ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

Friday, September 29th, 2023
ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

ಮುಲ್ಕಿ: ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಯುವಕನ ವಯಸ್ಸು ಸುಮಾರು 19 ರಿಂದ 20 ವರ್ಷದ ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ […]

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ನೂತನ ಮೇಳ 27ರಿಂದ ಆರಂಭ

Saturday, October 17th, 2020
Patla Mela

ಮಂಗಳೂರು: ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ನೂತನ ಮೇಳ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಪ್ರದರ್ಶನದೊಂದಿಗೆ ಉದ್ಘಾಟನೆಗೊಳ್ಳಲಿದೆ. ನವೆಂಬರ್‌ 27ರಿಂದ ಮೇಳ ತಿರುಗಾಟ ಆರಂಭಿಸಲಿದೆ. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಶಶೀಂದ್ರ ಕುಮಾರ್ ಮಾತನಾಡಿ, ನಮ್ಮ ಕ್ಷೇತ್ರದ ವತಿಯಿಂದ ಈ ಬಾರಿಯಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಎಂಬ ನೂತನ ಯಕ್ಷಗಾನ ಮೇಳ ತಿರುಗಾಟ ನಡೆಸಲಿದೆ. ಅಕ್ಟೋಬರ್ 26 ವಿಜಯದಶಮಿ‌ಯಂದು […]

ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಸವಾರ ಲಾರಿಯ ಅಡಿಗೆ ಬಿದ್ದು ಸಾವು

Saturday, August 4th, 2018
Raveendra Nayak

ಹಳೆಯಂಗಡಿ : ಪಾವಂಜೆ ಬಳಿ ಶನಿವಾರ ಬೆಳಗ್ಗೆ 8.30ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ. ರವೀಂದ್ರ ನಾಯಕ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರವೀಂದ್ರ ನಾಯಕ್ ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸುರತ್ಕಲ್ ನ […]

ಪಾವಂಜೆ ಯಲ್ಲಿ ತುಳುನಾಡ ಕೃಷಿ ಜನಪದೋತ್ಸವ

Monday, July 15th, 2013
tulunad krishi

ಮಂಗಳೂರು : ಪಾವಂಜೆ ಶ್ರೀ ಜನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಅಯೋಜಿಸಲಾದ  ತುಳುನಾಡ ಕೃಷಿ ಜನಪದೋತ್ಸವದ ಉದ್ಘಾಟನೆಯನ್ನು ಶನಿವಾರ ಉದ್ಯಮಿ ರಘುನಾಥ ಸೋಮಯಾಜಿ ಅವರು ನೆರವೇರಿಸಿದರು. ಪಾವಂಜೆ ಯಲ್ಲಿ ಎರಡು ದಿನಗಳ ಕಾಲ ನಡೆಯುವ  4ನೇ ವರ್ಷದ ಜನಪದೋತ್ಸವದ ಉದ್ಘಾಟನೆ ಬಳಿಕ ಮಾತನಾಡಿದ ಅವರು ಮಣ್ಣಿನ ಹಾಗೂ ಕೆಸರಿನ ಬಗ್ಗೆ ಯುವಜನರಲ್ಲಿರುವ ಕೀಳರಿಮೆಯನ್ನು ಹೋಗಲಾಡಿಸಿ, ಅವರನ್ನು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಸಮಾಜ ಕಟ್ಟಲು ಕೆಸರುಗದ್ದೆ ಪ್ರೇರಣೆಕೊಡುತ್ತದೆ ಎಂದು ಸೋಮಯಾಜಿ ತಿಳಿಸಿದರು. ಕೊಯ್‌ಕುಡೆ ಹರಿಪಾದೆಯ […]