ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಪದಗ್ರಹಣ

Tuesday, January 30th, 2024
sathish Kumpala

ಮಂಗಳೂರು: ರಾಜ್ಯದ ಯಾವುದೇ ಮೂಲೆಗೆ ಹೋದರು ಮತದಾರರು ಉತ್ಸುಕರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನುಡಿದಿದ್ದಾರೆ. ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿ ಎಂಟು ತಿಂಗಳ ಹಿಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಕಾಂಗ್ರೆಸ್‌ಗೆ ದೇಶದಲ್ಲಿ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆ ಹುಟ್ಟಿಕೊಂಡಿದೆ. ಆದರೆ ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ […]

ಯುವವಾಹಿನಿ (ರಿ )ಶಕ್ತಿನಗರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ

Monday, December 20th, 2021
Yuvavahini Shakthinagara

ಮಂಗಳೂರು : ಯುವವಾಹಿನಿ (ರಿ )ಶಕ್ತಿನಗರ ಘಟಕದ 2021/22 ನೇ ಸಾಲಿನ ಪದಗ್ರಹಣ , ಪ್ರಶಸ್ತಿ , ಸನ್ಮಾನ , ಕಾರ್ಯಕ್ರಮವು ದಿನಾಂಕ 19.12.2021ನೇ ಆದಿತ್ಯವಾರ ನಾಲ್ಯಪದವು ಕುವೆಂಪು ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಜರಗಿತು. ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಹಾಗೂ ಕೇಂದ್ರ ಸಮಿತಿಯ ಸಲಹೆಗಾರರು ಪದ್ಮರಾಜ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅಹಂಕಾರ ಅಹಂ ನಮ್ಮಲ್ಲಿ ಹೋದರೆ ನಾವು ಸಮಾಜಮುಖಿ ಕೆಲಸ ಮಾಡಲು ಅನುಕೂಲ ಸಾಧ್ಯವೆಂದು ತಿಳಿಸಿ ನೂತನ ಪದಾಧಿಕಾರಿಗಳಿಗೆ ಶುಭ […]

ಡಿ.11 : ಕನ್ನಡ ಸಾಹಿತ್ಯ ಪರಿಷತ್ ನೂತನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪದಗ್ರಹಣ

Thursday, December 9th, 2021
chutuku

ಮಂಗಳೂರು : ಇತ್ತೀಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿರುವ ಲೇಖಕ ಸಂಘಟಕ ಉಪನ್ಯಾಸಕ ಡಾ.ಎಂ.ಪಿ ಶ್ರೀನಾಥ್ ಅವರ ಪದಗ್ರಹಣ ಕಾರ್ಯಕ್ರಮವು ಡಿಸೆಂಬರ್ 11ನೇ ತಾರೀಕು ಶನಿವಾರ ಸಂಜೆ 4 ಗಂಟೆಗೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಪದಗ್ರಹಣ ಸಮಿತಿಯ ಗಣೇಶ್ ಹೆಬ್ಬಾರ್ ಅವರು ಬುಧವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ […]

ನನಗೆ ಈ ಅಧಿಕಾರ ಸ್ಥಾನ ಮಾನ ಬೇಡ, ನಾನು ಸಾಮಾನ್ಯ ಕಾರ್ಯಕರ್ತನಾಗಿರ ಬಯಸುತ್ತೇನೆ : ಡಿಕೆ ಶಿವಕುಮಾರ್

Friday, July 3rd, 2020
DK shivakumar

ಬೆಂಗಳೂರು: ನನಗೆ ಈ ಅಧಿಕಾರ ಸ್ಥಾನ ಮಾನ ಬೇಡ, ನಾನು ಸಾಮಾನ್ಯ ಕಾರ್ಯಕರ್ತನಾಗಿರ ಬಯಸುತ್ತೇನೆ, ಆದರೆ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ವೇಣುಗೋಪಾಲ್ ಅವರ ಜತೆ ಸುದೀರ್ಘ ಚರ್ಚೆ ಮಾಡಿ, ನನಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಎಂದು ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ತಮಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕರೆ ಮಾಡಿ ಶಕ್ತಿ ತುಂಬಿದ್ದಾರೆ. […]

ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Tuesday, February 25th, 2020
BJP

ಮಂಗಳೂರು : ನೂತನ ಜಿಲ್ಲಾಧ್ಯಕ್ಷರ ಪದಗ್ರಹಣವೆಂದರೆ ಅಧಿಕಾರ ಸ್ವೀಕಾರ ಮಾತ್ರವಲ್ಲ; ಮುಂದಿನ ಗ್ರಾ. ಪಂ. ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಜಯ ದಾಖ ಲಿಸುವುದಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 8 ಶಾಸಕ ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆಯನ್ನು ಸ್ವೀಕರಿಸುವ ಕಾರ್ಯಕ್ರಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಸೋಮವಾರ ಜರಗಿದ ಬಿಜೆಪಿ ದಕ್ಷಿಣ ಕನ್ನಡ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಅವರ ಪದಗ್ರಹಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ನಳಿನ್‌ ಕುಮಾರ್ ಪದಗ್ರಹಣದಲ್ಲಿ ದ.ಕದಿಂದ 2,500ಕ್ಕೂ ಅಧಿಕ ಕಾರ್ಯಕರ್ತರು

Tuesday, August 27th, 2019
nalin-kumar-kateel

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪದಗ್ರಹಣ ಸಮಾರಂಭವು ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 2,500ಕ್ಕೂ ಅಧಿಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್‌ ಅವರು ಹಾಲಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಭ್ರಮದಲ್ಲಿ ದಕ್ಷಿಣ ಕನ್ನಡದಿಂದ 2,500ಕ್ಕೂ ಅಧಿಕ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸುತ್ತಿದ್ದಾರೆ. ಸುಮಾರು […]

ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

Thursday, December 9th, 2010
ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

ಮಂಗಳೂರು : ಮಾಜಿ ಮೇಯರ್ ಕೆ. ಅಶ್ರಫ್ ಅವರು ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ಸಂಜೆ ಮಂಗಳೂರಿನ  ಭಾರತೀಯ ಸ್ಕೌಟ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ನಡೆದ ಸಮಾರಂಭದಲ್ಲಿ ಹಿಂದಿನ ಮಂಗಳೂರು ಉತ್ತರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಇವರಿಂದ ಬಿ. ಜನಾರ್ಧನ ಪೂಜಾರಿ ಇವರ ಸಮ್ಮಖದಲ್ಲಿ ಪದಗ್ರಹಣ ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ದೀಪ ಬೇಳಗಿಸುವುದರ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ […]