ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಹಾಕಿ ಪ್ರವೇಶ, ನಾಲ್ವರ ಬಂಧನ

Wednesday, November 3rd, 2021
Karinja Temple

ಬಂಟ್ವಾಳ: ಚಪ್ಪಲಿ ಹಾಕಿಕೊಂಡು ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ  ಬಂಧಿಸಿದ್ದಾರೆ. ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಡಿಗೇಡಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ […]

ಕೊಡ್ಯಮಲೆ ಗುಡ್ಡೆಯಲ್ಲಿ ಯುವಕನನ್ನು ಕಡಿದು ಕೊಲೆ ಮಾಡಿದ ಆರೋಪಿ ಪೊಲೀಸರಿಗೆ ಶರಣು

Monday, September 13th, 2021
rafiq murder

ಬಂಟ್ವಾಳ : ಕಕ್ಯೆಪದವು ಕೊಡ್ಯಮಲೆ ಗುಡ್ಡೆಯಲ್ಲಿ ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ರಫೀಕ್ (26) ಎಂಬಾತ ಕೊಲೆಯಾದ ಯುವಕನಾಗಿದ್ದಾನೆ. ಕಕ್ಯೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಆರೋಪಿ ಸಿದ್ಧಿಕ್ ಪುಂಜಾಲಕಟ್ಟೆ ಠಾಣೆಗೆ ಹಾಜರಾಗಿ ಪೊಲೀಸರಿಗೆ ಶರಣಾಗಿದ್ದಾನೆ. ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಪುಂಜಾಲಕಟ್ಟೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಪ್ರಾಪ್ತ ಮಗನನ್ನು ಕಡಿದು ಕೊಲೆಗೈದು, ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ತಂದೆ

Wednesday, June 23rd, 2021
Sathwik

ಪುಂಜಾಲಕಟ್ಟೆ :  ಬಾಡಿಗೆ ಮನೆಯಲ್ಲಿ ವಾಸವಿದ್ದ ತಂದೆಯೊಬ್ಬ  ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಬುಧವಾರ ನಡೆದಿದೆ. ಬಾಬು ನಾಯ್ಕ (58) ತನ್ನ ಪುತ್ರ ಸಾತ್ವಿಕ್ (15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.  ಘಟನೆ ವೇಳೆ ಬಾಬು ನಾಯ್ಕನ ಪತ್ನಿ […]

ವೀಕೆಂಡ್‌ ಕರ್ಫ್ಯೂ ನಡುವೆಯೇ ವಿವಾಹ : ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹಕ್ಕೆ ಪೊಲೀಸರ ಬೆಂಬಲ

Sunday, April 25th, 2021
Tungappa Bangera

ಬೆಳ್ತಂಗಡಿ :  ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ವೀಕೆಂಡ್‌ ಕರ್ಫ್ಯೂ ಮತ್ತು ಇತರ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 25 ರ ಭಾನುವಾರ ಆಯೋಜಿಸಲಾಗಿದೆ. ಪುಂಜಾಲಕಟ್ಟೆಯ ಪೊಲೀಸ್‌ ಠಾಣೆಯ ಸಮೀಪದಲ್ಲೇ ಇನ್ನು ಈ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಜನರು ಸೇರಿ ಕೊರೊನಾ ಉಲ್ಲಂಘನೆ ಯಾಗುತ್ತಿದ್ದರೂ ಕೂಡಾ ಪೊಲೀಸರು ಮಧ್ಯಪ್ರವೇಶ ಮಾಡಿಲ್ಲ. ಸಾಮಾನ್ಯ ಜನರ ವಿರುದ್ದ ಪ್ರಕರಣ […]

