ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟಿಸಿದ : ಪಿ.ವಿ.ಸಿಂಧು
Wednesday, October 2nd, 2019ಮೈಸೂರು : ಕ್ರೀಡಾಪಟುಗಳು ಪಿ.ವಿ.ಸಿಂಧು ಅವರನ್ನು ಮಾದರಿಯಾಗಿಸಿಕೊಂಡು ಪರಿಶ್ರಮದಿಂದ ಯಶಸ್ಸು ಸಾಧಿಸಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ದಸರಾ ಕ್ರೀಡಾಕೂಟ ಹಾಗೂ ಮುಖ್ಯಮಂತ್ರಿ ಕಪ್ – 2019 ಉದ್ಘಾಟಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಪಿ.ವಿ.ಸಿಂಧು ಮಾತನಾಡಿ, ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಎಲ್ಲ ಕ್ರೀಡಾಪಟುಗಳೂ ಕಠಿಣ ಪರಿಶ್ರಮದಲ್ಲಿ ತೊಡಗುವ ಮೂಲಕ ತಮ್ಮ ಗುರಿ ತಲುಪಿ ಎಂದು ಸಲಹೆ ನೀಡಿದರು. […]