ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟಿಲ್ಲ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್

Friday, October 11th, 2019
parameshwar

ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಗ್ರಾಮ ಪಂಚಾಯಿತಿಗೆ ಪಾವತಿಸಬೇಕಿದ್ದ 45,26,688 ರೂ. ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯತಿಗೆ ವ್ಯಾಪ್ತಿಯಲ್ಲಿ ಇರುವ ಮೆಡಿಕಲ್ ಕಾಲೇಜ್ ಗ್ರಾಮ ಪಂಚಾಯಿತಿಗೆ ಲಕ್ಷ ಲಕ್ಷ ತೆರಿಗೆಯನ್ನು ಕಟ್ಟಬೇಕಿದೆ. ಈ ವಿಚಾರವಾಗಿ ಗ್ರಾಮ ಪಂಚಾಯತಿ ಕಾರ್ಯಾಲಯ ಸಾಕಷ್ಟು ಬಾರಿ ನೋಟಿಸ್ ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ತೆರಿಗೆ ಮಾತ್ರ ಕಟ್ಟಿರಲಿಲ್ಲ. ಈ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಬ್ಲಾಕ್ ಮಾಡಿ ಅಕ್ರಮವಾಗಿ […]

ಮಧುಕರ್ ಶೆಟ್ಟಿ ನಿಧನ ಆಘಾತ ತಂದಿದೆ.. ಸಾವಿನ ಬಗ್ಗೆ ತನಿಖೆ ಅಗತ್ಯವಿದೆ: ಡಿ.ಕೆ. ಶಿವಕುಮಾರ್

Saturday, December 29th, 2018
congress

ಬೆಂಗಳೂರು: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ ಆಘಾತ ತಂದಿದೆ. ಸಾವಿನ ಬಗ್ಗೆ ತನಿಖೆ ಅಗತ್ಯವಿದೆ. ಯಾಕೆ, ಏನಾಯ್ತು ಅನ್ನೋದು ತಿಳಿಯಬೇಕು ಎಂದು ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಅವರು ನನಗೆ ಬಹಳ ಹತ್ತಿರದಿಂದ ಪರಿಚಯ. ರಾತ್ರಿ ಸುದ್ದಿ ಕೇಳಿ ದುಖಃವಾಯ್ತು. ಅವರು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡ ಆಸ್ತಿ. ಸಾವಿನ ತನಿಖೆಯಿಂದ ಸಾಕಷ್ಟು ಸತ್ಯಗಳು ಹೊರಬರಬಹುದು ಎಂದು ಹೇಳಿದ್ದಾರೆ. ಸಚಿವ ಸ್ಥಾನ, ನಿಗಮ ಮಂಡಳಿಯಲ್ಲಿ ಅವಕಾಶ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವವರ ಬಗ್ಗೆ ಮಾತನಾಡಿ, […]

ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್​​ ಅಸಮಾಧಾನ ಸ್ವಾಭಾವಿಕ: ಪರಮೇಶ್ವರ್

Saturday, December 22nd, 2018
parameshwar

ದೇವನಹಳ್ಳಿ: ಸಚಿವ ಸ್ಥಾನ ಹಂಚಿಕೆ ವೇಳೆ ಸ್ವಾಭಾವಿಕವಾಗಿ ಅಸಮಾಧಾನ ಇದ್ದೆ ಇರುತ್ತೆ. ಇವೆಲ್ಲವೂ ಸರಿ ಹೋಗುತ್ತೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿಸಿಎಂ ಪರಮೇಶ್ವರ್ ಏರ್ಪೋರ್ಟ್ನಲ್ಲಿ ಮಾತನಾಡಿ, ವರಿಷ್ಠರು ಆರು ಸ್ಥಾನಗಳ ಜತೆಗೆ ಇಬ್ಬರ ಹೆಸರನ್ನು ಡ್ರಾಪ್ ಮಾಡಿ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಲು ಸಮ್ಮತಿಸಿದ್ದಾರೆ.. ರಾಮಲಿಂಗಾರೆಡ್ಡಿ ಹಾಗೂ ಬಿಸಿ ಪಾಟೀಲ್ಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ಅವರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಇವೆಲ್ಲವೂ ಸರಿ ಹೋಗುತ್ತದೆ ಎಂದರು. ಸಚಿವ […]

