ಕೋವಿಡ್ ಪ್ರಕರಣಗಳು ಅಗೋಸ್ಟ್ 24 : ದ.ಕ. 273, 4 ಸಾವು, ಉಡುಪಿ 128, 1 ಸಾವು

Tuesday, August 24th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 273 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. 265 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,08,466 ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಈಗಾಗಲೇ 1,04,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,542 ಮಂದಿ ಸಾವಿಗೀಡಾಗಿದ್ದು, ಪ್ರಸ್ತುತ 2,890 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 85,674 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಇದುವರೆಗೆ ದಾಖಲಾಗಿದ್ದು, ಒಟ್ಟು 1,04,21,720 ರೂ. ದಂಡ ವಸೂಲಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ […]

ಕೊರೋನ ಸೋಂಕು ಜೂನ್ 5 : ದಕ್ಷಿಣ ಕನ್ನಡ 609 – 5 ಸಾವು, ಉಡುಪಿ 494 – 2 ಸಾವು

Sunday, June 6th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 80,080ಕ್ಕೇರಿದೆ. 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 950ಕ್ಕೇರಿದೆ. ಭಾನುವಾರ 862 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 71,580ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,550 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,71,018 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 272 ಮಂದಿಗೆ ಕೊರೋನಾ ಸೋಂಕು ಪತ್ತೆ

Monday, April 19th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ರವಿವಾರ 131 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ 744 ಮಂದಿ ಬಲಿಯಾಗಿದ್ದಾರೆ. ದ. ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 38,143 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1,764 ಸಕ್ರಿಯ  ಕೇಸ್ ಗಳಿವೆ. ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 622 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 37,372 ಮಂದಿ ಗೆ ಸೋಂಕು ದೃಢಪಟ್ಟಿದೆ.

ಕೊರೊನಾ ಸೊಂಕು : ದಕ್ಷಿಣ ಕನ್ನಡ 334, ಉಡುಪಿ 254

Monday, August 31st, 2020
CORONA

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 334 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12443ಕ್ಕೆ ಏರಿಕೆಯಾಗಿದೆ. ರವಿವಾರ ಮತ್ತೆ 213 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 9422ಕ್ಕೆ ಏರಿಕೆಯಾಗಿದೆ. ಇನ್ನು 2665 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಆ. 30ರಂದು ಮತ್ತೆ 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 356ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 82770 […]

ಕೊರೋನಾ ಸೋಂಕು ಆಗಸ್ಟ್ 6 : ದಕ್ಷಿಣ ಕನ್ನಡ 173, ಸಾವು 11, ಉಡುಪಿ ಜಿಲ್ಲೆ 217, ಸಾವು 6

Friday, August 7th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ  173 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ […]

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢ

Tuesday, August 4th, 2020
Siddaramaiah

ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಯಡಿಯೂರಪ್ಪಕೊರೋನಾ ಪಾಸಿಟಿವ್ ಆದ ಬೆನ್ನಲ್ಲೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ […]

ಕೊರೋನಾ : ಧಾರವಾಡ ಜಿಲ್ಲೆ 191ಸೋಂಕು ಪತ್ತೆ, ಬಲಿ 8

Tuesday, August 4th, 2020
corona positive

ಧಾರವಾಡ : ಸೋಮವಾರ ಜಿಲ್ಲೆಯಲ್ಲಿ 191 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದರ ಜೊತೆಗೆ ಕೋವಿಡ್‌ಗೆ ಮತ್ತೆ 8 ಜನ ಸೋಂಕಿತರು ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 155ಕ್ಕೆ ಏರಿದೆ. 191 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4644 ಕ್ಕೆ ಏರಿಕೆ ಕಂಡರೆ 88 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಗುಣಮುಖರಾದವರ ಸಂಖ್ಯೆ 2152ಕ್ಕೆ ಏರಿದೆ. ಇದರಿಂದ ಈಗ ಜಿಲ್ಲೆಯಲ್ಲಿ 2347 ಪ್ರಕರಣಗಳು ಸಕ್ರಿಯವಾಗಿದ್ದು, 37 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ಕೊರೊನಾ ಸೋಂಕು ಜುಲೈ 21 : ದಕ್ಷಿಣ ಕನ್ನಡ ಜಿಲ್ಲೆ 149, ಉಡುಪಿ ಜಿಲ್ಲೆ 84

Wednesday, July 22nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 […]

ಕೋರೊನಾ ಸೋಂಕಿತರ ಜತೆ ವೈದ್ಯರ ಬ್ಯಾಡ್ಮಿಂಟನ್

Tuesday, July 21st, 2020
badminton

ಹುಬ್ಬಳ್ಳಿ: ಕೊರೊನಾ ವೈರಸ್ ರೋಗಿಗಳನ್ನು ಕೊವಿಡ್ ಕೇಂದ್ರಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಅನೇಕ ಘಟನೆಗಳು ನಡೆದಿವೆ. ಇಂತಹದ ನಡುವೆ ಕೊವಿಡ್ ರೋಗಿಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿರುವ ವೈದ್ಯರು ಹಾಗೂ ಆಸ್ಪತ್ರೆಗಳ ಸಹ ಗಮನ ಸೆಳೆಯುತ್ತಿದೆ. ಹುಬ್ಬಳ್ಳಿಯ ಕೊರೊನಾ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳ ಜೊತೆ ಸ್ವತಃ ವೈದ್ಯರು ಬ್ಯಾಡ್ಮಿಂಟನ್ ಆಟ ಆಡುತ್ತಿದ್ದಾರೆ. ಕೊವಿಡ್ ರೋಗಿಗಳು ಮತ್ತು ವೈದ್ಯರು ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಕೊವಿಡ್ […]