿ.ನಾಗಲಕ್ಷ್ಮೀ ಭಾಯಿ ಅವರ ಅಧ್ಯಕ್ಷತೆಯಲ್ಲಿ ನೇರವೇರಿದ ಸಮಾರಂಭದಲ್ಲಿ ಚಿತ್ರನಟಿ ಕು| ರೂಪಿಕಾ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಹಾಸ್ಯ ಸಾಹಿತಿ ಎಂ.ಎಸ್.ನರಸಿಂಹಮೂರ್ತಿ ಹಾಗೂ ಗೌರವ ಅತಿಥಿಗಳಾಗಿ […]