ರೋಹನ್ ಬೋಪಣ್ಣ, ಮಲ್ಲಪ್ರಭಾ ಜಾಧವ್​ಗೆ ಚೆಕ್‌ವಿತರಿಸಿದ ಪರಮೇಶ್ವರ್

Saturday, December 15th, 2018
parameshwar

ಬೆಂಗಳೂರು: ಇತ್ತೀಚೆಗೆ ನಡೆದ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಪಡೆದ ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಮತ್ತು ಕುರಾಸ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆದ ಬೆಳಗಾವಿಯ ಮಲ್ಲಪ್ರಭಾ ಜಾಧವ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಯುವಜನ ಸೇವೆ, ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್ ಸದಾಶಿವನಗರದ ತಮ್ಮ ಕಚೇರಿಯಲ್ಲಿಂದು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದವರಿಗೆ ನಗದು ಬಹುಮಾನವನ್ನು ಕ್ರೀಡಾ ಇಲಾಖೆಯಿಂದ ನೀಡಲಾಗುತ್ತಿದೆ. ರೋಹನ್‌ ಬೋಪಣ್ಣ ಅವರಿಗೆ 25 ಲಕ್ಷ ರೂ. ಹಾಗೂ ಮಲ್ಲಪ್ರಭಾ […]

ಆಸ್ಪತ್ರೆ ನಿರ್ಮಾಣದಲ್ಲಿ ಕಾರ್ಪೋರೇಟ್‌ ಕಂಪನಿಗಳು ಮುಂದೆ ಬರಲಿ: ಪರಮೇಶ್ವರ್

Saturday, November 24th, 2018
parameshwar

ಬೆಂಗಳೂರು: ಕಾರ್ಪೋರೇಟ್‌ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆ ನಿರ್ಮಾಣ ಮಾಡುವ ಹೆಜ್ಜೆ ಇಟ್ಟರೆ ಕರ್ನಾಟಕ ಹೆಲ್ತ್‌ ಟೂರಿಸಂ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಹೆಚ್‌ಕೆಪಿ ರಸ್ತೆಯಲ್ಲಿರುವ ಚರ್ಚ್‌ ಆಫ್‌ ಸೌತ್‌ ಇಂಡಿಯಾ ಆಸ್ಪತ್ರೆಯ‌ 125ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಶ್ಚಿಯನ್‌ ಮಿಷನರಿಗಳು ವಿಶ್ವದಾದ್ಯಂತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿವೆ. ವಿಶ್ವದ ಯಾವುದೇ ಮೂಲೆಗೆ ತೆರಳಿದರು‌ ಮಿಷನರಿಗಳ ಶಿಕ್ಷಣ ಸಂಸ್ಥೆ ನೋಡಬಹುದು. ಹಲವು ವರ್ಷಗಳ […]

ಡಿಕೆಶಿ ಹೇಳಿಕೆಗೆ ಈಗ ನಾನು ಪ್ರತಿಕ್ರಿಯಿಸೊಲ್ಲ: ಡಿಸಿಎಂ ಪರಮೇಶ್ವರ್

Friday, October 19th, 2018
parameshwar

ದೇವನಹಳ್ಳಿ: ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದು ಇಲ್ಲಿ ರಾಜಕೀಯ ಬೇಡ. ಡಿಕೆಶಿ ಹೇಳಿಕೆಗೆ ಈಗ ನಾನು ಪ್ರತಿಕ್ರಿಯಿಸೊಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿದರು. ಮರಳುಬಾಗಿಲಿನಲ್ಲಿ ಗೃಹ ಸಚಿವ ಪರಮೇಶ್ವರ್ ದಿ ನ್ಯೂ ಮಾನಸ ಆಸ್ಪತ್ರೆಯನ್ನ ಉದ್ಘಾಟಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಾಸಗಿ ಆಸ್ಪತ್ರೆಗಳಿಗೆ ಸದ್ಯದಲ್ಲೇ ಆರೋಗ್ಯ ಕಾರ್ಡ್ ಸೂತ್ರಗಳನ್ನು ಜಾರಿಗೊಳಿಸಲಾಗುವುದು ಎಂದರು. ಆದರೆ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಕಾರ್ಯಕ್ರಮದಲ್ಲಿ ಸಂಸದ ವೀರಪ್ಪ ಮೊಯ್ಲಿ, ಕೃಷಿ ಸಚಿವ ಶಿವಶಂಕರ್ ರೆಡ್ಡಿ, ಮಾನಸ ಗ್ರೂಪ್ನ ನಿರ್ದೇಶಕ ಡಾ.ಶಶೀಧರ್ ಹಾಗೂ ಡಾ. […]

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ‌ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ: ಸಾಲುಮರದ ತಿಮ್ಮಕ್ಕ

