ಮಗಳನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

Saturday, June 19th, 2021
gayatri

ಮೈಸೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ತನ್ನ ತಂದೆಗೆ ಊಟ ಕೊಂಡುಹೋಗಿದ್ದ ಮಗಳನ್ನು ತಂದೆಯೇ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಗಾಯತ್ರಿ (19) ಕೊಲೆಯಾದ ಯುವತಿ. ತಂದೆ ಜಯರಾಂನಿಂದಲೇ ಮರ್ಯಾದೆ ಹತ್ಯೆಯಾಗಿದೆ. ಮಗಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದರಿಂದ ಸಮಾಜದಲ್ಲಿ ತಲೆತಗ್ಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ವಿಷಯವಾಗಿ ಒಂದು ತಿಂಗಳಿನಿಂದ ಮನೆಯಲ್ಲಿ ಪೋಷಕರು ಮತ್ತು ಯುವತಿಯ ನಡುವೆ ಗಲಾಟೆ ನಡೆಯುತ್ತಿತ್ತು. ಈಕೆ ಪಟ್ಟಣದ ಉಪ್ಪಾರಗೇರಿ ಬಡಾವಣೆಯ ಯುವಕನನ್ನು […]

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

Thursday, November 21st, 2019
ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ. ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್‌ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್‌ಗೆ ಸ್ಕ್ರೀನ್‌ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು […]

ಮೈಸೂರು : ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ; ಓರ್ವ ಪರಾರಿ

Saturday, October 26th, 2019
ane-danta

ಮೈಸೂರು : ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ. ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು, ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ 20 ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಬಂಧಿತರು […]