ರಸ್ತೆ ಅಫಘಾತ : ಮೃತ ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಹಸ್ತಾಂತರ

Sunday, August 8th, 2021
noor

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ವಾಹನ ಅಪಘಾತದಲ್ಲಿ ಮೃತರಾಗಿದ್ದರು. ಅವರ ಕುಟುಂಬಕ್ಕೆ ಇದೀಗ 25 ಲಕ್ಷ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದೆ. ಒಮಾನ್‌ ದೇಶದ ಮಬೇಲದಲ್ಲಿ 2 ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ತೀರಾ ಬಡಕುಟುಂಬದ ಯುವಕ ಬೆಳ್ತಂಗಡಿ ತಾಲೂಕಿನ ಸುನ್ನತ್‌ ಕೆರೆ ನಿವಾಸಿ ನೂರ್‌ ಮುಹಮ್ಮದ್‌ (25) ಅವರು “ಮಸ್ಕತ್‌ ವಾಟರ್‌’ ಬಾಟಲಿ ನೀರು ಕಂಪೆನಿಯಲ್ಲಿ ಸೇಲ್ಸ್‌ಮನ್‌ ಆಗಿ ಉದ್ಯೋಗಕ್ಕೆ ಸೇರಿಕೊಂಡಿದ್ದರು. 2019ರ ಮೇ 11ರಂದು ಸಂಭವಿಸಿದ ವಾಹನ ಅಪಘಾತದಲ್ಲಿ ಅವರು ಮತ್ತು ಚಾಲಕ […]