ಕುಂದಾಪುರ : ಕಾರು ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಪಂಚಾಯತ್ ಅಧ್ಯಕ್ಷ

Sunday, June 6th, 2021
Udaya Ganiga

ಕುಂದಾಪುರ : ಗ್ರಾಮ ಪಂಚಾಯತ್ ಅಧ್ಯಕ್ಷ ನೊಬ್ಬ ದ್ವೇಷದಲ್ಲಿ ವ್ಯಕ್ತಿಯೊಬ್ಬರನ್ನು ತನ್ನ ಕಾರು ಢಿಕ್ಕಿ ಹೊಡೆಸಿ ಕೊಲೆಗೈದ  ಘಟನೆ ಶನಿವಾರ ರಾತ್ರಿ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಯನ್ನು ಹೊಸಬಾಳು ನಿವಾಸಿ ಉದಯ ಗಾಣಿಗ(40)  ಎಂದು ಗುರುತಿಸಲಾಗಿದೆ. ತನ್ನ ಪತಿಯನ್ನು ಕೊಲೆ ಮಾಡಿರುವುದಾಗಿ  ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಳವೆ ಬಾವಿ […]

ದಿನಸಿ ಅಂಗಡಿಯ ಪರವಾನಿಗೆ ಹೊಂದಿರುವವರು ಮಾರ್ಚ್ 31 ರಂದು ಕಡ್ಡಾಯವಾಗಿ ತೆರೆಯಬೇಕು : ಸಚಿವ ಕೋಟ

Monday, March 30th, 2020
Kota Srinivas

ಬಂಟ್ವಾಳ: ಮಾರ್ಚ್ 31ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 3ರ ವರೆಗೆ ತೆರೆಯಲಿದ್ದು, ದಿನಸಿ ಅಂಗಡಿಯ ಪರವಾನಿಗೆ ಹೊಂದಿರುವವರು ಕಡ್ಡಾಯವಾಗಿ ಅಂಗಡಿಯನ್ನು ತೆರೆಯಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬಂಟ್ವಾಳ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ಅಂಗಡಿಗಳ ಮುಂದೆ ಮಾರ್ಕಿಂಗ್ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದು, ವಿಎ, ಗ್ರಾಮ ಸಹಾಯಕರು, ಪಿಡಿಒ, ಟಾಸ್ಕ್ ಫೋರ್ಸ್ ಸಮಿತಿಯವರು ಅದನ್ನು ನೋಡಿಕೊಳ್ಳಬೇಕಿದೆ. ಜತೆಗೆ ತಮ್ಮ ಅಂಗಡಿಗಳನ್ನು ವಸ್ತುಗಳನ್ನು ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ದಿನಗೂಲಿ […]

ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]