ಬಿ.ಸಿ.ರೋಡು-ಪುಂಜಾಲಕಟ್ಟೆಯಲ್ಲಿ ಹೆದ್ದಾರಿಗೆ ಕುಸಿಯುತ್ತಿರುವ ಗುಡ್ಡಗಳು

Wednesday, September 2nd, 2020
poonjalakatte Road

ಬಂಟ್ವಾಳ : ಬಿ.ಸಿ.ರೋಡು-ಪುಂಜಾಲಕಟ್ಟೆ 19.85 ಕಿ.ಮೀ.ಹೆದ್ದಾರಿ ಅಭಿವೃದ್ಧಿಗಾಗಿ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಭೂಸ್ವಾಧೀನ ಪಡಿಸಲಾದ ಪ್ರದೇಶಗಳನ್ನು ಅಗೆದು ರಸ್ತೆ ನಿರ್ಮಿಸಲಾದ ನಾವೂರು ಗ್ರಾಮದ ಬಡಗುಂಡಿ ಪ್ರದೇಶಗಳಲ್ಲಿ ಹೆದ್ದಾರಿ ಸುಮಾರು 50 ಅಡಿ ಎತ್ತರದ ಗುಡ್ಡಗಳು ಕುಸಿಯಲಾರಂಭಿಸಿದೆ. ಹೆದ್ದಾರಿಯಲ್ಲಿ ಧರ್ಮಸ್ಥಳ ಭಾಗಕ್ಕೆ ತೆರಳುವ ಬಸ್ಸುಗಳು ಸೇರಿದಂತೆ ಸಾವಿರಾರು ವಾಹನಗಳು ರಾತ್ರಿ-ಹಗಲು ಸಂಚರಿಸುತ್ತಿದ್ದು, ಒಂದು ವೇಳೆ ವಾಹನಗಳು ಸಾಗುವ ವೇಳೆ ಈ ಗುಡ್ಡ ಕುಸಿತವಾದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಗುಡ್ಡದ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಮರಗಳು ಕೂಡ ಇದ್ದು, ಮಳೆಯ ಕಾರಣದಿಂದ ಮರಗಳು […]

ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು

Thursday, July 9th, 2020
poonjalkatte-police

ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಆಶಾ ಕಾರ್ಯಕರ್ತೆ ಕರ್ತವ್ಯ ನಿರ್ವಹಿಸುವಾಗ ಗುರುವಾರ ಘಟನೆ ಸಂಭವಿಸಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ಅವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ […]

ಇಸ್ಪೀಟ್‌ ಚಟಕ್ಕೆ ಬಿದ್ದು ತನ್ನ ಮನೆಯಿಂದಲೇ ಕಳ್ಳತನ ಮಾಡಿ ಪೊಲೀಸರ ಅತಿಥಿಯಾದ

Wednesday, April 24th, 2019
poonjal katte

ಪುಂಜಾಲಕಟ್ಟೆ : ಇಸ್ಪೀಟ್‌ ಚಟಕ್ಕೆ ಬಿದ್ದ ತನ್ನ ಮನೆಯಿಂದಲೇ  ಕಳ್ಳತನವೆಸಗಿ ಆತನೇ ಪೊಲೀಸರ ಅತಿಥಿಯಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಗಂಪದಡ್ಡದಲ್ಲಿ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಏ.19ರಂದು ಸಾದಿಕ್‌ (30) ಎಂಬಾಂತ ಪೊಲೀಸರಿಗೆ ದೂರು ನೀಡಿದ್ದ.  ಅಂದು ಯೂಸುಬ್‌ ಬ್ಯಾರಿಯ ಮನೆಯವರು ಹಾಗೂ ಸಂಬಂಧಿಕರಾದ ನೆರೆಮನೆಯವರು ವಿವಾಹ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದರು. ಆದರೆ ಸಂಜೆ ವೇಳೆಗೆ ಮನೆಗೆ ಹಿಂದಿರುಗಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಕಂಡುಬಂದಿದೆ. ಕಪಾಟನ್ನು ಒಡೆದು ಒಳಗಿದ್ದ ಚಿನ್ನದ ಒಡವೆಗಳು ಹಾಗೂ ನಗದನ್ನು ಕಳವು ಮಾಡಲಾಗಿತ್ತು. ಇಸ್ಪೀಟ್‌ ಚಟಕ್ಕೆ […]

ಪುಂಜಾಲಕಟ್ಟೆಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Friday, August 10th, 2018
police

ಮಂಗಳೂರು: ಜಾನುವಾರುಗಳನ್ನು ಕಳ್ಳತನ ಮಾಡಿ, ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿರುವವರನ್ನು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಪುಂಜಾಲಕಟ್ಟೆಯ ಸೊಣಂದೂರು ಅಡ್ತಿಳ ಎಂಬಲ್ಲಿ ನಡೆದಿದೆ. ಮಂಗಳೂರು ಜಿಲ್ಲಾ ಡಿಸಿಐಬಿ ಪೊಲೀಸರ ತಂಡ ಈ ಸಾಹಸ ಮೆರೆದಿದೆ. ಈ ಸಂದರ್ಭದಲ್ಲಿ ವಾಹನವನ್ನು ಆರೋಪಿಗಳು ಸ್ಥಳದಲ್ಲಿಯೇ ಬಿಟ್ಟು ಸಾಗಾಟದ ಸಮಯದಲ್ಲಿ ಬೆಂಗಾವಲಿಗಿದ್ದ ವಾಹನದಲ್ಲಿ ಪರಾರಿಯಾಗಿದ್ದಾರೆ. ಅಕ್ರಮ ಜಾನುವಾರು ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದ ಡಿಸಿಐಬಿ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಮೀಪ ಗಸ್ತಿನಲ್ಲಿದ್ದರು. ಈ ಸಂದರ್ಭದಲ್ಲಿ […]