ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

Tuesday, September 12th, 2023
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ವಿಟ್ಲ : ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ರವರು ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2015ರ ಅ.1ರಂದು ತನ್ನದೇ ಊರಿನ 19 ವರ್ಷ ಪ್ರಾಯದ ಎಂಡೋಸಲ್ಫಾನ್ ಪೀಡಿತೆಯನ್ನು ಆರೋಪಿ ರಾಜೇಶ್ ಅತ್ಯಾಚಾರವೆಸಗಿದ್ದನೆಂದು ಆರೋಪಿಸಿ ಪ್ರಕರಣ […]

ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, September 9th, 2021
Bommai

ಬೆಂಗಳೂರು : ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ.ಮುತ್ತುರಾಮನ್ ಅವರ ನೇತೃತ್ವದ ನಿಯೋಗದೊಂದಿಗೆ ಅವರು ಇಂದು ಮಾತನಾಡುತ್ತಿದ್ದರು. ಅತಿ ಹೆಚ್ಚು ತಲಾ ಆದಾಯ ಹೊಂದಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಈ ಕೊಡುಗೆ ನೀಡುವುದು ಶೇ.30 ರಷ್ಟು ಮಹಿಳೆಯರು ಪರಿಶಿಷ್ಟ ಸಮುದಾಯದವರಾಗಿದ್ದು, ಕೌಶಲ್ಯವನ್ನು ಹೊಂದಿದವರಾಗಿದ್ದಾರೆ ಎಂದರು. […]

ಪರಿಶಿಷ್ಟ ಜಾತಿಯ ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಏರಿಕೆ

Monday, August 9th, 2021
kota Srinivasa Poojary

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ […]

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ 26,005.01 ಕೋಟಿ ರೂ. ಅನುದಾನ ಬಿಡುಗಡೆ

Friday, July 2nd, 2021
CM sc-st meeting

ಬೆಂಗಳೂರು :  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾಯ್ದೆಯನ್ವಯ ರಾಜ್ಯ ಅಭಿವೃದ್ದಿ ಪರಿಷತ್ ಸಭೆ ನಡೆಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. 2021-22 ನೇ ಸಾಲಿನ ಆಯವ್ಯಯ ಹಂಚಿಕೆ ವಿವರ 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ 18,331.54 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 7673.47 ಕೋಟಿ ರೂ.ಗಳು […]

ಮೀಸಲಾತಿ ಗೊಂದಲಕ್ಕೆ ಕೇಂದ್ರ ಕಾರಣ : ಕಾಂಗ್ರೆಸ್ ಆರೋಪ; ಫೆ.16 ರಂದು ಮಡಿಕೇರಿಯಲ್ಲಿ ಪ್ರತಿಭಟನೆ

Friday, February 14th, 2020
manjunath

ಮಡಿಕೇರಿ : ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ಇರುವುದರಿಂದಲೇ ಈ ರೀತಿಯ ತೀರ್ಪು ಹೊರ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಫೆ16 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ […]

7 ಪರಿಶಿಷ್ಟ ಜಾತಿ ಕುಟುಂಬಗಳಿಗೆ ಭೂ ದಾಖಲೆ ವಿತರಣೆ

Thursday, February 11th, 2016
land Document

ಬದಿಯಡ್ಕ: ಜಿಲ್ಲಾಧಿಕಾರಿಗಳು ಪಾಲ್ಗೊಂಡ ಅದಾಲತ್ ನಲ್ಲಿ ಭೂದಾಖಲೆಗಳು ಇಲ್ಲದ 7 ಪರಿಶಿಷ್ಟ ಜಾತಿ ಕುಟುಂಬಗಳಿಗೆ ಭೂ ದಾಖಲೆಗಳನ್ನು ವಿತರಿಸಲಾಯಿತು. ಕುಟುಂಬಶ್ರೀ ಜಿಲ್ಲಾ ಮಿಶನ್ ಹಾಗೂ ಜಿಲ್ಲಾಡಳಿತಗಳ ನೇತೃತ್ವದಲ್ಲಿ ಬುಧವಾರ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಾಡು,ಪೆರಿಯಡ್ಕ,ಮಾರ್ಪನಡ್ಕ,ಕಾಡಮನೆ,ಪೆರಡಾಲ,ಮುಂಡಿತ್ತಡ್ಕ ಕಾಲೊನಿಗಳ ನೂರಾರು ಜನರು ಪಾಲ್ಗೊಂಡ ಕಾರ್ಯಕ್ರಮದಲ್ಲಿ 10ಮಂದಿಗೆ ಮನೆ ನಿರ್ಮಾಣ,ಚಿಕಿತ್ಸಾ ಸಹಾಯ ಹಾಗೂ 11 ನೂತನ ಆಧಾರ್ ಕಾರ್ಡ್‌ಗಳನ್ನು ಜಿಲ್ಲಾಧಿಕಾರಿಗಳು ವಿತರಿಸಿದರು.ಕಾರ್ಯಕ್ರಮದಲ್ಲಿ 150 ದೂರುಗಳನ್ನು ಪರಿಹರಿಸಲಾಯಿತು.ಜೊತೆಗೆ ಹೊಸತಾದ 70 ದೂರುಗಳನ್ನು ಸ್ವೀಕರಿಸಲಾಯಿತು. ಬದಿಯಡ್ಕ […]