Tuesday, July 3rd, 2018
salumarada-thimakka

ಮಂಗಳೂರು: ನಾನು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ‌ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಸ್ವಂತ ಮನೆ ಬೇಕು ಎನ್ನುವ ತನ್ನ ಕನಸಿಗೆ ಸರ್ಕಾರ‌ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತನ್ನ ಕನಸು ಸಾಕಾರಗೊಳಿಸಲಿ ಎಂದು ಸಾಲುಮರದ ತಿಮ್ಮಕ್ಕ ಅಳಲು ತೋಡಿಕೊಂಡಿದ್ದಾರೆ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ವೃಕ್ಷಾಂಜಲಿ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ‌ ಮಾತನಾಡಿದ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್, ಹಿಂದೆ […]

ಕಿಕ್‌ಬಾಕ್ಸಿಂಗ್ ಚಾಂಪಿಯನ್ ವಿದ್ಯಾರ್ಥಿಗಳಿಗೆ ಪರಮೇಶ್ವರ್ ಸನ್ಮಾನ

Thursday, June 28th, 2018
parameshwar

ಬೆಂಗಳೂರು: ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ನಡೆದಿದ್ದ ನ್ಯಾಷನಲ್ ಕಿಕ್‌ಬಾಕ್ಸಿಂಗ್ ಸ್ಪರ್ಧೆಯಲ್ಲಿ ಆರು ಚಿನ್ನ, ಐದು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗೆದ್ದ ಕರ್ನಾಟಕ ಕಿಕ್‌ಬಾಕ್ಸಿಂಗ್ ತಂಡದ 12 ಮಕ್ಕಳನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಅಭಿನಂದಿಸಿದರು. ಇಂದು ರಾಜ್ಯಕ್ಕೆ ಮರಳಿದ ಸಾಧಕರನ್ನು ಕೆಪಿಸಿಸಿ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ ಪರಮೇಶ್ವರ್, ಇಂತಹ ಸಾಧನೆ ನಿಮ್ಮಿಂದ ಇನ್ನಷ್ಟು ಆಗಲಿ. ಸರ್ಕಾರದಿಂದ ನಿಮಗೆ ಸದಾ ಪ್ರೋತ್ಸಾಹ ಇರಲಿದೆ ಎಂದು ಭರವಸೆ ನೀಡಿದರು. ರಾಜ್ಯದ ಎಲ್ಲಾ ಭಾಗದ ಕ್ರೀಡಾಸಕ್ತರು, […]

ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ!

Tuesday, June 19th, 2018
rahul-gandhi

ನವದೆಹಲಿ: ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇವತ್ತು 48ನೇ ವಸಂತಕ್ಕೆ ಕಾಂಗ್ರೆಸ್‌‌ನ ಯುವರಾಜ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಹುಲ್‌ ಗಾಂಧಿ ಅವರಿಗೆ ಇದು ಮೊದಲ ಜನ್ಮದಿನದ ಸಂಭ್ರಮವಾಗಿದೆ. ಪ್ರಧಾನಿ ಮೋದಿ, ರಾಜಕಾರಣಿಗಳು ಮತ್ತು ಕಾಂಗ್ರೆಸ್‌ನ ನಾಯಕರು ರಾಗಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯಸ್ಸು ಮತ್ತು ಆರೋಗ್ಯಕ್ಕಾಗಿ ನಾನು […]

ಮೂರು ಹುದ್ದೆ ನಿಭಾಯಿಸುತ್ತಿರುವ ಪರಮೇಶ್ವರ್‌ಗೆ ನಿರಾಳತೆ ಯಾವಾಗ!?

Thursday, June 14th, 2018
g-parameshwara

ಬೆಂಗಳೂರು: ಕಳೆದ 8 ವರ್ಷಗಳಿಂದ ನಿರಂತರವಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುತ್ತಿರುವ ಡಾ. ಜಿ.ಪರಮೇಶ್ವರ್‍ ಇದೀಗ ಇದರ ಜತೆ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೂಡ. ಮೂರು ಜವಾಬ್ದಾರಿಯುತ ಹುದ್ದೆಯನ್ನು ಸದ್ಯ ನಿಭಾಯಿಸುತ್ತಿದ್ದರೂ ಆದಷ್ಟು ಬೇಗ ಪಕ್ಷದ ಹುದ್ದೆಯಿಂದ ನಿರಾಳರಾಗುವ ಆಶಯ ಹೊಂದಿದ್ದಾರೆ ಒಂದೆಡೆ ಪಕ್ಷದ ಚಟುವಟಿಕೆ ನಿಭಾಯಿಸುವ ಕೆಪಿಸಿಸಿ ಅಧ್ಯಕ್ಷ ಗಾದಿ, ಇನ್ನೊಂದೆಡೆ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪರಮೇಶ್ವರ್‍ ಸರ್ಕಾರದ ಭಾಗವಾಗುತ್ತಿದ್ದಂತೆ ಕೆಪಿಸಿಸಿಗೆ ಹೊಸ ಸಾರಥಿಯ ಹುಡುಕಾಟ […]