ಪರಿಶಿಷ್ಟರ ಮೇಲೆ 54 ದೌರ್ಜನ್ಯ ಪ್ರಕರಣಗಳು ದಾಖಲು-10.75 ಲಕ್ಷ ಪರಿಹಾರ

Wednesday, April 1st, 2015
DC

ಮಂಗಳೂರು ; ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳವರ ಮೇಲೆ ಜಿಲ್ಲೆಯಲಿ 2014-15ನೇ ಸಾಲಿನಲ್ಲಿ ಒಟ್ಟು 54 ವಿವಿಧ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಒಟ್ಟು ರೂ.10.75.000/- ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ ಕುಮಾರ್ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಮಾಹಿತಿ ನೀಡಿದರು. ಮಂಗಳೂರಿನಲ್ಲಿ 13 ಪ್ರಕರಣಗಳು ದಾಖಲಾಗಿದ್ದು 11 ಪ್ರಕರಣಗಳೆಗೆ ಚಾರ್ಜ್‌ಶೀಟ್ ಆಗಿದೆ, ಬಂಟ್ವಾಳದಲ್ಲಿ 12 ಪ್ರಕರಣ ಇದರಲ್ಲಿ […]

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು ಸುಸ್ಥಿತಿಯಲ್ಲಿ- ಎಂ.ಶಿವಣ್ಣ

Saturday, August 24th, 2013
dalit

ಮಂಗಳೂರು  :  ಇತರೆ ರಾಜ್ಯಗಳು ಹಾಗೂ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸುತ್ತಿರುವ ಹಾಸ್ಟೆಲ್ ಗಳು  ಅತ್ಯುತ್ತಮವಾಗಿವೆಯೆಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರಾದ ಮಾನ್ಯ ಶ್ರೀ ಎಂ.ಶಿವಣ್ಣ ಅವರು ತಮ್ಮ ಅಭಿಪ್ರಾಯ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಸಂವಿಧಾನಾತ್ಮಕವಾಗಿ ವಿವಿಧ ಇಲಾಖೆಗಳ ಮುಖೇನ ನೀಡಲಾಗಿರುವ ವಿವಿಧ ಸವಲತ್ತುಗಳ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 32 ವಿದ್ಯಾರ್ಥಿ ನಿಲಯಗಳು ಸಮಾಜ […]

ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಪರಿಶಿಷ್ಟ ಜಾತಿ/ ಪಂಗಡದವರ ದೌರ್ಜನ್ಯ ತಡೆ ಸಭೆ

Monday, September 5th, 2011
SC ST Meeting / ಪರಿಶಿಷ್ಟ ಜಾತಿ ಪಂಗಡದವರ ದೌರ್ಜನ್ಯ ತಡೆ ಸಭೆ

ಮಂಗಳೂರು : ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಾಬೂರಾಮ್‌ ಅಧ್ಯಕ್ಷತೆಯಲ್ಲಿ ರವಿವಾರ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪಂಗಡದವರ ದೌರ್ಜನ್ಯ ತಡೆ ಕುರಿತಾಗಿ ಸಭೆ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿಯ ಅಂಬೇಡ್ಕರ್‌ ಭವನವನ್ನು ಸಾರ್ವಜನಿಕ ಕಾರ್ಯಕ್ರಮ ನಡೆಸಲು ದಲಿತರಿಗೆ ಬಿಟ್ಟು ಕೊಡಬೇಕು ಅಥವಾ ಅಂಬೇಡ್ಕರ್‌ ಭವನ ನಿರ್ಮಿಸಲು ಪರ್ಯಾಯ ಜಾಗ ಒದಗಿಸಬೇಕು ಎಂದು ಒತ್ತಾಯಿಸಲಾಯಿತು. ಉಪ್ಪಿನಂಗಡಿಯಲ್ಲಿ ಅಂಬೇಡ್ಕರ್‌ ಭವನ 1983 – 84ರಲ್ಲಿ ಸ್ಥಾಪಿಸಲಾಗಿದೆ. 2000 ಇಸವಿ ಬಳಿಕ ಇಲ್ಲಿ ಕಾಲೇಜು ಆರಂಭವಾಗಿದ್ದು ಕಾಲೇಜಿನವರು 35,000 ರೂ. ಖರ್ಚು ಮಾಡಿ […]

ಉದ್ಯೋಗಿನಿ ಮಾಹಿತಿ ಶಿಬಿರದ ಸಮಾರೋಪ

Wednesday, November 10th, 2010
ಉದ್ಯೋಗಿನಿ ಮಾಹಿತಿ ಶಿಬಿರ

ಮಂಗಳೂರು: ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ವತಿಯಿಂದ ಉರ್ವಾ ಸಮುದಾಯಭವನದಲ್ಲಿ ನವೆಂಬರ್ 8 ರಿಂದ ಮೂರು ದಿನಗಳ ಕಾಲ ನಡೆದ ಉದ್ಯೋಗಿನಿ ಮಾಹಿತಿ ಶಿಬಿರದ ಸಮಾರೋಪ ಇಂದು ಸಂಜೆ ನಡೆಯಿತು. ಸಮಾರೋಪ ಭಾಷಣದಲ್ಲಿ ಮಾತನಾಡಿದ ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಕೌಶಲ್ ರವರು ನಮ್ಮ ಬ್ಯಾಂಕ್ ಸಂಘಟನೆಗಳ ಮೂಲಕ ಬದುಕನ್ನು ರೂಪಿಸಿಕೊಳ್ಳುವಲ್ಲಿ ನಿರತರಾದ ಕಾರ್ಯಕರ್ತರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ.  ಉದ್ಯೋಗಿನಿ ಮೂಲಕ ನಮ್ಮ ಶಾಖೆ ಪರಶಿಷ್ಟರಿಗೆ ಉದ್ಯೋಗ ನೀಡಲು ಸದಾ […]